<p><strong>ಉಳ್ಳಾಲ: </strong>ಕಡಲ್ಕೊರೆತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರಕ್ಷಣಾ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತುರ್ತು ಕ್ರಮ ಕೈಗೊಳ್ಳಲಾಗುವುದೆು ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.<br /> <br /> ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಕ್ಕೆ ಸಹಾಯಕ ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಳಿಕಟ್ಟೆ ಮತ್ತು ಬಂದರು ಅಧಿಕಾರಿಗಳೊಂದಿಗೆ ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದರು.<br /> ಅಧಿಕಾರಿಗಳೊಂದಿಗೆ ಅಧ್ಯಯನ ನಡೆಸಿ ಉಳ್ಳಾಲದ ಹಿಲೇರಿಯಾನಗರ, ಕೈಕೊ, ಮೊಗವೀರಪಟ್ಣ, ಕೋಟೆಪುರಗಳಲ್ಲಿ ಕೆಲವೊಂದು ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ತುರ್ತು ರಕ್ಷಣಾ ಕಾಮಗಾರಿಗೆ ಬೇಕಾದ ಅನುದಾನ ಮಂಜೂರಾತಿಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಬಿಡುಗಡೆಗೆ ಪ್ರಯತ್ನಿಸುತ್ತೇನೆ ಎಂದರು.<br /> <br /> ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಪ್ಪಿಗೆ ನೀಡಿದ್ದು, ಟೆಂಡರ್ ವಿಳಂಬದಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದರು.ಬಂದರು ಇಲಾಖಾ ಅಧಿಕಾರಿ ಮೋಹನ್ ಕುದ್ರಿ, ಎಂಜಿನಿಯರ್ ಸುಜನ್, ಉಳ್ಳಾಲ ಪುರಸಭೆ ಅಧ್ಯಕ್ಷ ಬಾಝಿಲ್ ಡಿಸೋಜಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ: </strong>ಕಡಲ್ಕೊರೆತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರಕ್ಷಣಾ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ತುರ್ತು ಕ್ರಮ ಕೈಗೊಳ್ಳಲಾಗುವುದೆು ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು.<br /> <br /> ಅವರು ಉಳ್ಳಾಲದ ಕಡಲ್ಕೊರೆತ ಪ್ರದೇಶಕ್ಕೆ ಸಹಾಯಕ ಜಿಲ್ಲಾಧಿಕಾರಿ ಪ್ರಭುಲಿಂಗ ಕಾವಳಿಕಟ್ಟೆ ಮತ್ತು ಬಂದರು ಅಧಿಕಾರಿಗಳೊಂದಿಗೆ ಉಳ್ಳಾಲದ ಕಡಲ್ಕೊರೆತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದರು.<br /> ಅಧಿಕಾರಿಗಳೊಂದಿಗೆ ಅಧ್ಯಯನ ನಡೆಸಿ ಉಳ್ಳಾಲದ ಹಿಲೇರಿಯಾನಗರ, ಕೈಕೊ, ಮೊಗವೀರಪಟ್ಣ, ಕೋಟೆಪುರಗಳಲ್ಲಿ ಕೆಲವೊಂದು ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ತುರ್ತು ರಕ್ಷಣಾ ಕಾಮಗಾರಿಗೆ ಬೇಕಾದ ಅನುದಾನ ಮಂಜೂರಾತಿಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಬಿಡುಗಡೆಗೆ ಪ್ರಯತ್ನಿಸುತ್ತೇನೆ ಎಂದರು.<br /> <br /> ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಪ್ಪಿಗೆ ನೀಡಿದ್ದು, ಟೆಂಡರ್ ವಿಳಂಬದಿಂದಾಗಿ ಕಾಮಗಾರಿ ವಿಳಂಬವಾಗಿದೆ ಎಂದರು.ಬಂದರು ಇಲಾಖಾ ಅಧಿಕಾರಿ ಮೋಹನ್ ಕುದ್ರಿ, ಎಂಜಿನಿಯರ್ ಸುಜನ್, ಉಳ್ಳಾಲ ಪುರಸಭೆ ಅಧ್ಯಕ್ಷ ಬಾಝಿಲ್ ಡಿಸೋಜಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>