<p>ಕೆಂಗೇರಿ: `ಕನ್ನಡದ ನಿಜವಾದ ಕುಲ ಪುರೋಹಿತ ಡೆಪ್ಯುಟಿ ಚನ್ನಬಸಪ್ಪ. ಅವರು ಮಾಡಿದ ಕನ್ನಡ ಕಟ್ಟುವ ಕೆಲಸ ಅಮೋಘವಾದದ್ದು~ ಎಂದು ಸಾಹಿತಿ `ಪುಸ್ತಕಮನೆ~ ಹರಿಹರಪ್ರಿಯ ಹೇಳಿದರು.<br /> <br /> ನಗರದ ಕೆಂಗೇರಿಯಲ್ಲಿ ಇತ್ತೀಚೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಕನ್ನಡದಲ್ಲಿ ಆಲೂರು ವೆಂಕಟರಾಯರಿಗೂ ಮೊದಲು ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿದ್ದವರು ಡೆಪ್ಯೂಟಿ ಚನ್ನಬಸಪ್ಪ. ಹೀಗಾಗಿ ಕನ್ನಡದ ಕುಲಪುರೋಹಿತರು ಆಲೂರು ವೆಂಕಟರಾಯರಲ್ಲ, ಬದಲಿಗೆ ಡೆಪ್ಯೂಟಿ ಚೆನ್ನಬಸಪ್ಪ ಅವರು. ಹಾಗೆಯೇ ಮಕ್ಕಳ ಸಾಹಿತ್ಯವನ್ನು ಮೊದಲು ರಚಿಸಿದವರು ಪಂಜೆ ಮಂಗೇಶರಾಯರೇ ಹೊರತು ಜಿ.ಪಿ.ರಾಜರತ್ನಂ ಅಲ್ಲ~ ಎಂದರು.<br /> <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದರು. ಸಮ್ಮೇಳನಕ್ಕೂ ಮುನ್ನ ಕೆಂಗೇರಿಯ ಪ್ರಮುಖ ರಸ್ತೆಗಳಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು.<br /> <br /> ಸಮ್ಮೇಳನದಲ್ಲಿ ಕವಿಗೋಷ್ಠಿ, ಜನಪದ ಗೀತ ಗಾಯನ ಮತ್ತು ವಿಚಾರ ಸಂಕಿರಣಗಳು ನಡೆದವು. ವಿವಿಧ ಕ್ಷೇತ್ರಗಳ ವೃತ್ತಿ ಸಾಧಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.<br /> <br /> ಸಮ್ಮೇಳನದಲ್ಲಿ ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯ, ಚಲನಚಿತ್ರ ನಟಿ ಜಯಮಾಲಾ, `ಪ್ರಜಾವಾಣಿ~ಯ ಸಹಾಯಕ ಸಂಪಾದಕ ಲಕ್ಷ್ಮಣ ಕೊಡಸೆ, ಸುದ್ದಿ ಸಂಪಾದಕ ಗಂಗಾಧರ ಮೊದಲಿಯಾರ್, ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಗೇರಿ: `ಕನ್ನಡದ ನಿಜವಾದ ಕುಲ ಪುರೋಹಿತ ಡೆಪ್ಯುಟಿ ಚನ್ನಬಸಪ್ಪ. ಅವರು ಮಾಡಿದ ಕನ್ನಡ ಕಟ್ಟುವ ಕೆಲಸ ಅಮೋಘವಾದದ್ದು~ ಎಂದು ಸಾಹಿತಿ `ಪುಸ್ತಕಮನೆ~ ಹರಿಹರಪ್ರಿಯ ಹೇಳಿದರು.<br /> <br /> ನಗರದ ಕೆಂಗೇರಿಯಲ್ಲಿ ಇತ್ತೀಚೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> `ಕನ್ನಡದಲ್ಲಿ ಆಲೂರು ವೆಂಕಟರಾಯರಿಗೂ ಮೊದಲು ಕನ್ನಡ ಕಟ್ಟುವ ಕೆಲಸದಲ್ಲಿ ತೊಡಗಿದ್ದವರು ಡೆಪ್ಯೂಟಿ ಚನ್ನಬಸಪ್ಪ. ಹೀಗಾಗಿ ಕನ್ನಡದ ಕುಲಪುರೋಹಿತರು ಆಲೂರು ವೆಂಕಟರಾಯರಲ್ಲ, ಬದಲಿಗೆ ಡೆಪ್ಯೂಟಿ ಚೆನ್ನಬಸಪ್ಪ ಅವರು. ಹಾಗೆಯೇ ಮಕ್ಕಳ ಸಾಹಿತ್ಯವನ್ನು ಮೊದಲು ರಚಿಸಿದವರು ಪಂಜೆ ಮಂಗೇಶರಾಯರೇ ಹೊರತು ಜಿ.ಪಿ.ರಾಜರತ್ನಂ ಅಲ್ಲ~ ಎಂದರು.<br /> <br /> ಇಂಧನ ಸಚಿವೆ ಶೋಭಾ ಕರಂದ್ಲಾಜೆ ಭುವನೇಶ್ವರಿದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದರು. ಸಮ್ಮೇಳನಕ್ಕೂ ಮುನ್ನ ಕೆಂಗೇರಿಯ ಪ್ರಮುಖ ರಸ್ತೆಗಳಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಿತು.<br /> <br /> ಸಮ್ಮೇಳನದಲ್ಲಿ ಕವಿಗೋಷ್ಠಿ, ಜನಪದ ಗೀತ ಗಾಯನ ಮತ್ತು ವಿಚಾರ ಸಂಕಿರಣಗಳು ನಡೆದವು. ವಿವಿಧ ಕ್ಷೇತ್ರಗಳ ವೃತ್ತಿ ಸಾಧಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.<br /> <br /> ಸಮ್ಮೇಳನದಲ್ಲಿ ಹಿರಿಯ ವಿದ್ವಾಂಸ ಡಾ.ಬನ್ನಂಜೆ ಗೋವಿಂದಾಚಾರ್ಯ, ಚಲನಚಿತ್ರ ನಟಿ ಜಯಮಾಲಾ, `ಪ್ರಜಾವಾಣಿ~ಯ ಸಹಾಯಕ ಸಂಪಾದಕ ಲಕ್ಷ್ಮಣ ಕೊಡಸೆ, ಸುದ್ದಿ ಸಂಪಾದಕ ಗಂಗಾಧರ ಮೊದಲಿಯಾರ್, ಯಶವಂತಪುರ ವಿಧಾನಸಭಾ ಕ್ಷೇತ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಎಸ್.ಸುಧೀಂದ್ರ ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>