<p><strong>ಬೆಂಗಳೂರು:</strong> `ಸದಾ ನೋವಿರುವವರ ಜೊತೆ ಕೆಲಸ ಮಾಡುವ ವೈದ್ಯರು, ಅವರ ನೋವು ನಿವಾರಣೆಗಾಗಿಯೇ ದುಡಿಯುತ್ತಾರೆ. ನೊಂದವರ ಕಣ್ಣೀರು ಒರೆಸುವುದಕ್ಕಿಂತ ದೊಡ್ಡ ಪೂಜೆ ಯಾವುದೂ ಇಲ್ಲ~ ಎಂದು ಹಾಸ್ಯ ನಿರೂಪಕ ಪ್ರೊ.ಎಂ.ಕೃಷ್ಣೇಗೌಡ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಎಂ.ಎಸ್.ರಾಮಯ್ಯ ಆಸ್ಪತ್ರೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. <br /> <br /> `ಸಂಬಳ ಪಡೆದು ಕೆಲಸ ಮಾಡಿದರೆ ಅದು ಕರ್ತವ್ಯ ಎನಿಸುತ್ತದೆಯೇ ಹೊರತು ಸೇವೆ ಅಲ್ಲ~ ಎಂದ ಅವರು, `ಪ್ರತಿಯೊಂದು ವೃತ್ತಿಯೂ ಪವಿತ್ರವೇ ಆಗಿದ್ದು, ಬೇರೆ ವೃತ್ತಿ ಬಾಂಧವರನ್ನು ಗೌರವದಿಂದ ಕಾಣುವ ಪರಿಪಾಠ ಬೆಳೆಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> `ಗೋಕುಲ ಶಿಕ್ಷಣ ಪ್ರತಿಷ್ಠಾನ ರಾಜ್ಯದಲ್ಲೇ ಉತ್ಕೃಷ್ಟವಾದ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದು, ತನ್ನ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವ ಯೋಜನೆ ಹೊಂದಿದೆ~ ಎಂದು ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಡಾ.ಡಿ.ವಿ ಗುರುಪ್ರಸಾದ್ ಹೇಳಿದರು. ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಆರ್. ಜಯರಾಂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.<br /> <br /> ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ಕೃಷ್ಣೇಗೌಡ ಹಾಸ್ಯ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಸದಾ ನೋವಿರುವವರ ಜೊತೆ ಕೆಲಸ ಮಾಡುವ ವೈದ್ಯರು, ಅವರ ನೋವು ನಿವಾರಣೆಗಾಗಿಯೇ ದುಡಿಯುತ್ತಾರೆ. ನೊಂದವರ ಕಣ್ಣೀರು ಒರೆಸುವುದಕ್ಕಿಂತ ದೊಡ್ಡ ಪೂಜೆ ಯಾವುದೂ ಇಲ್ಲ~ ಎಂದು ಹಾಸ್ಯ ನಿರೂಪಕ ಪ್ರೊ.ಎಂ.ಕೃಷ್ಣೇಗೌಡ ಅಭಿಪ್ರಾಯಪಟ್ಟರು.<br /> <br /> ನಗರದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಎಂ.ಎಸ್.ರಾಮಯ್ಯ ಆಸ್ಪತ್ರೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. <br /> <br /> `ಸಂಬಳ ಪಡೆದು ಕೆಲಸ ಮಾಡಿದರೆ ಅದು ಕರ್ತವ್ಯ ಎನಿಸುತ್ತದೆಯೇ ಹೊರತು ಸೇವೆ ಅಲ್ಲ~ ಎಂದ ಅವರು, `ಪ್ರತಿಯೊಂದು ವೃತ್ತಿಯೂ ಪವಿತ್ರವೇ ಆಗಿದ್ದು, ಬೇರೆ ವೃತ್ತಿ ಬಾಂಧವರನ್ನು ಗೌರವದಿಂದ ಕಾಣುವ ಪರಿಪಾಠ ಬೆಳೆಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> `ಗೋಕುಲ ಶಿಕ್ಷಣ ಪ್ರತಿಷ್ಠಾನ ರಾಜ್ಯದಲ್ಲೇ ಉತ್ಕೃಷ್ಟವಾದ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದು, ತನ್ನ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವ ಯೋಜನೆ ಹೊಂದಿದೆ~ ಎಂದು ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಡಾ.ಡಿ.ವಿ ಗುರುಪ್ರಸಾದ್ ಹೇಳಿದರು. ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಆರ್. ಜಯರಾಂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.<br /> <br /> ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಬಳಿಕ ಕೃಷ್ಣೇಗೌಡ ಹಾಸ್ಯ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>