<p><strong>ಹೈದರಾಬಾದ್ (ಪಿಟಿಐ):</strong> ಕರ್ನಾಟಕ ಮೂಲದ ಸಾಫ್ಟ್ವೇರ್ ನೌಕರನೊಬ್ಬ ಇಲ್ಲಿನ ಸಿಂಗಪುರ ಟೌನ್ಶಿಪ್ನಲ್ಲಿನ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಹುಬ್ಬಳ್ಳಿಯ ದೀಪಕ್ ಎಂದು ಗುರುತಿಸಲಾಗಿದೆ. 33 ವರ್ಷದ ದೀಪಕ್ ಮೊದಲಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ನಂತರ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೆಂಗಳೂರಿನಿಂದ ವರ್ಗಾವಣೆಗೊಂಡು ನವೆಂಬರ್ 18ರಂದು ಇಲ್ಲಿನ ಸಾಫ್ಟ್ವೇರ್ ಸಂಸ್ಥೆಯೊಂದ ರಲ್ಲಿ ಸೇರಿಕೊಂಡಿದ್ದ ದೀಪಕ್, ನವೆಂಬರ್ 24ರಂದು ಅಣ್ಣೋಜಿ ಗುಡದ ಸಿಂಗಪುರ ಟೌನ್ಶಿಪ್ನಲ್ಲಿ ಮನೆಯನ್ನು ಬಾಡಿಗೆ ಪಡೆದಿದ್ದರು. ಅಲ್ಲಿ ಇವರು ಒಬ್ಬರೇ ವಾಸ<br /> ವಾಗಿದ್ದರು. ಎಂದು ಪೊಲೀಸ್ ಇನ್ಸ್ಪೆಕ್ಟರ್ ವಿವಿ ಚಲಪತಿ ತಿಳಿಸಿದ್ದಾರೆ.<br /> <br /> ಘಟನೆ ಸ್ಥಳದಲ್ಲಿ ಯಾವುದೇ ಪತ್ರ ಪತ್ತೆಯಾಗಿಲ್ಲ. ದೀಪಕ್ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಅವರಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಶೀಘ್ರವೇ ಅವರ ಆತ್ಮಹತ್ಯೆಗೆ ಕಾರಣವನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ಕರ್ನಾಟಕ ಮೂಲದ ಸಾಫ್ಟ್ವೇರ್ ನೌಕರನೊಬ್ಬ ಇಲ್ಲಿನ ಸಿಂಗಪುರ ಟೌನ್ಶಿಪ್ನಲ್ಲಿನ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಹುಬ್ಬಳ್ಳಿಯ ದೀಪಕ್ ಎಂದು ಗುರುತಿಸಲಾಗಿದೆ. 33 ವರ್ಷದ ದೀಪಕ್ ಮೊದಲಿಗೆ ತನ್ನ ಮಣಿಕಟ್ಟನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ನಂತರ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಬೆಂಗಳೂರಿನಿಂದ ವರ್ಗಾವಣೆಗೊಂಡು ನವೆಂಬರ್ 18ರಂದು ಇಲ್ಲಿನ ಸಾಫ್ಟ್ವೇರ್ ಸಂಸ್ಥೆಯೊಂದ ರಲ್ಲಿ ಸೇರಿಕೊಂಡಿದ್ದ ದೀಪಕ್, ನವೆಂಬರ್ 24ರಂದು ಅಣ್ಣೋಜಿ ಗುಡದ ಸಿಂಗಪುರ ಟೌನ್ಶಿಪ್ನಲ್ಲಿ ಮನೆಯನ್ನು ಬಾಡಿಗೆ ಪಡೆದಿದ್ದರು. ಅಲ್ಲಿ ಇವರು ಒಬ್ಬರೇ ವಾಸ<br /> ವಾಗಿದ್ದರು. ಎಂದು ಪೊಲೀಸ್ ಇನ್ಸ್ಪೆಕ್ಟರ್ ವಿವಿ ಚಲಪತಿ ತಿಳಿಸಿದ್ದಾರೆ.<br /> <br /> ಘಟನೆ ಸ್ಥಳದಲ್ಲಿ ಯಾವುದೇ ಪತ್ರ ಪತ್ತೆಯಾಗಿಲ್ಲ. ದೀಪಕ್ ಅವರ ಕುಟುಂಬಕ್ಕೆ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ಅವರಿಂದ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಶೀಘ್ರವೇ ಅವರ ಆತ್ಮಹತ್ಯೆಗೆ ಕಾರಣವನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>