<p>ಬಳ್ಳಾರಿ: ಜೀವನದಲ್ಲಿ ಸ್ವತಃ ನೊಂದುಬೆಂದರೂ ಇತರರಿಗಾಗಿ ಅತ್ಯುತ್ಕೃಷ್ಟವಾದ ಕೀರ್ತನೆಗಳನ್ನು ರಚಿಸುವ ಮೂಲಕ ಸಮಾಜ ಸುಧಾರಣೆಗೆ ಕಾರಣರಾದ ದಾಸಶ್ರೇಷ್ಠ ಕನಕದಾಸರ ತತ್ವಾದರ್ಶಗಳನ್ನು ಇಂದಿಗೂ ಪ್ರಸ್ತುತವಾಗಿವೆ ಎಂದು ಉಪಮೇಯರ್ ಶಶಿಕಲಾ ಅಭಿಪ್ರಾಯಪಟ್ಟರು.<br /> <br /> ಕನಕ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ವತಿಯಿಂದ ನಗರದ ಗಾಂಧಿಭವನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕನಕ ಜಯಂತಿ ಉತ್ಸವ ಹಾಗೂ ಸಮಾಜದ ಉತ್ತಮ ನೌಕರರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶರಣಯ್ಯ ಸ್ವಾಮಿ ಒಡೆಯರ್ ಸಾನ್ನಿಧ್ಯವಹಿಸಿದ್ದರು. ವಿಮ್ಸ ಪ್ರಾಚಾರ್ಯ ಶ್ರೀನಿವಾಸಮೂರ್ತಿ, ಡಾ. ತರಸಾಲಪ್ಪ, ಕೃಷ್ಣಕುಮಾರ್, ಕೆ.ಚಂದ್ರಶೇಖರ್, ಆನಂದ್ ಉಕ್ಕಲಿ, ಶಿವಲಿಂಗಯ್ಯ, ಸಿದ್ಧನಗೌಡ ಸಿಂಧುವಾಳ, ಚಿದಾನಂದಪ್ಪ, ಎಂ.ಜಿ. ಮೇಟಿ, ಸೋಮಶೇಖರ್, ಕೆರಕೋಡಪ್ಪ ಉಪಸ್ಥಿತರಿದ್ದರು. ಲಕ್ಷ್ಮಿ ಪವನಕುಮಾರ್ ಪ್ರಾರ್ಥಿಸಿದರು.<br /> <br /> ಟಿ. ಮರಿಸ್ವಾಮಿ ಸ್ವಾಗತಿಸಿದರು. ಬಿ.ಟಿ. ಕಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಯರ್ರಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸಮಾಜದ ನೌಕರರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಜೀವನದಲ್ಲಿ ಸ್ವತಃ ನೊಂದುಬೆಂದರೂ ಇತರರಿಗಾಗಿ ಅತ್ಯುತ್ಕೃಷ್ಟವಾದ ಕೀರ್ತನೆಗಳನ್ನು ರಚಿಸುವ ಮೂಲಕ ಸಮಾಜ ಸುಧಾರಣೆಗೆ ಕಾರಣರಾದ ದಾಸಶ್ರೇಷ್ಠ ಕನಕದಾಸರ ತತ್ವಾದರ್ಶಗಳನ್ನು ಇಂದಿಗೂ ಪ್ರಸ್ತುತವಾಗಿವೆ ಎಂದು ಉಪಮೇಯರ್ ಶಶಿಕಲಾ ಅಭಿಪ್ರಾಯಪಟ್ಟರು.<br /> <br /> ಕನಕ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ವತಿಯಿಂದ ನಗರದ ಗಾಂಧಿಭವನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಕನಕ ಜಯಂತಿ ಉತ್ಸವ ಹಾಗೂ ಸಮಾಜದ ಉತ್ತಮ ನೌಕರರ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಶರಣಯ್ಯ ಸ್ವಾಮಿ ಒಡೆಯರ್ ಸಾನ್ನಿಧ್ಯವಹಿಸಿದ್ದರು. ವಿಮ್ಸ ಪ್ರಾಚಾರ್ಯ ಶ್ರೀನಿವಾಸಮೂರ್ತಿ, ಡಾ. ತರಸಾಲಪ್ಪ, ಕೃಷ್ಣಕುಮಾರ್, ಕೆ.ಚಂದ್ರಶೇಖರ್, ಆನಂದ್ ಉಕ್ಕಲಿ, ಶಿವಲಿಂಗಯ್ಯ, ಸಿದ್ಧನಗೌಡ ಸಿಂಧುವಾಳ, ಚಿದಾನಂದಪ್ಪ, ಎಂ.ಜಿ. ಮೇಟಿ, ಸೋಮಶೇಖರ್, ಕೆರಕೋಡಪ್ಪ ಉಪಸ್ಥಿತರಿದ್ದರು. ಲಕ್ಷ್ಮಿ ಪವನಕುಮಾರ್ ಪ್ರಾರ್ಥಿಸಿದರು.<br /> <br /> ಟಿ. ಮರಿಸ್ವಾಮಿ ಸ್ವಾಗತಿಸಿದರು. ಬಿ.ಟಿ. ಕಲ್ಲಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಯರ್ರಿಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಇಲಾಖೆಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಸಮಾಜದ ನೌಕರರನ್ನು ಗೌರವಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>