<p><strong>ಬೆಂಗಳೂರು:</strong> ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದ್ದಾರೆ.<br /> <br /> ನಿಗಮದಲ್ಲಿ ಖಾಲಿ ಇರುವ ಕಾವಲುಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ಉತ್ತರ ಭಾರತೀಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ನಿಗಮವು ಸಾರ್ವಜನಿಕರೊಂದಿಗೆ ಇಂಗ್ಲಿಷ್ ಭಾಷೆಯಲ್ಲಿ ಪತ್ರ ವ್ಯವಹಾರ ನಡೆಸುವ ಮೂಲಕ ಕನ್ನಡವನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.<br /> <br /> ನಿಗಮದ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಆಡಳಿತ ಹಾಗೂ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನೇ ಬಳಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.<br /> <br /> ‘ಮಾತೃ ಭಾಷಾ ವಿವಾದ ಕುರಿತು ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ವಿಚಾರಣೆಯನ್ನು ಕಾಯ್ದಿರಿಸಿದೆ. ವಿಚಾರಣೆ ಸಂದರ್ಭದಲ್ಲಿನ ಬೆಳವಣಿಗೆಗಳನ್ನು ನೋಡಿದರೆ ತೀರ್ಪು ನಮ್ಮ ವಿರುದ್ಧ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ಮಾತೃಭಾಷಾ ಶಿಕ್ಷಣದ ಬಗ್ಗೆ ಒಲವು ಇರುವ ರಾಜ್ಯಗಳು ಒಂದಾಗಿ ಸಮಗ್ರ ಭಾಷಾ ಮಾಧ್ಯಮ ನೀತಿ ರೂಪಿಸಲು ಮುಂದಾಗಬೇಕು. 10ನೇ<br /> ತರಗತಿವರೆಗೆ ಭಾಷಾ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು’ ಎಂದು ಚಂದ್ರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಒತ್ತಾಯಿಸಿದ್ದಾರೆ.<br /> <br /> ನಿಗಮದಲ್ಲಿ ಖಾಲಿ ಇರುವ ಕಾವಲುಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ಉತ್ತರ ಭಾರತೀಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ನಿಗಮವು ಸಾರ್ವಜನಿಕರೊಂದಿಗೆ ಇಂಗ್ಲಿಷ್ ಭಾಷೆಯಲ್ಲಿ ಪತ್ರ ವ್ಯವಹಾರ ನಡೆಸುವ ಮೂಲಕ ಕನ್ನಡವನ್ನು ನಿರ್ಲಕ್ಷಿಸಲಾಗಿದೆ ಎಂದು ದೂರಿದ್ದಾರೆ.<br /> <br /> ನಿಗಮದ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಆಡಳಿತ ಹಾಗೂ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನೇ ಬಳಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.<br /> <br /> ‘ಮಾತೃ ಭಾಷಾ ವಿವಾದ ಕುರಿತು ಸುಪ್ರೀಂಕೋರ್ಟ್ನ ಸಂವಿಧಾನ ಪೀಠ ವಿಚಾರಣೆಯನ್ನು ಕಾಯ್ದಿರಿಸಿದೆ. ವಿಚಾರಣೆ ಸಂದರ್ಭದಲ್ಲಿನ ಬೆಳವಣಿಗೆಗಳನ್ನು ನೋಡಿದರೆ ತೀರ್ಪು ನಮ್ಮ ವಿರುದ್ಧ ಬರುವ ಸಾಧ್ಯತೆ ಇದೆ. ಈ ಕಾರಣದಿಂದ ಮಾತೃಭಾಷಾ ಶಿಕ್ಷಣದ ಬಗ್ಗೆ ಒಲವು ಇರುವ ರಾಜ್ಯಗಳು ಒಂದಾಗಿ ಸಮಗ್ರ ಭಾಷಾ ಮಾಧ್ಯಮ ನೀತಿ ರೂಪಿಸಲು ಮುಂದಾಗಬೇಕು. 10ನೇ<br /> ತರಗತಿವರೆಗೆ ಭಾಷಾ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು’ ಎಂದು ಚಂದ್ರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>