<p>ಮಳವಳ್ಳಿ: ಮಹಿಳೆ ಮನೆಗೆಲಸಕ್ಕೂ ಸೈ, ಹೊರಗಿನ ಕೆಲಸಕ್ಕೂ ಸೈ ಎನ್ನುವುದನ್ನು ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಮಹಿಳೆಯರು ಸಾಬೀತು ಮಾಡಿದ್ದಾರೆ.<br /> <br /> ಗ್ರಾಮದ ಹೊರವಲಯದಲ್ಲಿರುವ ಕೆಂಪಣ್ಣನಕಟ್ಟೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೂಳು ತೆಗೆದು ಕಟ್ಟೆಗೆ ಮರು ಜೀವ ನೀಡಿದ್ದಾರೆ. 50 ಮಹಿಳೆಯರು ಸೇರಿ 20 ದಿನಗಳ ಕಾಲ ಕೆಲಸ ಮಾಡಿ ಹೂಳು ತೆಗೆದು ಸಂಪೂರ್ಣ ಸ್ವಚ್ಛ ಮಾಡಿದ್ದಾರೆ.<br /> <br /> ಈ ಕಟ್ಟೆಯಲ್ಲಿ ಮಾರ್ಚ್ 19ರಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಮಹಿಳಾ ಅಧಿಕಾರಿಗಳು, ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ಈ ಆಚರಣೆ ಮೂಲಕ ಶ್ರಮದಾನ ಮಾಡಿರುವವರಿಗೆ ಕೃತಜ್ಞತೆ ಸಲ್ಲಿಸಿದಂತೆಯೂ ಆಗುತ್ತದೆ ಎಂಬುದು ಸಂಘಟಕರ ಅಭಿಪ್ರಾಯ.<br /> <br /> ‘ಮಹಿಳೆಯರೇ ಸೇರಿ ಕೆರೆಯನ್ನು ಸ್ವಚ್ಛ ಮಾಡಿರುವುದು ವಿಶೇಷ. ಹೀಗಾಗಿ ಅರ್ಥಪೂರ್ಣವಾಗಿ ಕಟ್ಟೆಯಲ್ಲೇ ಮಹಿಳಾ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ’ ಎಂದು ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ದೇವಿ ತಿಳಿಸಿದರು.<br /> <br /> ಕಳೆದ ವರ್ಷ ಮಳೆ ಬಾರದೇ ಕೂಲಿ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದ ಸಂದರ್ಭದಲ್ಲಿ ನೆಲಮಾಕನಹಳ್ಳಿಯ ಕೂಲಿ ಕಾರ್ಮಿಕ ಮಹಿಳೆಯರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡರು. ಜೀವ ಜಲ ರಕ್ಷಣೆಗೆ ಪೂರಕವಾಗಿ ಕಟ್ಟೆಯಲ್ಲಿನ ಹೂಳು ತೆಗೆದು ಸಾರ್ಥಕತೆ ಮೆರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಳವಳ್ಳಿ: ಮಹಿಳೆ ಮನೆಗೆಲಸಕ್ಕೂ ಸೈ, ಹೊರಗಿನ ಕೆಲಸಕ್ಕೂ ಸೈ ಎನ್ನುವುದನ್ನು ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಮಹಿಳೆಯರು ಸಾಬೀತು ಮಾಡಿದ್ದಾರೆ.<br /> <br /> ಗ್ರಾಮದ ಹೊರವಲಯದಲ್ಲಿರುವ ಕೆಂಪಣ್ಣನಕಟ್ಟೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಹೂಳು ತೆಗೆದು ಕಟ್ಟೆಗೆ ಮರು ಜೀವ ನೀಡಿದ್ದಾರೆ. 50 ಮಹಿಳೆಯರು ಸೇರಿ 20 ದಿನಗಳ ಕಾಲ ಕೆಲಸ ಮಾಡಿ ಹೂಳು ತೆಗೆದು ಸಂಪೂರ್ಣ ಸ್ವಚ್ಛ ಮಾಡಿದ್ದಾರೆ.<br /> <br /> ಈ ಕಟ್ಟೆಯಲ್ಲಿ ಮಾರ್ಚ್ 19ರಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಸದಸ್ಯರು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಮಹಿಳಾ ಅಧಿಕಾರಿಗಳು, ಜನವಾದಿ ಮಹಿಳಾ ಸಂಘಟನೆಯ ಮುಖ್ಯಸ್ಥರು ಭಾಗವಹಿಸಲಿದ್ದಾರೆ. ಈ ಆಚರಣೆ ಮೂಲಕ ಶ್ರಮದಾನ ಮಾಡಿರುವವರಿಗೆ ಕೃತಜ್ಞತೆ ಸಲ್ಲಿಸಿದಂತೆಯೂ ಆಗುತ್ತದೆ ಎಂಬುದು ಸಂಘಟಕರ ಅಭಿಪ್ರಾಯ.<br /> <br /> ‘ಮಹಿಳೆಯರೇ ಸೇರಿ ಕೆರೆಯನ್ನು ಸ್ವಚ್ಛ ಮಾಡಿರುವುದು ವಿಶೇಷ. ಹೀಗಾಗಿ ಅರ್ಥಪೂರ್ಣವಾಗಿ ಕಟ್ಟೆಯಲ್ಲೇ ಮಹಿಳಾ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ’ ಎಂದು ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ದೇವಿ ತಿಳಿಸಿದರು.<br /> <br /> ಕಳೆದ ವರ್ಷ ಮಳೆ ಬಾರದೇ ಕೂಲಿ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದ ಸಂದರ್ಭದಲ್ಲಿ ನೆಲಮಾಕನಹಳ್ಳಿಯ ಕೂಲಿ ಕಾರ್ಮಿಕ ಮಹಿಳೆಯರು ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡರು. ಜೀವ ಜಲ ರಕ್ಷಣೆಗೆ ಪೂರಕವಾಗಿ ಕಟ್ಟೆಯಲ್ಲಿನ ಹೂಳು ತೆಗೆದು ಸಾರ್ಥಕತೆ ಮೆರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>