<p><strong>ಹೊಸಕೋಟೆ: </strong>ಕನಿಷ್ಠ ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿ ತಾಲ್ಲೂಕಿನ ಗ್ರಾಮ ಪಂಚಾಯತಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಸಿಐಟಿಯು ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ನೌಕರರು ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಗೋಪಾಲಕೃಷ್ಣ, `ಸರ್ಕಾರ ನೌಕರರ ಸೇವೆಯನ್ನು ಖಾಯಂಗೊಳಿಸಬೇಕು. <br /> <br /> ನೌಕರರ ಕನಿಷ್ಠ ವೇತನ, ಜನಶ್ರೀ ವಿಮಾ ಯೋಜನೆ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ ತಾಲ್ಲೂಕಿನ ಗ್ರಾಮ ಪಂಚಾಯತಿಗಳು ಈ ಸರ್ಕಾರಿ ಆದೇಶಗಳನ್ನು ಜಾರಿಗೆ ತರುತ್ತಿಲ್ಲ~ ಎಂದು ಆರೋಪಿಸಿದರು.<br /> <br /> ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹಯ್ಯ ಮಾತನಾಡಿ, `ಗ್ರಾಮ ಪಂಚಾಯತಿಗಳಲ್ಲಿ ಸೇವೆಯಲಿರುವ ನೌಕರರಿಗೆ ಕೆಲಸದ ಭದ್ರತೆ ಇಲ್ಲದಂತಾಗಿದೆ. ಕೆಲವರಿಗೆ ಹಲವಾರು ತಿಂಗಳಿಂದ ವೇತನವೂ ಪಾವತಿ ಆಗಿಲ್ಲ. ಸರ್ಕಾರದ ಆದೇಶದಂತೆ ಸಿಬ್ಬಂದಿ ಖಾತೆ, ರಜೆ ಸೌಲಭ್ಯ, ಬಡ್ತಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳಿಗೆ ಸ್ಥಳೀಯ ಸಂಸ್ಥೆಗಳು ಆದ್ಯತೆ ನೀಡುತ್ತಿಲ್ಲ~ ಎಂದು ಆಗ್ರಹಿಸಿದರು. ಸಂಘದ ಎಚ್.ಎನ್.ಮೋಹನ್ಬಾಬು, ಜಿ.ಶಂಕರಪ್ಪ ಮಾತನಾಡಿದರು. ಪ್ರತಿಭಟನೆಯ ನಂತರ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಕನಿಷ್ಠ ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿ ತಾಲ್ಲೂಕಿನ ಗ್ರಾಮ ಪಂಚಾಯತಿ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಸಿಐಟಿಯು ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ನೌಕರರು ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಗೋಪಾಲಕೃಷ್ಣ, `ಸರ್ಕಾರ ನೌಕರರ ಸೇವೆಯನ್ನು ಖಾಯಂಗೊಳಿಸಬೇಕು. <br /> <br /> ನೌಕರರ ಕನಿಷ್ಠ ವೇತನ, ಜನಶ್ರೀ ವಿಮಾ ಯೋಜನೆ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ ಆದೇಶವಿದ್ದರೂ ತಾಲ್ಲೂಕಿನ ಗ್ರಾಮ ಪಂಚಾಯತಿಗಳು ಈ ಸರ್ಕಾರಿ ಆದೇಶಗಳನ್ನು ಜಾರಿಗೆ ತರುತ್ತಿಲ್ಲ~ ಎಂದು ಆರೋಪಿಸಿದರು.<br /> <br /> ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನರಸಿಂಹಯ್ಯ ಮಾತನಾಡಿ, `ಗ್ರಾಮ ಪಂಚಾಯತಿಗಳಲ್ಲಿ ಸೇವೆಯಲಿರುವ ನೌಕರರಿಗೆ ಕೆಲಸದ ಭದ್ರತೆ ಇಲ್ಲದಂತಾಗಿದೆ. ಕೆಲವರಿಗೆ ಹಲವಾರು ತಿಂಗಳಿಂದ ವೇತನವೂ ಪಾವತಿ ಆಗಿಲ್ಲ. ಸರ್ಕಾರದ ಆದೇಶದಂತೆ ಸಿಬ್ಬಂದಿ ಖಾತೆ, ರಜೆ ಸೌಲಭ್ಯ, ಬಡ್ತಿ ನೀಡುವುದು ಸೇರಿದಂತೆ ಹಲವು ಸೌಲಭ್ಯಗಳಿಗೆ ಸ್ಥಳೀಯ ಸಂಸ್ಥೆಗಳು ಆದ್ಯತೆ ನೀಡುತ್ತಿಲ್ಲ~ ಎಂದು ಆಗ್ರಹಿಸಿದರು. ಸಂಘದ ಎಚ್.ಎನ್.ಮೋಹನ್ಬಾಬು, ಜಿ.ಶಂಕರಪ್ಪ ಮಾತನಾಡಿದರು. ಪ್ರತಿಭಟನೆಯ ನಂತರ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>