<p>ಗಂಗಾವತಿ: ಕೈಲಾಗದು ಎಂದು ಸರ್.ಎಂ. ವಿಶ್ವೇಶ್ವರಯ್ಯ ಕೈಕಟ್ಟಿ ಕುಳಿತಿದ್ದರೆ ಅಥವಾ ಕನ್ನಂಬಾಡಿ ಕಟ್ಟದೇ ಹೋಗಿದ್ದರೆ, ಇಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಕಟ್ಟಲಾಗುತ್ತಿರಲಿಲ್ಲ ಎಂದು ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರುದ್ರೇಶ ಎಸ್. ಉಜ್ಜನಕೊಪ್ಪ ಹೇಳಿದರು. <br /> <br /> ಸರ್.ಎಂ. ವಿಶ್ವೇಶ್ವರಯ್ಯ ಅವರ 151ನೇ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಮರಳಿ ಗ್ರಾಮದ ಎಂ.ಎಸ್.ಎಂ.ಎಸ್. ರೂರಲ್ ಪಾಲಿಟೆಕ್ನಿಕ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಎಂಜಿನಿಯರ್ಸ್ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಜೀವನದಲ್ಲಿ ನಾವು ವಿಶ್ವೇಶ್ವರಯ್ಯ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅವರ ಸ್ಥಾನದಷ್ಟು ಎತ್ತರಕ್ಕೆ ಬೆಳೆಯದಿದ್ದರೂ ಕನಿಷ್ಠ ಶಿಸ್ತು ಮತ್ತು ಕ್ರಮಬದ್ಧತೆ ರೂಢಿ ಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. <br /> <br /> ಇಂದು ಭಾರತದಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಪಡೆದು ವಿದೇಶಕ್ಕೆ ಹಾರುವವರ ಸಂಖ್ಯೆ ಹೆಚ್ಚಾಗಿದೆ. ನಾನು ಕಲಿತ ಶಾಲೆ, ಊರು ಮತ್ತು ದೇಶಕ್ಕೆ ಏನಾದರೂ ಮಾಡಿ ಋಣ ತೀರಿಸಬೇಕೆಂಬ ದೇಶ ಪ್ರೇಮ, ಅಭಿಮಾನ ಯುವಕರು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.<br /> <br /> ಒಂದೊಮ್ಮೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ಹುಬ್ಬಳ್ಳಿ-ಧಾರವಾಡವನ್ನು ಅವಲಂಭಿಸಬೇಕಾದ ಸ್ಥಿತಿ ಇತ್ತು. ಇದೀಗ ರಾಯಚೂರು-ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಸುಧಾರಿತ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಬಲ್ಲವು.<br /> <br /> ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಭಾಗದ ಮಕ್ಕಳು ಅಂಥ ಶಿಕ್ಷಣ ಪಡೆಯುವಂತಾದರೆ, ದೇಶ ಕಟ್ಟುವ ಕೆಲಸ ಸುಲಭವಾಗಲಿದೆ ಎಂದು ರುದ್ರೇಶ ಎಸ್. ಉಜ್ಜೀನಕೊಪ್ಪ ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಡಿವೈಎಸ್ಪಿ ಡಿ.ಎಲ್. ಹಣಗಿ ಮಾತನಾಡಿ, ವಿದ್ಯಾರ್ಥಿ ಜೀವನವನ್ನು ಪ್ರತಿಯೊಬ್ಬರು ಸವಾಲಾಗಿ ಸ್ವೀಕರಿಸಬೇಕು. ಮಹಾನ್ ವ್ಯಕ್ತಿಗಳ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಬರಬೇಕೆಂದು ಕರೆ ನೀಡಿದರು. <br /> <br /> ಕಲ್ಮಠದ ಡಾ. ಕೊಟ್ಟೂರು ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಸಂಗನಬಸವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಷಯದಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.<br /> <br /> ಎಂ.ಎನ್.ಬಿ.ವಿ. ಟ್ರಸ್ಟ್ ಅಧ್ಯಕ್ಷ ಸಿದ್ದರಾಮಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎನ್. ನಂದುಕುಮಾರ. ತಿಪ್ಪೇರುದ್ರಸ್ವಾಮಿ, ಎಸ್.ಬಿ.ಐ. ವ್ಯವಸ್ಥಾಪಕ ಶಶಿಕಾಂತ ಮಾನೆ, ಎಚ್.ಎಂ. ಗುರುಪಾದ ಸ್ವಾಮಿ, ಎಚ್.ಎಂ. ಘನಮಠ ಸ್ವಾಮಿ, ಎಚ್.ಎಂ. ಚನ್ನಬಸಯ್ಯ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಕೈಲಾಗದು ಎಂದು ಸರ್.ಎಂ. ವಿಶ್ವೇಶ್ವರಯ್ಯ ಕೈಕಟ್ಟಿ ಕುಳಿತಿದ್ದರೆ ಅಥವಾ ಕನ್ನಂಬಾಡಿ ಕಟ್ಟದೇ ಹೋಗಿದ್ದರೆ, ಇಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯನ್ನು ಕಟ್ಟಲಾಗುತ್ತಿರಲಿಲ್ಲ ಎಂದು ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ರುದ್ರೇಶ ಎಸ್. ಉಜ್ಜನಕೊಪ್ಪ ಹೇಳಿದರು. <br /> <br /> ಸರ್.ಎಂ. ವಿಶ್ವೇಶ್ವರಯ್ಯ ಅವರ 151ನೇ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಮರಳಿ ಗ್ರಾಮದ ಎಂ.ಎಸ್.ಎಂ.ಎಸ್. ರೂರಲ್ ಪಾಲಿಟೆಕ್ನಿಕ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಎಂಜಿನಿಯರ್ಸ್ ದಿನಾಚರಣೆಯಲ್ಲಿ ಮಾತನಾಡಿದರು.<br /> <br /> ಜೀವನದಲ್ಲಿ ನಾವು ವಿಶ್ವೇಶ್ವರಯ್ಯ ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅವರ ಸ್ಥಾನದಷ್ಟು ಎತ್ತರಕ್ಕೆ ಬೆಳೆಯದಿದ್ದರೂ ಕನಿಷ್ಠ ಶಿಸ್ತು ಮತ್ತು ಕ್ರಮಬದ್ಧತೆ ರೂಢಿ ಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. <br /> <br /> ಇಂದು ಭಾರತದಲ್ಲಿ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಪಡೆದು ವಿದೇಶಕ್ಕೆ ಹಾರುವವರ ಸಂಖ್ಯೆ ಹೆಚ್ಚಾಗಿದೆ. ನಾನು ಕಲಿತ ಶಾಲೆ, ಊರು ಮತ್ತು ದೇಶಕ್ಕೆ ಏನಾದರೂ ಮಾಡಿ ಋಣ ತೀರಿಸಬೇಕೆಂಬ ದೇಶ ಪ್ರೇಮ, ಅಭಿಮಾನ ಯುವಕರು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.<br /> <br /> ಒಂದೊಮ್ಮೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ಹುಬ್ಬಳ್ಳಿ-ಧಾರವಾಡವನ್ನು ಅವಲಂಭಿಸಬೇಕಾದ ಸ್ಥಿತಿ ಇತ್ತು. ಇದೀಗ ರಾಯಚೂರು-ಕೊಪ್ಪಳ ಜಿಲ್ಲೆಯಲ್ಲಿ ಸಾಕಷ್ಟು ಸುಧಾರಿತ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗುತ್ತಿದ್ದು, ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಬಲ್ಲವು.<br /> <br /> ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಕೇವಲ ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗದೇ ಗ್ರಾಮೀಣ ಭಾಗದ ಮಕ್ಕಳು ಅಂಥ ಶಿಕ್ಷಣ ಪಡೆಯುವಂತಾದರೆ, ದೇಶ ಕಟ್ಟುವ ಕೆಲಸ ಸುಲಭವಾಗಲಿದೆ ಎಂದು ರುದ್ರೇಶ ಎಸ್. ಉಜ್ಜೀನಕೊಪ್ಪ ಅಭಿಪ್ರಾಯಪಟ್ಟರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಡಿವೈಎಸ್ಪಿ ಡಿ.ಎಲ್. ಹಣಗಿ ಮಾತನಾಡಿ, ವಿದ್ಯಾರ್ಥಿ ಜೀವನವನ್ನು ಪ್ರತಿಯೊಬ್ಬರು ಸವಾಲಾಗಿ ಸ್ವೀಕರಿಸಬೇಕು. ಮಹಾನ್ ವ್ಯಕ್ತಿಗಳ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಬರಬೇಕೆಂದು ಕರೆ ನೀಡಿದರು. <br /> <br /> ಕಲ್ಮಠದ ಡಾ. ಕೊಟ್ಟೂರು ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಸಂಗನಬಸವ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಿವಿಧ ವಿಷಯದಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.<br /> <br /> ಎಂ.ಎನ್.ಬಿ.ವಿ. ಟ್ರಸ್ಟ್ ಅಧ್ಯಕ್ಷ ಸಿದ್ದರಾಮಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎನ್. ನಂದುಕುಮಾರ. ತಿಪ್ಪೇರುದ್ರಸ್ವಾಮಿ, ಎಸ್.ಬಿ.ಐ. ವ್ಯವಸ್ಥಾಪಕ ಶಶಿಕಾಂತ ಮಾನೆ, ಎಚ್.ಎಂ. ಗುರುಪಾದ ಸ್ವಾಮಿ, ಎಚ್.ಎಂ. ಘನಮಠ ಸ್ವಾಮಿ, ಎಚ್.ಎಂ. ಚನ್ನಬಸಯ್ಯ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>