<p>ಹನುಮಸಾಗರ: ಸಮೀಪದ ದೋಟಿಹಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಶಿವಾನಂದ ಎನ್.ಕಡಪಟ್ಟಿಯವರಿಗೆ ಭಾನುವಾರ ಹಾಸನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ವತಿಯಿಂದ ಉತ್ತಮ ಪ್ರಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.<br /> <br /> ಜಿಲ್ಲಾ ಸಾಹಿತ್ಯ ಪರಿಷತ್ ಬಳಗ ಹಾಗೂ ಕರ್ನಾಟಕ ಶಿಕ್ಷಕರ ವಿಕಾಸ ಪರಿಷತ್ ಸಹಯೋಗದಲ್ಲಿ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.<br /> <br /> ಬೆಂಗಳೂರಿನ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ನಿಂದ ಜಿಲ್ಲೆಗೊಬ್ಬರಿಗಂತೆ ಕೊಡಮಾಡುವ ಈ ಪ್ರಶಸ್ತಿಗೆ ಕಡಪಟ್ಟಿಯವರ ಉತ್ತಮ ಸೇವೆ, ಆಡಳಿತ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವುದೇ ಈ ಪ್ರಶಸ್ತಿಗೆ ಆಯ್ಕೆಯಾಗಲು ಕಾರಣವಾಗಿದೆ.<br /> <br /> ಸಾನಿದ್ಯವಹಿಸಿದ್ದ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಶ್ರೀಗಳು, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪಟೇಲ ಶಿವರಾಮ ಈ ಪ್ರಶಸ್ತಿ ನೀಡಿದರು.<br /> <br /> ಉತ್ತಮ ಪ್ರಾಚಾರ್ಯ ಪ್ರಶಸ್ತಿ ಪಡೆದಿರುವ ಕಡಪಟ್ಟಿಯವರನ್ನು ದೋಟಿಹಾಳ ಪದವಿಪೂರ್ವ ಕಾಲೇಜಿನ ಎಸ್ಡಿಎಂಸಿ ಅಧ್ಯಕ್ಷ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಗುರಪ್ಪ ಕುರಿ, ವಿ.ಬಿ.ರಡ್ಡೇರ, ರಮೇಶಗೌಡ ಪಾಟೀಲ ಸೇರಿದಂತೆ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ಅಪಾರ ಅಭಿಮಾನಿಗಳು ಅಭಿನಂದಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹನುಮಸಾಗರ: ಸಮೀಪದ ದೋಟಿಹಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಶಿವಾನಂದ ಎನ್.ಕಡಪಟ್ಟಿಯವರಿಗೆ ಭಾನುವಾರ ಹಾಸನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ ವತಿಯಿಂದ ಉತ್ತಮ ಪ್ರಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.<br /> <br /> ಜಿಲ್ಲಾ ಸಾಹಿತ್ಯ ಪರಿಷತ್ ಬಳಗ ಹಾಗೂ ಕರ್ನಾಟಕ ಶಿಕ್ಷಕರ ವಿಕಾಸ ಪರಿಷತ್ ಸಹಯೋಗದಲ್ಲಿ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.<br /> <br /> ಬೆಂಗಳೂರಿನ ಕರ್ನಾಟಕ ರಾಜ್ಯ ಶಿಕ್ಷಕರ ವಿಕಾಸ ಪರಿಷತ್ನಿಂದ ಜಿಲ್ಲೆಗೊಬ್ಬರಿಗಂತೆ ಕೊಡಮಾಡುವ ಈ ಪ್ರಶಸ್ತಿಗೆ ಕಡಪಟ್ಟಿಯವರ ಉತ್ತಮ ಸೇವೆ, ಆಡಳಿತ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವುದೇ ಈ ಪ್ರಶಸ್ತಿಗೆ ಆಯ್ಕೆಯಾಗಲು ಕಾರಣವಾಗಿದೆ.<br /> <br /> ಸಾನಿದ್ಯವಹಿಸಿದ್ದ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಶ್ರೀಗಳು, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಪಟೇಲ ಶಿವರಾಮ ಈ ಪ್ರಶಸ್ತಿ ನೀಡಿದರು.<br /> <br /> ಉತ್ತಮ ಪ್ರಾಚಾರ್ಯ ಪ್ರಶಸ್ತಿ ಪಡೆದಿರುವ ಕಡಪಟ್ಟಿಯವರನ್ನು ದೋಟಿಹಾಳ ಪದವಿಪೂರ್ವ ಕಾಲೇಜಿನ ಎಸ್ಡಿಎಂಸಿ ಅಧ್ಯಕ್ಷ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಗುರಪ್ಪ ಕುರಿ, ವಿ.ಬಿ.ರಡ್ಡೇರ, ರಮೇಶಗೌಡ ಪಾಟೀಲ ಸೇರಿದಂತೆ ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು, ಅಪಾರ ಅಭಿಮಾನಿಗಳು ಅಭಿನಂದಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>