<p><strong>ಬೆಂಗಳೂರು:</strong> ನಗರ ಪ್ರದೇಶದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ವಸತಿ, ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ನಿಯಮಾವಳಿ ರೂಪಿಸಲಾಗುತ್ತಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.<br /> <br /> ವಸತಿ ಉದ್ದೇಶದ ಕಟ್ಟಡಗಳಾದರೆ ಶೇ 50ರವರೆಗೆ ಹಾಗೂ ವಾಣಿಜ್ಯ ಉದ್ದೇಶದ ಕಟ್ಟಡಗಳಾದರೆ ಶೇ 30ರವರೆಗೆ ನಕ್ಷೆ ಉಲ್ಲಂಘನೆ ಮಾಡಿದ್ದರೆ ದಂಡ ವಿಧಿಸಿ ಸಕ್ರಮಗೊಳಿಸಲು ನಿಯಮಾವಳಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಅಕ್ರಮ– ಸಕ್ರಮ ಜಾರಿ ಸಂಬಂಧ ರಾಜ್ಯಪಾಲರು ಈ ಮೊದಲೇ ಸುಗ್ರಿವಾಜ್ಞೆ ಹೊರಡಿಸಿದ್ದರು. ಈಚೆಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ನಿಯಮಾವಳಿಯಲ್ಲಿ ದಂಡದ ಪ್ರಮಾಣವನ್ನು ತಿಳಿಸಲಾಗುವುದು ಎಂದರು.<br /> <br /> 2013 ಅಕ್ಟೋಬರ್ 19ರವರೆಗೆ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ಇದೆ. ಅಕ್ರಮ – ಸಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿದೆ. ನ್ಯಾಯಾಲಯ ಹಿಂದೆ ನೀಡಿದ್ದ ಆದೇಶದಂತೆ ನಿಯಮಾವಳಿ ರೂಪಿಸಿ ಪ್ರಮಾಣ ಪತ್ರ ಸಲ್ಲಿಸಲಾಗುವುದು. ನ್ಯಾಯಾಲಯದ ಒಪ್ಪಿಗೆ ದೊರೆತ ನಂತರ ಅನುಷ್ಠಾನವಾಗಲಿದೆ.</p>.<p>ನಿಯಮಾವಳಿ ರೂಪಿಸಿದ ನಂತರ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗುವುದು. ಭೂಮಿಯ ಮಾರುಕಟ್ಟೆ ದರ ಆಧರಿಸಿ ದಂಡದ ಪ್ರಮಾಣವನ್ನು ನಿಗದಿ ಮಾಡಲಾಗುವುದು. ಹೀಗೆ ಸಂಗ್ರಹವಾಗುವ ಹಣವನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಉತ್ತರಿಸಿದರು.<br /> <br /> <strong>ಸಿಬಿಐಗೆ ಪತ್ರ: ಸಚಿವ ಸೊರಕೆ</strong><br /> ರಾಮನಗರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಾಗಿದ್ದು, ಈ ಸಂಬಂಧ ಸಿಬಿಐಗೆ ಪತ್ರ ಬರೆಯಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಡೆಯುವ ಭೂ ಮಾಫಿಯಾಗೆ ಕಡಿವಾಣ ಹಾಕಲಾಗುವುದು ಎಂದು ಸಚಿವ ಸೊರಕೆ ಹೇಳಿದರು.</p>.<p>ರಾಮನಗರ, ಚನ್ನಪಟ್ಟಣ ಮತ್ತು ಬಿಡದಿ ಸೇರಿಸಿ ಮಹಾನಗರ ಪಾಲಿಕೆ ರಚಿಸುವುದು, ಮಂಡ್ಯ, ಮದ್ದೂರು ಶ್ರೀರಂಗಪಟ್ಟಣ ಸೇರಿಸಿ ಮತ್ತೊಂದು ಪಾಲಿಕೆ ರಚಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ಪ್ರದೇಶದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ವಸತಿ, ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ನಿಯಮಾವಳಿ ರೂಪಿಸಲಾಗುತ್ತಿದ್ದು, ಸದ್ಯದಲ್ಲೇ ಆದೇಶ ಹೊರಡಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.<br /> <br /> ವಸತಿ ಉದ್ದೇಶದ ಕಟ್ಟಡಗಳಾದರೆ ಶೇ 50ರವರೆಗೆ ಹಾಗೂ ವಾಣಿಜ್ಯ ಉದ್ದೇಶದ ಕಟ್ಟಡಗಳಾದರೆ ಶೇ 30ರವರೆಗೆ ನಕ್ಷೆ ಉಲ್ಲಂಘನೆ ಮಾಡಿದ್ದರೆ ದಂಡ ವಿಧಿಸಿ ಸಕ್ರಮಗೊಳಿಸಲು ನಿಯಮಾವಳಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ಅಕ್ರಮ– ಸಕ್ರಮ ಜಾರಿ ಸಂಬಂಧ ರಾಜ್ಯಪಾಲರು ಈ ಮೊದಲೇ ಸುಗ್ರಿವಾಜ್ಞೆ ಹೊರಡಿಸಿದ್ದರು. ಈಚೆಗೆ ನಡೆದ ವಿಧಾನಮಂಡಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ನಿಯಮಾವಳಿಯಲ್ಲಿ ದಂಡದ ಪ್ರಮಾಣವನ್ನು ತಿಳಿಸಲಾಗುವುದು ಎಂದರು.<br /> <br /> 2013 ಅಕ್ಟೋಬರ್ 19ರವರೆಗೆ ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳನ್ನು ಸಕ್ರಮಗೊಳಿಸಿಕೊಳ್ಳಲು ಅವಕಾಶ ಇದೆ. ಅಕ್ರಮ – ಸಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್ನಲ್ಲಿದೆ. ನ್ಯಾಯಾಲಯ ಹಿಂದೆ ನೀಡಿದ್ದ ಆದೇಶದಂತೆ ನಿಯಮಾವಳಿ ರೂಪಿಸಿ ಪ್ರಮಾಣ ಪತ್ರ ಸಲ್ಲಿಸಲಾಗುವುದು. ನ್ಯಾಯಾಲಯದ ಒಪ್ಪಿಗೆ ದೊರೆತ ನಂತರ ಅನುಷ್ಠಾನವಾಗಲಿದೆ.</p>.<p>ನಿಯಮಾವಳಿ ರೂಪಿಸಿದ ನಂತರ ಆಕ್ಷೇಪಣೆ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗುವುದು. ಭೂಮಿಯ ಮಾರುಕಟ್ಟೆ ದರ ಆಧರಿಸಿ ದಂಡದ ಪ್ರಮಾಣವನ್ನು ನಿಗದಿ ಮಾಡಲಾಗುವುದು. ಹೀಗೆ ಸಂಗ್ರಹವಾಗುವ ಹಣವನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಉತ್ತರಿಸಿದರು.<br /> <br /> <strong>ಸಿಬಿಐಗೆ ಪತ್ರ: ಸಚಿವ ಸೊರಕೆ</strong><br /> ರಾಮನಗರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಲಾಗಿದ್ದು, ಈ ಸಂಬಂಧ ಸಿಬಿಐಗೆ ಪತ್ರ ಬರೆಯಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ನಡೆಯುವ ಭೂ ಮಾಫಿಯಾಗೆ ಕಡಿವಾಣ ಹಾಕಲಾಗುವುದು ಎಂದು ಸಚಿವ ಸೊರಕೆ ಹೇಳಿದರು.</p>.<p>ರಾಮನಗರ, ಚನ್ನಪಟ್ಟಣ ಮತ್ತು ಬಿಡದಿ ಸೇರಿಸಿ ಮಹಾನಗರ ಪಾಲಿಕೆ ರಚಿಸುವುದು, ಮಂಡ್ಯ, ಮದ್ದೂರು ಶ್ರೀರಂಗಪಟ್ಟಣ ಸೇರಿಸಿ ಮತ್ತೊಂದು ಪಾಲಿಕೆ ರಚಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>