<p><strong>ಮುಂಬೈ (ಪಿಟಿಐ): </strong>‘ಪತ್ನಿಗೆ ಮನೆಯಿಂದ ಹಣ ಕದಿಯುವ ಚಾಳಿ ಇದೆ. ಅಲ್ಲದೇ ತನ್ನ ಸಹೋದ್ಯೋಗಿಯ ಡೆಬಿಟ್ ಕಾರ್ಡ್ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಳು. ಈ ರೀತಿ ಮಾನಸಿಕ ಕಿರುಕುಳ ನೀಡುವ ಪತ್ನಿಯ ಜತೆ ಬದುಕುವುದಕ್ಕೆ ಸಾಧ್ಯವಿಲ್ಲ’ ಎಂಬ ಕಾರಣ ನೀಡಿ ವ್ಯಕ್ತಿಯೊಬ್ಬ ಪಡೆದುಕೊಂಡ ವಿಚ್ಛೇದನವನ್ನು ಬಾಂಬೆ ಹೈಕೋರ್ಟ್ ಸಮರ್ಥಿಸಿದೆ.<br /> <br /> ಈ ಜೋಡಿ ಮದುವೆಯಾಗಿದ್ದು 1991. ಇವರಿಗೆ ಒಬ್ಬ ಮಗ ಕೂಡ ಇದ್ದಾನೆ. 2008ರಲ್ಲಿ ಪತಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದ.<br /> ‘ನನ್ನ ಪತ್ನಿ ಸುಳ್ಳು ಹೇಳುತ್ತಾಳೆ. ನಮ್ಮ ಮನೆಯ ರೀತಿ--– ರಿವಾಜು ಪಾಲಿಸುತ್ತಿಲ್ಲ. ಅನೇಕ ಬಾರಿ ನನ್ನ ದುಡ್ಡು ಕದ್ದಿದ್ದಾಳೆ. ನಕಲಿ ಸಹಿ ಮಾಡಿ ಬೇರೆಯವರ ಬ್ಯಾಂಕ್ ಖಾತೆಯಿಂದ ಹಣ ತೆಗೆದುಕೊಂಡಿದ್ದಾಳೆ. ಸಹೋದ್ಯೋಗಿಯ ಡೆಬಿಟ್್ ಕಾರ್ಡ್್ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೂ ಒಳಗಾಗಿದ್ದಳು’ ಎಂದು ದೂರಿದ್ದ.<br /> <br /> ಸಾಕ್ಷಿಗಳಿಂದ ಹೇಳಿಕೆ ಪಡೆದುಕೊಂಡ ಬಳಿಕ ಕೌಟುಂಬಿಕ ನ್ಯಾಯಾಲಯವು ಈ ವ್ಯಕ್ತಿಯ ಪರವಾಗಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಬಾಂಬೆ ಹೈಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಳು.<br /> <br /> ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ಎಲ್.ಅಚಿಲ್ಯಾ ಹಾಗೂ ವಿಜಯಾ ತಹಿಲ್ರಮಣಿ ಅವರಿದ್ದ ಪೀಠ, ‘ಗಂಡನ ಹಣ ಕದಿಯುವುದು, ಮತ್ತೊಬ್ಬರ ಡೆಬಿಟ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುವುದು... ಇತ್ಯಾದಿ ವರ್ತನೆಗಳನ್ನು ಗಮನಿಸಿದರೆ ಈ ಮಹಿಳೆ ತನ್ನ ಗಂಡನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎನ್ನುವುದು ಖಾತ್ರಿಯಾಗುತ್ತದೆ’ ಎಂದು ಹೇಳಿತು. ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಿ, ಕೌಟುಂಬಿಕ ನ್ಯಾಯಾಲಯ ನೀಡಿದ್ದ ತೀರ್ಪನ್ನು ಸಮರ್ಥಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>‘ಪತ್ನಿಗೆ ಮನೆಯಿಂದ ಹಣ ಕದಿಯುವ ಚಾಳಿ ಇದೆ. ಅಲ್ಲದೇ ತನ್ನ ಸಹೋದ್ಯೋಗಿಯ ಡೆಬಿಟ್ ಕಾರ್ಡ್ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಳು. ಈ ರೀತಿ ಮಾನಸಿಕ ಕಿರುಕುಳ ನೀಡುವ ಪತ್ನಿಯ ಜತೆ ಬದುಕುವುದಕ್ಕೆ ಸಾಧ್ಯವಿಲ್ಲ’ ಎಂಬ ಕಾರಣ ನೀಡಿ ವ್ಯಕ್ತಿಯೊಬ್ಬ ಪಡೆದುಕೊಂಡ ವಿಚ್ಛೇದನವನ್ನು ಬಾಂಬೆ ಹೈಕೋರ್ಟ್ ಸಮರ್ಥಿಸಿದೆ.<br /> <br /> ಈ ಜೋಡಿ ಮದುವೆಯಾಗಿದ್ದು 1991. ಇವರಿಗೆ ಒಬ್ಬ ಮಗ ಕೂಡ ಇದ್ದಾನೆ. 2008ರಲ್ಲಿ ಪತಿ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದ.<br /> ‘ನನ್ನ ಪತ್ನಿ ಸುಳ್ಳು ಹೇಳುತ್ತಾಳೆ. ನಮ್ಮ ಮನೆಯ ರೀತಿ--– ರಿವಾಜು ಪಾಲಿಸುತ್ತಿಲ್ಲ. ಅನೇಕ ಬಾರಿ ನನ್ನ ದುಡ್ಡು ಕದ್ದಿದ್ದಾಳೆ. ನಕಲಿ ಸಹಿ ಮಾಡಿ ಬೇರೆಯವರ ಬ್ಯಾಂಕ್ ಖಾತೆಯಿಂದ ಹಣ ತೆಗೆದುಕೊಂಡಿದ್ದಾಳೆ. ಸಹೋದ್ಯೋಗಿಯ ಡೆಬಿಟ್್ ಕಾರ್ಡ್್ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಬಂಧನಕ್ಕೂ ಒಳಗಾಗಿದ್ದಳು’ ಎಂದು ದೂರಿದ್ದ.<br /> <br /> ಸಾಕ್ಷಿಗಳಿಂದ ಹೇಳಿಕೆ ಪಡೆದುಕೊಂಡ ಬಳಿಕ ಕೌಟುಂಬಿಕ ನ್ಯಾಯಾಲಯವು ಈ ವ್ಯಕ್ತಿಯ ಪರವಾಗಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪತ್ನಿ ಬಾಂಬೆ ಹೈಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಳು.<br /> <br /> ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ಎಲ್.ಅಚಿಲ್ಯಾ ಹಾಗೂ ವಿಜಯಾ ತಹಿಲ್ರಮಣಿ ಅವರಿದ್ದ ಪೀಠ, ‘ಗಂಡನ ಹಣ ಕದಿಯುವುದು, ಮತ್ತೊಬ್ಬರ ಡೆಬಿಟ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುವುದು... ಇತ್ಯಾದಿ ವರ್ತನೆಗಳನ್ನು ಗಮನಿಸಿದರೆ ಈ ಮಹಿಳೆ ತನ್ನ ಗಂಡನಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎನ್ನುವುದು ಖಾತ್ರಿಯಾಗುತ್ತದೆ’ ಎಂದು ಹೇಳಿತು. ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡಿ, ಕೌಟುಂಬಿಕ ನ್ಯಾಯಾಲಯ ನೀಡಿದ್ದ ತೀರ್ಪನ್ನು ಸಮರ್ಥಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>