<p><strong>ಚಿತ್ರದುರ್ಗ: </strong>ಗ್ರಾಮೀಣ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಮತ್ತು ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಅಂಗವಿಕಲರು ಪ್ರತಿಭಟನೆ ನಡೆಸಿದರು.<br /> <br /> ಕರ್ನಾಟಕ ರಾಜ್ಯದ ಅಂಗವಿಕಲ ವಿವಿಧೋದ್ದೇಶ ಹಾಗೂ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಜಿಲ್ಲಾ ಶಾಖೆ ವತಿಯಿಂದ ಈ ಪ್ರತಿಭಟನೆ ನಡೆಯಿತು.<br /> 2007-08ನೇ ಸಾಲಿನಲ್ಲಿ ಗ್ರಾಮೀಣ ಅಂಗವಿಕಲರ ಪುನರ್ವಸತಿ ಯೋಜನೆ ಅಡಿಯಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ರಾಜ್ಯದ 5628 ಗ್ರಾಮ ಪಂಚಾಯ್ತಿಗಳಿಗೆ ಮತ್ತು 176 ತಾಲ್ಲೂಕು ಪಂಚಾಯ್ತಿಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾಭ್ಯಾಸ ಮುಗಿಸಿದ ಅಂಗವಿಕಲರನ್ನು ಗೌರವಧನ ಆಧಾರದ ಮೇಲೆ ನೇಮಿಸಲಾಯಿತು. <br /> <br /> ಅಂಗವಿಕಲರ ಮನೆ ಬಾಗಿಲಿಗೆ ಸರ್ಕಾರಿ ತಲುಪಿಸುವ ಉದ್ದೇಶದಿಂದ ಈ ಅಂಗವಿಕಲರನ್ನು ನೇಮಿಸಲಾಗಿತ್ತು. ಗ್ರಾ.ಪಂ. ಕಾರ್ಯಕರ್ತರಿಗೆ ರೂ.700 ಮತ್ತು ತಾ.ಪಂ. ಕಾರ್ಯಕರ್ತರಿಗೆ ರೂ.1800 ಮಾಸಿಕ ಗೌರವ ಧನ ನೀಡಲಾಗುತ್ತಿದೆ. ಈ ಅಲ್ಪಮೊತ್ತದಲ್ಲಿ ಬದುಕುವುದು ಕಷ್ಟವಾಗುತ್ತಿದೆ ಎಂದು ದೂರಿದರು.<br /> <br /> ಕಳೆದ 4 ವರ್ಷಗಳಿಂದ ಕನಿಷ್ಠ ವೇತನವನ್ನು ಜಾರಿಗೊಳಿಸಿಲ್ಲ. ಈಗ ದೊರೆಯುತ್ತಿರುವ ಗೌರವಧನದಲ್ಲಿ ಬದುಕು ಸಾಗಿಸುವುದು ಕಷ್ಟಕರ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ದೂರಿದರು.<br /> <br /> ಸರ್ಕಾರ ತಮಗೆ ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸಬೇಕು ಮತ್ತು ಆರೋಗ್ಯ ಮತ್ತು ಜೀವ ವಿಮೆ ಕಲ್ಪಿಸಬೇಕು ಎಂದು ಬೇಡಿಕೆಗಳನ್ನು ಮಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> ಒಕ್ಕೂಟದ ಅಧ್ಯಕ್ಷ ದಾದಾಪೀರ್, ಉಪಾಧ್ಯಕ್ಷ ಎನ್. ಮೈಲಾರಪ್ಪ, ಖಜಾಂಚಿ ಎನ್. ಹನುಮಂತಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ಕೆ. ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಡಿ. ಅಜ್ಜಪ್ಪ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಗ್ರಾಮೀಣ ಮತ್ತು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಮತ್ತು ಸೇವಾ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಗರದಲ್ಲಿ ಶುಕ್ರವಾರ ಅಂಗವಿಕಲರು ಪ್ರತಿಭಟನೆ ನಡೆಸಿದರು.<br /> <br /> ಕರ್ನಾಟಕ ರಾಜ್ಯದ ಅಂಗವಿಕಲ ವಿವಿಧೋದ್ದೇಶ ಹಾಗೂ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಜಿಲ್ಲಾ ಶಾಖೆ ವತಿಯಿಂದ ಈ ಪ್ರತಿಭಟನೆ ನಡೆಯಿತು.<br /> 2007-08ನೇ ಸಾಲಿನಲ್ಲಿ ಗ್ರಾಮೀಣ ಅಂಗವಿಕಲರ ಪುನರ್ವಸತಿ ಯೋಜನೆ ಅಡಿಯಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ ರಾಜ್ಯದ 5628 ಗ್ರಾಮ ಪಂಚಾಯ್ತಿಗಳಿಗೆ ಮತ್ತು 176 ತಾಲ್ಲೂಕು ಪಂಚಾಯ್ತಿಗಳಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ವಿದ್ಯಾಭ್ಯಾಸ ಮುಗಿಸಿದ ಅಂಗವಿಕಲರನ್ನು ಗೌರವಧನ ಆಧಾರದ ಮೇಲೆ ನೇಮಿಸಲಾಯಿತು. <br /> <br /> ಅಂಗವಿಕಲರ ಮನೆ ಬಾಗಿಲಿಗೆ ಸರ್ಕಾರಿ ತಲುಪಿಸುವ ಉದ್ದೇಶದಿಂದ ಈ ಅಂಗವಿಕಲರನ್ನು ನೇಮಿಸಲಾಗಿತ್ತು. ಗ್ರಾ.ಪಂ. ಕಾರ್ಯಕರ್ತರಿಗೆ ರೂ.700 ಮತ್ತು ತಾ.ಪಂ. ಕಾರ್ಯಕರ್ತರಿಗೆ ರೂ.1800 ಮಾಸಿಕ ಗೌರವ ಧನ ನೀಡಲಾಗುತ್ತಿದೆ. ಈ ಅಲ್ಪಮೊತ್ತದಲ್ಲಿ ಬದುಕುವುದು ಕಷ್ಟವಾಗುತ್ತಿದೆ ಎಂದು ದೂರಿದರು.<br /> <br /> ಕಳೆದ 4 ವರ್ಷಗಳಿಂದ ಕನಿಷ್ಠ ವೇತನವನ್ನು ಜಾರಿಗೊಳಿಸಿಲ್ಲ. ಈಗ ದೊರೆಯುತ್ತಿರುವ ಗೌರವಧನದಲ್ಲಿ ಬದುಕು ಸಾಗಿಸುವುದು ಕಷ್ಟಕರ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ ಎಂದು ದೂರಿದರು.<br /> <br /> ಸರ್ಕಾರ ತಮಗೆ ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸಬೇಕು ಮತ್ತು ಆರೋಗ್ಯ ಮತ್ತು ಜೀವ ವಿಮೆ ಕಲ್ಪಿಸಬೇಕು ಎಂದು ಬೇಡಿಕೆಗಳನ್ನು ಮಂಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.<br /> ಒಕ್ಕೂಟದ ಅಧ್ಯಕ್ಷ ದಾದಾಪೀರ್, ಉಪಾಧ್ಯಕ್ಷ ಎನ್. ಮೈಲಾರಪ್ಪ, ಖಜಾಂಚಿ ಎನ್. ಹನುಮಂತಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ಕೆ. ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ಡಿ. ಅಜ್ಜಪ್ಪ ಮತ್ತಿತರರು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>