<p><strong>ಕಡೂರು: </strong>ತಾಲ್ಲೂಕಿನಲ್ಲಿ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ದನಕರುಗಳಿಗೆ ಮೇವು ಇಲ್ಲದೆ ತತ್ತರಿಸುತ್ತಿವೆ. ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಅಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಯಿತು.<br /> <br /> ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಘೋಷಣೆಗೆ ಸರ್ಕಾರಕ್ಕೆ ಅ.2 ರವರೆಗೆ ಗಡುವು ನೀಡಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು. <br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್.ಮೂರ್ತಿ, ಕಡೂರು -ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷ ರಾದ ಚಂದ್ರಪ್ಪ ಮತ್ತು ವಿನಾಯಕ, ಮುಖಂಡರಾದ ನೀಲಕಂಠಪ್ಪ, ಕೆಂಪರಾಜ್. ಕೆ.ಬಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. <br /> <br /> ಮರವಂಜಿ ವೃತ್ತದಿಂದ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಹೊರಟ ನೂರಾರು ಸಂಖ್ಯೆಯ ಕಾರ್ಯಕರ್ತರು ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲ್ಲೂಕು ಕಚೇರಿಯ ಮುಂದೆ ಜಮಾಯಿಸಿ ಪ್ರತಿಭಟಿಸಿದರು. <br /> <br /> ಎಂ.ಎಲ್.ಮೂರ್ತಿ ಮಾತನಾಡಿ, ತಾಲ್ಲೂಕಿನ ರೈತರು ಅನಾವೃಷ್ಟಿಯಿಂದ ಲಕ್ಷಾಂತರ ರೂ ವಿವಿಧ ಬೆಳೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮಕ್ಕೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. <br /> <br /> ಕೆ.ಎಂ.ಕೆಂಪರಾಜು ಮಾತನಾಡಿ, ತಿಂಗಳಿಂದ ಕಡೂರು ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವುದಾಗಿ ಸರ್ಕಾರದಲ್ಲಿ ಪಾಲುದಾರರಾಗಿರುವ ಶಾಸಕ ಡಾ.ವೈ.ಸಿ.ವಿಶ್ವನಾಥ್ ಮಾಧ್ಯಮಗಳಲ್ಲಿ ಹೇಳುತ್ತಿದ್ದಾರೆ. ಆದರೂ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು. <br /> <br /> ತರೀಕೆರೆ ಮಾಜಿ ಶಾಸಕ ನೀಲಕಂಠಪ್ಪ ಮಾತನಾಡಿ, ರೈತರಿಗೆ ಕನಿಷ್ಠ ಎಕರೆಗೆ 5 ಸಾವಿರ ರೂಗಳ ಪರಿಹಾರ ಹಾಗು ಬಡ್ಡಿ ರಹಿತ ಸಾಲ ನೀಡಬೇಕೆಂದು ಒತ್ತಾಯಿಸಿದರು. <br /> <br /> ಪ್ರತಿಭಟನೆಯಲ್ಲಿ ಕೆ.ಬಿ.ಮಲ್ಲಿಕಾರ್ಜುನ್, ಡಿ.ಲಕ್ಷ್ಮಣ್, ಸಾವಿತ್ರಿ ಗಂಗಪ್ಪ, ಟಿ.ವಿ.ಶಿವಶಂಕರ್, ಪುರಸಭಾ ಸದಸ್ಯ ಎಂ.ರೇಣುಕಾರಾಧ್ಯ, ಆನಂದ್, ಕೆ.ಜಿ.ಲೋಕೇಶ್, ಕಾರ್ಯದರ್ಶಿ ಚಂದ್ರಮೌಳಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು: </strong>ತಾಲ್ಲೂಕಿನಲ್ಲಿ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ದನಕರುಗಳಿಗೆ ಮೇವು ಇಲ್ಲದೆ ತತ್ತರಿಸುತ್ತಿವೆ. ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಅಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಯಿತು.<br /> <br /> ಕಡೂರು-ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕದ ಕಾರ್ಯಕರ್ತರು ಘೋಷಣೆಗೆ ಸರ್ಕಾರಕ್ಕೆ ಅ.2 ರವರೆಗೆ ಗಡುವು ನೀಡಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು. <br /> <br /> ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಲ್.ಮೂರ್ತಿ, ಕಡೂರು -ಬೀರೂರು ಬ್ಲಾಕ್ ಕಾಂಗ್ರೆಸ್ ಘಟಕಗಳ ಅಧ್ಯಕ್ಷ ರಾದ ಚಂದ್ರಪ್ಪ ಮತ್ತು ವಿನಾಯಕ, ಮುಖಂಡರಾದ ನೀಲಕಂಠಪ್ಪ, ಕೆಂಪರಾಜ್. ಕೆ.ಬಿ.ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. <br /> <br /> ಮರವಂಜಿ ವೃತ್ತದಿಂದ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಹೊರಟ ನೂರಾರು ಸಂಖ್ಯೆಯ ಕಾರ್ಯಕರ್ತರು ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಘೋಷಣೆ ಕೂಗಿದರು. ನಂತರ ತಾಲ್ಲೂಕು ಕಚೇರಿಯ ಮುಂದೆ ಜಮಾಯಿಸಿ ಪ್ರತಿಭಟಿಸಿದರು. <br /> <br /> ಎಂ.ಎಲ್.ಮೂರ್ತಿ ಮಾತನಾಡಿ, ತಾಲ್ಲೂಕಿನ ರೈತರು ಅನಾವೃಷ್ಟಿಯಿಂದ ಲಕ್ಷಾಂತರ ರೂ ವಿವಿಧ ಬೆಳೆಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ಸರ್ಕಾರ ಯಾವ ಕ್ರಮಕ್ಕೂ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು. <br /> <br /> ಕೆ.ಎಂ.ಕೆಂಪರಾಜು ಮಾತನಾಡಿ, ತಿಂಗಳಿಂದ ಕಡೂರು ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವುದಾಗಿ ಸರ್ಕಾರದಲ್ಲಿ ಪಾಲುದಾರರಾಗಿರುವ ಶಾಸಕ ಡಾ.ವೈ.ಸಿ.ವಿಶ್ವನಾಥ್ ಮಾಧ್ಯಮಗಳಲ್ಲಿ ಹೇಳುತ್ತಿದ್ದಾರೆ. ಆದರೂ ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು. <br /> <br /> ತರೀಕೆರೆ ಮಾಜಿ ಶಾಸಕ ನೀಲಕಂಠಪ್ಪ ಮಾತನಾಡಿ, ರೈತರಿಗೆ ಕನಿಷ್ಠ ಎಕರೆಗೆ 5 ಸಾವಿರ ರೂಗಳ ಪರಿಹಾರ ಹಾಗು ಬಡ್ಡಿ ರಹಿತ ಸಾಲ ನೀಡಬೇಕೆಂದು ಒತ್ತಾಯಿಸಿದರು. <br /> <br /> ಪ್ರತಿಭಟನೆಯಲ್ಲಿ ಕೆ.ಬಿ.ಮಲ್ಲಿಕಾರ್ಜುನ್, ಡಿ.ಲಕ್ಷ್ಮಣ್, ಸಾವಿತ್ರಿ ಗಂಗಪ್ಪ, ಟಿ.ವಿ.ಶಿವಶಂಕರ್, ಪುರಸಭಾ ಸದಸ್ಯ ಎಂ.ರೇಣುಕಾರಾಧ್ಯ, ಆನಂದ್, ಕೆ.ಜಿ.ಲೋಕೇಶ್, ಕಾರ್ಯದರ್ಶಿ ಚಂದ್ರಮೌಳಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>