<p><strong>ಬೆಂಗಳೂರು: </strong>ಹೈಕೋರ್ಟ್ನಲ್ಲಿ ಖಾಲಿ ಇರುವ 9 ಅಧಿಕೃತ ಭಾಷಾಂತರಕಾರರ ಹುದ್ದೆಗಳನ್ನು ಭರ್ತಿ ಮಾಡುವಂತೆ ಹೈಕೋರ್ಟ್ ಮೌಖಿಕವಾಗಿ ಆದೇಶಿಸಿದೆ.<br /> <br /> ‘ತಮ್ಮ ವಿರುದ್ಧ ಸದನದಲ್ಲಿ ಮಂಡಿಸಲಾಗಿರುವ ಪದಚ್ಯುತಿ ನಿರ್ಣಯ ಪ್ರಶ್ನಿಸಿ ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಈ ಕುರಿತಂತೆ ಅಡ್ವೊಕೇಟ್ ಜನರಲ್ ಎಂ.ಆರ್.ನಾಯಕ್ ಅವರಿಗೆ ಸೂಚನೆ ನೀಡಿದೆ.<br /> <br /> ‘ಅರ್ಜಿದಾರರು ಸಲ್ಲಿಸಿರುವ ದಾಖಲೆಗಳಲ್ಲಿ ಕೆಲವು ಪತ್ರಿಕಾ ವರದಿಗಳನ್ನೂ ಲಗತ್ತಿಸಲಾಗಿದೆ. ಇವುಗಳನ್ನೆಲ್ಲಾ ಅನುವಾದ ಮಾಡಬೇಕಾದ ಅವಶ್ಯಕತೆ ಇಲ್ಲ’ ಎಂದು ಎಂ.ಆರ್.ನಾಯಕ್ ಹೇಳಿದ ಮಾತಿಗೆ ಚವಾಣ್ ಗರಂ ಆದರು.<br /> <br /> ‘ಹೊರ ರಾಜ್ಯದಿಂದ ಬಂದ ನ್ಯಾಯಮೂರ್ತಿಗಳ ಪೀಠಕ್ಕೆ ಎಲ್ಲ ಕಡತಗಳನ್ನೂ ಇಂಗ್ಲಿಷ್ಗೆ ಅನುವಾದ ಮಾಡಿಯೇ ಕೊಡಬೇಕೆಂಬ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶವನ್ನು ನೀವು ಧಿಕ್ಕರಿಸುತ್ತಿದ್ದೀರ’ ಎಂದು ನಾಯಕ್ ಅವರನ್ನು ಎಚ್ಚರಿಸಿದರು.<br /> <br /> ‘ಏನೆಲ್ಲಾ ಅನುವಾದ ಮಾಡಿಕೊಟ್ಟಿದ್ದೀರಿ. ಉಳಿದ ಇನ್ನೊಂದಿಷ್ಟು ಕಡತಗಳನ್ನು ಅನುವಾದ ಮಾಡಿಕೊಡಲು ಯಾಕೆ ಚೌಕಾಶಿ ಮಾಡುತ್ತಿದ್ದೀರಿ? ವಕೀಲರ ಮೇಲಿನ ಭಾರವನ್ನು ಕಡಿಮೆ ಮಾಡಲು ಪ್ರಯತ್ನಿಸಿ’ ಎಂದು ಸೂಚಿಸಿದರು.<br /> <br /> ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೈಕೋರ್ಟ್ನಲ್ಲಿ ಖಾಲಿ ಇರುವ 9 ಅಧಿಕೃತ ಭಾಷಾಂತರಕಾರರ ಹುದ್ದೆಗಳನ್ನು ಭರ್ತಿ ಮಾಡುವಂತೆ ಹೈಕೋರ್ಟ್ ಮೌಖಿಕವಾಗಿ ಆದೇಶಿಸಿದೆ.<br /> <br /> ‘ತಮ್ಮ ವಿರುದ್ಧ ಸದನದಲ್ಲಿ ಮಂಡಿಸಲಾಗಿರುವ ಪದಚ್ಯುತಿ ನಿರ್ಣಯ ಪ್ರಶ್ನಿಸಿ ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಈ ಕುರಿತಂತೆ ಅಡ್ವೊಕೇಟ್ ಜನರಲ್ ಎಂ.ಆರ್.ನಾಯಕ್ ಅವರಿಗೆ ಸೂಚನೆ ನೀಡಿದೆ.<br /> <br /> ‘ಅರ್ಜಿದಾರರು ಸಲ್ಲಿಸಿರುವ ದಾಖಲೆಗಳಲ್ಲಿ ಕೆಲವು ಪತ್ರಿಕಾ ವರದಿಗಳನ್ನೂ ಲಗತ್ತಿಸಲಾಗಿದೆ. ಇವುಗಳನ್ನೆಲ್ಲಾ ಅನುವಾದ ಮಾಡಬೇಕಾದ ಅವಶ್ಯಕತೆ ಇಲ್ಲ’ ಎಂದು ಎಂ.ಆರ್.ನಾಯಕ್ ಹೇಳಿದ ಮಾತಿಗೆ ಚವಾಣ್ ಗರಂ ಆದರು.<br /> <br /> ‘ಹೊರ ರಾಜ್ಯದಿಂದ ಬಂದ ನ್ಯಾಯಮೂರ್ತಿಗಳ ಪೀಠಕ್ಕೆ ಎಲ್ಲ ಕಡತಗಳನ್ನೂ ಇಂಗ್ಲಿಷ್ಗೆ ಅನುವಾದ ಮಾಡಿಯೇ ಕೊಡಬೇಕೆಂಬ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಆದೇಶವನ್ನು ನೀವು ಧಿಕ್ಕರಿಸುತ್ತಿದ್ದೀರ’ ಎಂದು ನಾಯಕ್ ಅವರನ್ನು ಎಚ್ಚರಿಸಿದರು.<br /> <br /> ‘ಏನೆಲ್ಲಾ ಅನುವಾದ ಮಾಡಿಕೊಟ್ಟಿದ್ದೀರಿ. ಉಳಿದ ಇನ್ನೊಂದಿಷ್ಟು ಕಡತಗಳನ್ನು ಅನುವಾದ ಮಾಡಿಕೊಡಲು ಯಾಕೆ ಚೌಕಾಶಿ ಮಾಡುತ್ತಿದ್ದೀರಿ? ವಕೀಲರ ಮೇಲಿನ ಭಾರವನ್ನು ಕಡಿಮೆ ಮಾಡಲು ಪ್ರಯತ್ನಿಸಿ’ ಎಂದು ಸೂಚಿಸಿದರು.<br /> <br /> ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>