<p><strong>ಕನಕಪುರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕನಕಪುರದ ಹಲಸಿನ ಮರದೊಡ್ಡಿ ಕೆಂಪರಾಜು, ಕನಕಪುರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ಅಧ್ಯಕ್ಷರಾಗಿ ಸಾತನೂರಿನ ನಾಗರಾಜು ಆಯ್ಕೆಯಾಗಿದ್ದಾರೆ. <br /> <br /> ಲೋಕಸಭಾ ಕ್ಷೇತ್ರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆಂಪರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷಕೆ ಯುವಕರನ್ನು ಸಂಘಟಿಸಲು ಹಾಗೂ ಅರ್ಹರಿಗೆ ಅವಕಾಶ ಕಲ್ಪಿಸಲು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ಗಾಂಧಿಯವರು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲೇ ಯುವ ಅಧ್ಯಕ್ಷರ ಚುನಾವಣೆ ನಡೆಸಿದ್ದಾರೆ. <br /> <br /> ರಾಷ್ಟ್ರವ್ಯಾಪ್ತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕಾಂಗ್ರೆಸ್ ಚುನಾವಣಿಯ ಮೂಲಕ ಕಾಂಗ್ರೆಸ್ ಸೇರ್ಪಡೆಗೊಂಡು ಉತ್ತಮ ಪಕ್ಷವಾಗಿ ದೇಶದಲ್ಲಿ ರೂಪಿಸುವ ಕಾರ್ಯವನ್ನು ಯುವಜನತೆ ಮಾಡಬೇಕಾಗಿದೆ ಎಂದರು.<br /> <br /> ಕನಕಪುರ ಕ್ಷೇತ್ರದ ಶಾಸಕರಾದ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಲ್ಲಿ ಯುವ ಸಮೂಹಕ್ಕೆ ಹೆಚ್ಚಿನ ನಾಯಕತ್ವ ನೀಡಲು ಮುಂದಾಗಿದ್ದು ಆ ದಿಸೆಯಲ್ಲಿ ಕನಕಪುರ ತಾಲ್ಲೂಕಿನಲ್ಲಿ 11 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ನೀಡಿರುವುದರಿಂದ ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆದು ಕೊಂಡಿದೆ ಎಂದರು.<br /> <br /> ಮುಂದಿನ ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚುಮಂದಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯುವಕರನ್ನು ಸಂಘಟಿಸುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತೇವೆ, ಇದಕ್ಕೆ ಪಕ್ಷದ ನಾಯಕರ ಬೆಂಬಲ ಅಗತ್ಯವಾಗಿ ಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕನಕಪುರದ ಹಲಸಿನ ಮರದೊಡ್ಡಿ ಕೆಂಪರಾಜು, ಕನಕಪುರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ಅಧ್ಯಕ್ಷರಾಗಿ ಸಾತನೂರಿನ ನಾಗರಾಜು ಆಯ್ಕೆಯಾಗಿದ್ದಾರೆ. <br /> <br /> ಲೋಕಸಭಾ ಕ್ಷೇತ್ರದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆಂಪರಾಜು ಅಭಿನಂದನೆ ಸ್ವೀಕರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷಕೆ ಯುವಕರನ್ನು ಸಂಘಟಿಸಲು ಹಾಗೂ ಅರ್ಹರಿಗೆ ಅವಕಾಶ ಕಲ್ಪಿಸಲು ಕಾಂಗ್ರೆಸ್ ಪಕ್ಷದ ಯುವ ನೇತಾರ ರಾಹುಲ್ಗಾಂಧಿಯವರು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲೇ ಯುವ ಅಧ್ಯಕ್ಷರ ಚುನಾವಣೆ ನಡೆಸಿದ್ದಾರೆ. <br /> <br /> ರಾಷ್ಟ್ರವ್ಯಾಪ್ತಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಕಾಂಗ್ರೆಸ್ ಚುನಾವಣಿಯ ಮೂಲಕ ಕಾಂಗ್ರೆಸ್ ಸೇರ್ಪಡೆಗೊಂಡು ಉತ್ತಮ ಪಕ್ಷವಾಗಿ ದೇಶದಲ್ಲಿ ರೂಪಿಸುವ ಕಾರ್ಯವನ್ನು ಯುವಜನತೆ ಮಾಡಬೇಕಾಗಿದೆ ಎಂದರು.<br /> <br /> ಕನಕಪುರ ಕ್ಷೇತ್ರದ ಶಾಸಕರಾದ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಲ್ಲಿ ಯುವ ಸಮೂಹಕ್ಕೆ ಹೆಚ್ಚಿನ ನಾಯಕತ್ವ ನೀಡಲು ಮುಂದಾಗಿದ್ದು ಆ ದಿಸೆಯಲ್ಲಿ ಕನಕಪುರ ತಾಲ್ಲೂಕಿನಲ್ಲಿ 11 ಸಾವಿರಕ್ಕೂ ಹೆಚ್ಚು ಸದಸ್ಯತ್ವವನ್ನು ನೀಡಿರುವುದರಿಂದ ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆದು ಕೊಂಡಿದೆ ಎಂದರು.<br /> <br /> ಮುಂದಿನ ದಿನಗಳಲ್ಲಿ 50 ಸಾವಿರಕ್ಕೂ ಹೆಚ್ಚುಮಂದಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯುವಕರನ್ನು ಸಂಘಟಿಸುವುದರ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುತ್ತೇವೆ, ಇದಕ್ಕೆ ಪಕ್ಷದ ನಾಯಕರ ಬೆಂಬಲ ಅಗತ್ಯವಾಗಿ ಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>