<p><strong>ರಾಯ್ಪುರ, (ಛತೀಸ್ಗಢ) (ಐಎಎನ್ಎಸ್): </strong>ಕಣ್ಣು ಪೊರೆ ಶಸ್ತ್ರಚಿಕಿತ್ಸೆಗಾಗಿ ಸೆಪ್ಟೆಂಬರ್ 30 ರಂದು ಛತೀಸ್ಗಢದಲ್ಲಿ ಸರ್ಕಾರ ನಡೆಸಿದ ಆರೋಗ್ಯ ಶಿಬಿರದಲ್ಲಿ 13ಕ್ಕೂ ಅಧಿಕ ಜನರು ದೃಷ್ಟಿ ಕಳೆದುಕೊಳ್ಳುವುದರೊಂದಿಗೆ 24 ಜನರು ತೊಂದರೆಗೆ ಒಳಗಾಗಿದ್ದಾರೆ ಎಂದು ಭಾನುವಾರ ಅಧಿಕೃತ ಮೂಲಗಳಿಂದ ತಡವಾಗಿ ತಿಳಿದುಬಂದಿದೆ.</p>.<p>ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ಬಹುತೇಕರಲ್ಲಿ ಕಣ್ಣಿನಲ್ಲಿ ಊತ ಕಂಡುಬಂದಿದ್ದು, ಕಣ್ಣುಗಳಿಂದ ಕೀವು ಸುರಿಯುತ್ತಿರುವುದು ತಿಳಿದು ಬಂದಿದೆ. ಜಿಲ್ಲೆಯ ವೈದ್ಯಾಧಿಕಾರಿಗಳ ತಂಡ ತೊಂದರೆಗೆ ಒಳಗಾದವರನ್ನು ಸಂಪರ್ಕಿಸಿ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡುತ್ತಿದೆ~ ಎಂದು ದುರ್ಗಾ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> 13ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ದೂರುಗಳು ಬಂದಿದ್ದು ಅವರೆಲ್ಲರನ್ನು ದುರ್ಗಾ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ದುರ್ಗಾ ಜಿಲ್ಲೆಯ 120 ಕಿ.ಮಿ ದೂರದಲ್ಲಿರುವ ಬಾಲೂದ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಅಸಮರ್ಪಕ ತರಬೇತಿ ಪಡೆದ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆಯ ನಂತರ 11 ವೃದ್ಧರು ದೃಷ್ಟಿ ಕಳೆದುಕೊಂಡಿದ್ದಾರೆ. ಇದನ್ನು ಮನಗೊಂಡ ಸರ್ಕಾರ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. <br /> <br /> ~ಈ ನಡುವೆ ಕಣ್ಣುಗಳನ್ನು ಕಳೆದುಕೊಂಡವರ ದೂರುಗಳು ಹೆಚ್ಚಾಗುತ್ತಿದೆ. ಇದೊಂದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಲಾಗುವುದು~ ಎಂದು ಆರೋಗ್ಯ ಸೇವಾ ನಿರ್ದೆಶಕರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ, (ಛತೀಸ್ಗಢ) (ಐಎಎನ್ಎಸ್): </strong>ಕಣ್ಣು ಪೊರೆ ಶಸ್ತ್ರಚಿಕಿತ್ಸೆಗಾಗಿ ಸೆಪ್ಟೆಂಬರ್ 30 ರಂದು ಛತೀಸ್ಗಢದಲ್ಲಿ ಸರ್ಕಾರ ನಡೆಸಿದ ಆರೋಗ್ಯ ಶಿಬಿರದಲ್ಲಿ 13ಕ್ಕೂ ಅಧಿಕ ಜನರು ದೃಷ್ಟಿ ಕಳೆದುಕೊಳ್ಳುವುದರೊಂದಿಗೆ 24 ಜನರು ತೊಂದರೆಗೆ ಒಳಗಾಗಿದ್ದಾರೆ ಎಂದು ಭಾನುವಾರ ಅಧಿಕೃತ ಮೂಲಗಳಿಂದ ತಡವಾಗಿ ತಿಳಿದುಬಂದಿದೆ.</p>.<p>ಶಿಬಿರದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ಬಹುತೇಕರಲ್ಲಿ ಕಣ್ಣಿನಲ್ಲಿ ಊತ ಕಂಡುಬಂದಿದ್ದು, ಕಣ್ಣುಗಳಿಂದ ಕೀವು ಸುರಿಯುತ್ತಿರುವುದು ತಿಳಿದು ಬಂದಿದೆ. ಜಿಲ್ಲೆಯ ವೈದ್ಯಾಧಿಕಾರಿಗಳ ತಂಡ ತೊಂದರೆಗೆ ಒಳಗಾದವರನ್ನು ಸಂಪರ್ಕಿಸಿ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡುತ್ತಿದೆ~ ಎಂದು ದುರ್ಗಾ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> 13ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ದೂರುಗಳು ಬಂದಿದ್ದು ಅವರೆಲ್ಲರನ್ನು ದುರ್ಗಾ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.</p>.<p>ದುರ್ಗಾ ಜಿಲ್ಲೆಯ 120 ಕಿ.ಮಿ ದೂರದಲ್ಲಿರುವ ಬಾಲೂದ್ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಅಸಮರ್ಪಕ ತರಬೇತಿ ಪಡೆದ ವೈದ್ಯರು ನಡೆಸಿದ ಶಸ್ತ್ರಚಿಕಿತ್ಸೆಯ ನಂತರ 11 ವೃದ್ಧರು ದೃಷ್ಟಿ ಕಳೆದುಕೊಂಡಿದ್ದಾರೆ. ಇದನ್ನು ಮನಗೊಂಡ ಸರ್ಕಾರ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. <br /> <br /> ~ಈ ನಡುವೆ ಕಣ್ಣುಗಳನ್ನು ಕಳೆದುಕೊಂಡವರ ದೂರುಗಳು ಹೆಚ್ಚಾಗುತ್ತಿದೆ. ಇದೊಂದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳಲಾಗುವುದು~ ಎಂದು ಆರೋಗ್ಯ ಸೇವಾ ನಿರ್ದೆಶಕರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>