<p>ನವದೆಹಲಿ: ಗೋದಾಮುಗಳು ಆಹಾರಧಾನ್ಯಗಳಿಂದ ತುಂಬಿ ತುಳುಕುತ್ತ್ದ್ದಿದು, ಹೊಸದಾಗಿ ಆಹಾರಧಾನ್ಯಗಳನ್ನು ಸಂಗ್ರಹಿಸಲು ಸ್ಥಳಾವಕಾಶ ಮಾಡಿಕೊಡುವ ಉದ್ದೇಶದಿಂದ ಕಡು ಬಡವರಿಗೆ (ಬಿಪಿಎಲ್) ಒಂದು ಕೋಟಿ ಟನ್ಗಳಷ್ಟು ಆಹಾರ ಧಾನ್ಯಗಳನ್ನು ಕೂಡಲೇ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.<br /> <br /> ಆಹಾರಕ್ಕೆ ಸಂಬಂಧಿಸಿದ ಸಚಿವರ ತಂಡವು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ಸೇರಿ ವಿವಿಧ ರಾಜ್ಯಗಳ `ಬಿಪಿಎಲ್~ ಫಲಾನುಭವಿಗಳಿಗೆ ಆಹಾರಧಾನ್ಯಗಳನ್ನು ವಿತರಿಸಲು ತೀರ್ಮಾನಿಸಿದೆ.<br /> <br /> ಹಿಂಗಾರು ಹಂಗಾಮಿನಲ್ಲಿ ಬಂಪರ್ ಉತ್ಪಾದನೆ ಆಗಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಆಹಾರಧಾನ್ಯಗಳು ಗೋದಾಮಿಗೆ ಬರುವ ನಿರೀಕ್ಷೆ ಇದ್ದು, ಅವುಗಳನ್ನು ದಾಸ್ತಾನು ಮಾಡಲು ಸ್ಥಳದ ಕೊರತೆ ಎದುರಾಗಿದೆ.<br /> <br /> ಈ ಹಿನ್ನೆಲೆಯಲ್ಲಿ ಈಗಾಗಲೇ ತುಂಬಿ ತುಳುಕುತ್ತಿರುವ ಆಹಾರಧಾನ್ಯ ಸಂಗ್ರಹವನ್ನು ವಿಲೇವಾರಿ ಮಾಡುವ ಉದ್ದೇಶದಿಂದ `ಬಿಪಿಎಲ್~ ಕುಟುಂಬಗಳಿಗೆ ಹಂಚಲು ನಿರ್ಧರಿಸಲಾಗಿದೆ. ಆದರೆ, ಈಗ ನಿಗದಿಯಾಗಿರುವ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.<br /> <br /> ದೇಶದ ಗೋದಾಮುಗಳ ಪ್ರಸಕ್ತ ಸಂಗ್ರಹ ಸಾಮರ್ಥ್ಯ 63 ದಶಲಕ್ಷ ಟನ್. ಆದರೆ, ಹಿಂಗಾರು ಹಂಗಾಮಿನಲ್ಲಿ 75 ದಶಲಕ್ಷ ಟನ್ ಆಹಾರಧಾನ್ಯ ಸಂಗ್ರಹವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಈಗಿರುವ ದಾಸ್ತಾನನ್ನು ಖಾಲಿ ಮಾಡದಿದ್ದರೆ ಹೊಸ ಆಹಾರಧಾನ್ಯಗಳನ್ನು ಮುಕ್ತ ಪ್ರದೇಶದಲ್ಲಿ ಪ್ಲಾಸ್ಟಿಕ್ ಹೊದಿಕೆಗಳನ್ನು ಹೊದಿಸಿ ಸಂಗ್ರಹಿಸಬೇಕಾಗುತ್ತದೆ. ಈ ರೀತಿ ದಾಸ್ತಾನು ಮಾಡುವುದರಿಂದ ಮಳೆ ಗಾಳಿಗೆ ಸಿಲುಕಿ ಆಹಾರಧಾನ್ಯಗಳು ಕೊಳೆತು ಹಾಳಾಗುವ ಸಾಧ್ಯತೆಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಗೋದಾಮುಗಳು ಆಹಾರಧಾನ್ಯಗಳಿಂದ ತುಂಬಿ ತುಳುಕುತ್ತ್ದ್ದಿದು, ಹೊಸದಾಗಿ ಆಹಾರಧಾನ್ಯಗಳನ್ನು ಸಂಗ್ರಹಿಸಲು ಸ್ಥಳಾವಕಾಶ ಮಾಡಿಕೊಡುವ ಉದ್ದೇಶದಿಂದ ಕಡು ಬಡವರಿಗೆ (ಬಿಪಿಎಲ್) ಒಂದು ಕೋಟಿ ಟನ್ಗಳಷ್ಟು ಆಹಾರ ಧಾನ್ಯಗಳನ್ನು ಕೂಡಲೇ ವಿತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.<br /> <br /> ಆಹಾರಕ್ಕೆ ಸಂಬಂಧಿಸಿದ ಸಚಿವರ ತಂಡವು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಭೆ ಸೇರಿ ವಿವಿಧ ರಾಜ್ಯಗಳ `ಬಿಪಿಎಲ್~ ಫಲಾನುಭವಿಗಳಿಗೆ ಆಹಾರಧಾನ್ಯಗಳನ್ನು ವಿತರಿಸಲು ತೀರ್ಮಾನಿಸಿದೆ.<br /> <br /> ಹಿಂಗಾರು ಹಂಗಾಮಿನಲ್ಲಿ ಬಂಪರ್ ಉತ್ಪಾದನೆ ಆಗಿರುವುದರಿಂದ ದೊಡ್ಡ ಪ್ರಮಾಣದಲ್ಲಿ ಆಹಾರಧಾನ್ಯಗಳು ಗೋದಾಮಿಗೆ ಬರುವ ನಿರೀಕ್ಷೆ ಇದ್ದು, ಅವುಗಳನ್ನು ದಾಸ್ತಾನು ಮಾಡಲು ಸ್ಥಳದ ಕೊರತೆ ಎದುರಾಗಿದೆ.<br /> <br /> ಈ ಹಿನ್ನೆಲೆಯಲ್ಲಿ ಈಗಾಗಲೇ ತುಂಬಿ ತುಳುಕುತ್ತಿರುವ ಆಹಾರಧಾನ್ಯ ಸಂಗ್ರಹವನ್ನು ವಿಲೇವಾರಿ ಮಾಡುವ ಉದ್ದೇಶದಿಂದ `ಬಿಪಿಎಲ್~ ಕುಟುಂಬಗಳಿಗೆ ಹಂಚಲು ನಿರ್ಧರಿಸಲಾಗಿದೆ. ಆದರೆ, ಈಗ ನಿಗದಿಯಾಗಿರುವ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.<br /> <br /> ದೇಶದ ಗೋದಾಮುಗಳ ಪ್ರಸಕ್ತ ಸಂಗ್ರಹ ಸಾಮರ್ಥ್ಯ 63 ದಶಲಕ್ಷ ಟನ್. ಆದರೆ, ಹಿಂಗಾರು ಹಂಗಾಮಿನಲ್ಲಿ 75 ದಶಲಕ್ಷ ಟನ್ ಆಹಾರಧಾನ್ಯ ಸಂಗ್ರಹವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಈಗಿರುವ ದಾಸ್ತಾನನ್ನು ಖಾಲಿ ಮಾಡದಿದ್ದರೆ ಹೊಸ ಆಹಾರಧಾನ್ಯಗಳನ್ನು ಮುಕ್ತ ಪ್ರದೇಶದಲ್ಲಿ ಪ್ಲಾಸ್ಟಿಕ್ ಹೊದಿಕೆಗಳನ್ನು ಹೊದಿಸಿ ಸಂಗ್ರಹಿಸಬೇಕಾಗುತ್ತದೆ. ಈ ರೀತಿ ದಾಸ್ತಾನು ಮಾಡುವುದರಿಂದ ಮಳೆ ಗಾಳಿಗೆ ಸಿಲುಕಿ ಆಹಾರಧಾನ್ಯಗಳು ಕೊಳೆತು ಹಾಳಾಗುವ ಸಾಧ್ಯತೆಗಳು ಇವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>