<p><strong>ನವದೆಹಲಿ (ಪಿಟಿಐ):</strong> ಸತತ ಎರಡು ವರ್ಷಗಳ ಬರಗಾಲದಿಂದ ಕಂಗೆಟ್ಟಿರುವ ದೇಶದ ರೈತ ಸಮುದಾಯದ ಆರ್ಥಿಕ ಸಂಕಷ್ಟ ದೂರ ಮಾಡಲು ಕೇಂದ್ರ ಸರ್ಕಾರವು ‘ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನಾ’ ಎಂಬ ಹೊಸ ಬೆಳೆ ವಿಮೆ ಯೋಜನೆಯನ್ನು ಬುಧವಾರ ಪ್ರಕಟಿಸಿದೆ.<br /> <br /> ಸ್ವಾತಂತ್ರ್ಯಾನಂತರದ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ಬರುತ್ತಿರುವ ಅತಿ ಕಡಿಮೆ ಕಂತಿನ ಬೆಳೆ ವಿಮೆ ಯೋಜನೆ ಇದಾಗಿದೆ. 19.4 ಕೋಟಿ ಹೆಕ್ಟೇರ್ಗಳಷ್ಟು ಸಾಗುವಳಿ ಪ್ರದೇಶದ ಶೇ 50ರಷ್ಟು ಭೂಪ್ರದೇಶದಲ್ಲಿ ನೈಸರ್ಗಿಕ ಪ್ರಕೋಪಗಳಿಂದ ಆಗುವ ಬೆಳೆ ನಷ್ಟವನ್ನು ಈ ಯೋಜನೆ ಪೂರ್ತಿಯಾಗಿ ಭರ್ತಿ ಮಾಡಿಕೊಡಲಿದ್ದು, ಇದು₹ 17,600 ಕೋಟಿ ಮೊತ್ತದ ಕೃಷಿ ವಿಮೆ ಯೋಜನೆಯಾಗಿದೆ. <br /> <br /> ರೈತರು ಪಾವತಿಸಬೇಕಾದ ಕಂತಿನ ಹಣವನ್ನು ಗರಿಷ್ಠ ಶೇ 2ರಿಂದ ಶೇ 5ರವರೆಗೆ ನಿಗದಿಪಡಿಸಲಾಗಿದೆ. ಕಂತಿನ ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾನವಾಗಿ ಭರಿಸಲಿವೆ. ಈ ಸಾಲಿನ ಮುಂಗಾರಿನ ಹಂಗಾಮಿನಿಂದ ಈ ಯೋಜನೆ ಜಾರಿಗೆ ಬರಲಿದೆ. ಇಡೀ ರಾಜ್ಯದ ವಿಮೆ ಯೋಜನೆಯನ್ನು ಒಂದು ವಿಮೆ ಸಂಸ್ಥೆಯ ಸುಪರ್ದಿಗೆ ಒಪ್ಪಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸತತ ಎರಡು ವರ್ಷಗಳ ಬರಗಾಲದಿಂದ ಕಂಗೆಟ್ಟಿರುವ ದೇಶದ ರೈತ ಸಮುದಾಯದ ಆರ್ಥಿಕ ಸಂಕಷ್ಟ ದೂರ ಮಾಡಲು ಕೇಂದ್ರ ಸರ್ಕಾರವು ‘ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನಾ’ ಎಂಬ ಹೊಸ ಬೆಳೆ ವಿಮೆ ಯೋಜನೆಯನ್ನು ಬುಧವಾರ ಪ್ರಕಟಿಸಿದೆ.<br /> <br /> ಸ್ವಾತಂತ್ರ್ಯಾನಂತರದ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ಬರುತ್ತಿರುವ ಅತಿ ಕಡಿಮೆ ಕಂತಿನ ಬೆಳೆ ವಿಮೆ ಯೋಜನೆ ಇದಾಗಿದೆ. 19.4 ಕೋಟಿ ಹೆಕ್ಟೇರ್ಗಳಷ್ಟು ಸಾಗುವಳಿ ಪ್ರದೇಶದ ಶೇ 50ರಷ್ಟು ಭೂಪ್ರದೇಶದಲ್ಲಿ ನೈಸರ್ಗಿಕ ಪ್ರಕೋಪಗಳಿಂದ ಆಗುವ ಬೆಳೆ ನಷ್ಟವನ್ನು ಈ ಯೋಜನೆ ಪೂರ್ತಿಯಾಗಿ ಭರ್ತಿ ಮಾಡಿಕೊಡಲಿದ್ದು, ಇದು₹ 17,600 ಕೋಟಿ ಮೊತ್ತದ ಕೃಷಿ ವಿಮೆ ಯೋಜನೆಯಾಗಿದೆ. <br /> <br /> ರೈತರು ಪಾವತಿಸಬೇಕಾದ ಕಂತಿನ ಹಣವನ್ನು ಗರಿಷ್ಠ ಶೇ 2ರಿಂದ ಶೇ 5ರವರೆಗೆ ನಿಗದಿಪಡಿಸಲಾಗಿದೆ. ಕಂತಿನ ಉಳಿದ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾನವಾಗಿ ಭರಿಸಲಿವೆ. ಈ ಸಾಲಿನ ಮುಂಗಾರಿನ ಹಂಗಾಮಿನಿಂದ ಈ ಯೋಜನೆ ಜಾರಿಗೆ ಬರಲಿದೆ. ಇಡೀ ರಾಜ್ಯದ ವಿಮೆ ಯೋಜನೆಯನ್ನು ಒಂದು ವಿಮೆ ಸಂಸ್ಥೆಯ ಸುಪರ್ದಿಗೆ ಒಪ್ಪಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>