<p>ಕನಕಪುರ: ಎಲ್ಲರನ್ನು ಒಗ್ಗೂಡಿಸಿಕೊಂಡು ಕನ್ನಡಾಭಿಮಾನವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಕನ್ನಡದ ತೇರನ್ನು ಎಳೆಯಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಹೇಳಿದರು. <br /> <br /> ಪಟ್ಟಣದ ಎಕ್ಸ್ ಮುನಿಸಿಪಲ್ ಹೈಸ್ಕೂಲಿನಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಕನಕಪುರ ತಾಲ್ಲೂಕಿನ ಬಹುತೇಕ ಗ್ರಾಮಗಳು ಗಡಿನಾಡು ಪ್ರದೇಶಗಳಾಗಿವೆ. ಈ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.<br /> <br /> ಹೋಬಳಿ ಮಟ್ಟದಲ್ಲಿ ಯುವಕರಿಗೆ ಜವಾಬ್ದಾರಿ ನೀಡಿ ಗ್ರಾಮಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ನಡೆಸಬೇಕು. ಕಸಾಪ ಕಾರ್ಯಕ್ರಮಗಳು ದತ್ತಿ ಸಹಕಾರದಿಂದ ನಡೆಯುತ್ತಿದ್ದು ತಾಲ್ಲೂಕಿನಲ್ಲಿ ಕೇವಲ 5 ದತ್ತಿಗಳು ಮಾತ್ರ ಇವೆ. ಕನಿಷ್ಠ 25 ಸಾವಿರ ರೂಪಾಯಿಗಳಂತೆ ದಾನಿಗಳಿಂದ ದತ್ತಿ ಸಂಗ್ರಹಿಸುವಂತಾಗಬೇಕು ಎಂದು ಅವರು ಸಲಹೆ ನೀಡಿದರು. <br /> <br /> ಕಸಾಪ ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಪ್ರತಿ ತಾಲ್ಲೂಕಿನಲ್ಲೂ ಒಂದು ಕನ್ನಡ ಭವನವನ್ನು ನಿರ್ಮಾಣ ಮಾಡಬೇಕು. ಇದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ದಾನಿಗಳು, ಸಾಹಿತ್ಯಾಭಿಮಾನಿಗಳಿಂದ ಆರ್ಥಿಕ ಸಂಪನ್ಮೂಲ ದೊರೆಯುವಂತಾಗಬೇಕು ಎಂದು ಹೇಳಿದರು.<br /> <br /> ಜಯಕರ್ನಾಟಕ ಸಂಘಟನೆಯ ಗೌರವಾಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಹೋರಾಟಗಳು ನಿಂತ ನೀರಾಗಬಾರದು. ಗುಂಪುಗಾರಿಕೆ, ವಿರೋಧಗಳಿಗೆ ಅವಕಾಶ ಕೊಡದೆ, ಎಲ್ಲರನ್ನೂ ಸಹಕಾರಕ್ಕೆ ತೆಗೆದುಕೊಂಡು ತಳಮಟ್ಟದಿಂದ ಕನ್ನಡದ ಸಂಘಟನೆ ಮಾಡಬೇಕು. ಮನೆಗೊಂದು ಕನ್ನಡ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡವನ್ನು ಗಟ್ಟಿಗೊಳಿಸಬೇಕು ಎಂದರು.<br /> <br /> ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಅರಸೀಕರೆ ಮಾಯಪ್ಪ ಮಾತನಾಡಿ. ಕನ್ನಡ ಭಾಷೆಗೆ ಕುತ್ತು ಬಂದಿರುವ ಇಂದಿನ ಸಮಯದಲ್ಲಿ ಅದರ ಉಳಿವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಹೇಳಿದರು.<br /> <br /> ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, ಎಲ್ಲರ ಸಹಕಾರ ಪಡೆದು ಕನ್ನಡ ಸಾಹಿತ್ಯವನ್ನು ಉತ್ಕೃಷ್ಟವಾಗಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. <br /> <br /> ನಿಕಟ ಪೂರ್ವ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಶಸ್ವಿ ಮೂರು ವರ್ಷದ ಅಧಿಕಾರ ಪೂರೈಸಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. <br /> <br /> ಕೋಶಾಧ್ಯಕ್ಷ ಕನಕಪುರ ಮಹೇಶ್, ಚನ್ನಪಟ್ಟಣ ಅಧ್ಯಕ್ಷ ಶಿವಮಾದು, ಜಿಲ್ಲಾ ನಿಕಟಪೂರ್ವ ಸಂಚಾಲಕ ಆರ್.ವಿ.ನಾರಾಯಣ, ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ಜಲಾನಯನ ಇಲಾಖೆಯ ಹುಚ್ಚಪ್ಪ, ಮರಳವಾಡಿ ಶಿವರಾಜು, ಮುನಿಯಪ್ಪ, ಶಿವರಾಜು ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಎಲ್ಲರನ್ನು ಒಗ್ಗೂಡಿಸಿಕೊಂಡು ಕನ್ನಡಾಭಿಮಾನವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಕನ್ನಡದ ತೇರನ್ನು ಎಳೆಯಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಹೇಳಿದರು. <br /> <br /> ಪಟ್ಟಣದ ಎಕ್ಸ್ ಮುನಿಸಿಪಲ್ ಹೈಸ್ಕೂಲಿನಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಕನಕಪುರ ತಾಲ್ಲೂಕಿನ ಬಹುತೇಕ ಗ್ರಾಮಗಳು ಗಡಿನಾಡು ಪ್ರದೇಶಗಳಾಗಿವೆ. ಈ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.<br /> <br /> ಹೋಬಳಿ ಮಟ್ಟದಲ್ಲಿ ಯುವಕರಿಗೆ ಜವಾಬ್ದಾರಿ ನೀಡಿ ಗ್ರಾಮಮಟ್ಟದಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ನಡೆಸಬೇಕು. ಕಸಾಪ ಕಾರ್ಯಕ್ರಮಗಳು ದತ್ತಿ ಸಹಕಾರದಿಂದ ನಡೆಯುತ್ತಿದ್ದು ತಾಲ್ಲೂಕಿನಲ್ಲಿ ಕೇವಲ 5 ದತ್ತಿಗಳು ಮಾತ್ರ ಇವೆ. ಕನಿಷ್ಠ 25 ಸಾವಿರ ರೂಪಾಯಿಗಳಂತೆ ದಾನಿಗಳಿಂದ ದತ್ತಿ ಸಂಗ್ರಹಿಸುವಂತಾಗಬೇಕು ಎಂದು ಅವರು ಸಲಹೆ ನೀಡಿದರು. <br /> <br /> ಕಸಾಪ ಶತಮಾನೋತ್ಸವದ ಹೊಸ್ತಿಲಲ್ಲಿ ಇರುವುದರಿಂದ ಪ್ರತಿ ತಾಲ್ಲೂಕಿನಲ್ಲೂ ಒಂದು ಕನ್ನಡ ಭವನವನ್ನು ನಿರ್ಮಾಣ ಮಾಡಬೇಕು. ಇದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ದಾನಿಗಳು, ಸಾಹಿತ್ಯಾಭಿಮಾನಿಗಳಿಂದ ಆರ್ಥಿಕ ಸಂಪನ್ಮೂಲ ದೊರೆಯುವಂತಾಗಬೇಕು ಎಂದು ಹೇಳಿದರು.<br /> <br /> ಜಯಕರ್ನಾಟಕ ಸಂಘಟನೆಯ ಗೌರವಾಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಹೋರಾಟಗಳು ನಿಂತ ನೀರಾಗಬಾರದು. ಗುಂಪುಗಾರಿಕೆ, ವಿರೋಧಗಳಿಗೆ ಅವಕಾಶ ಕೊಡದೆ, ಎಲ್ಲರನ್ನೂ ಸಹಕಾರಕ್ಕೆ ತೆಗೆದುಕೊಂಡು ತಳಮಟ್ಟದಿಂದ ಕನ್ನಡದ ಸಂಘಟನೆ ಮಾಡಬೇಕು. ಮನೆಗೊಂದು ಕನ್ನಡ ಕಾರ್ಯಕ್ರಮ ನಡೆಸುವ ಮೂಲಕ ಕನ್ನಡವನ್ನು ಗಟ್ಟಿಗೊಳಿಸಬೇಕು ಎಂದರು.<br /> <br /> ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಅರಸೀಕರೆ ಮಾಯಪ್ಪ ಮಾತನಾಡಿ. ಕನ್ನಡ ಭಾಷೆಗೆ ಕುತ್ತು ಬಂದಿರುವ ಇಂದಿನ ಸಮಯದಲ್ಲಿ ಅದರ ಉಳಿವಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕೆಂದು ಹೇಳಿದರು.<br /> <br /> ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, ಎಲ್ಲರ ಸಹಕಾರ ಪಡೆದು ಕನ್ನಡ ಸಾಹಿತ್ಯವನ್ನು ಉತ್ಕೃಷ್ಟವಾಗಿ ಬೆಳೆಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. <br /> <br /> ನಿಕಟ ಪೂರ್ವ ಅಧ್ಯಕ್ಷ ಕೂ.ಗಿ.ಗಿರಿಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಶಸ್ವಿ ಮೂರು ವರ್ಷದ ಅಧಿಕಾರ ಪೂರೈಸಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. <br /> <br /> ಕೋಶಾಧ್ಯಕ್ಷ ಕನಕಪುರ ಮಹೇಶ್, ಚನ್ನಪಟ್ಟಣ ಅಧ್ಯಕ್ಷ ಶಿವಮಾದು, ಜಿಲ್ಲಾ ನಿಕಟಪೂರ್ವ ಸಂಚಾಲಕ ಆರ್.ವಿ.ನಾರಾಯಣ, ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ಜಲಾನಯನ ಇಲಾಖೆಯ ಹುಚ್ಚಪ್ಪ, ಮರಳವಾಡಿ ಶಿವರಾಜು, ಮುನಿಯಪ್ಪ, ಶಿವರಾಜು ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>