<p><strong>ಮಳವಳ್ಳಿ: </strong>ರಾಜ್ಯದ ಅಭಿವೃದ್ಧಿ ವಿಜ್ಞಾನದಿಂದ ಮಾತ್ರ ಸಾಧ್ಯವಿಲ್ಲ, ಕನ್ನಡ ಸಾಹಿತ್ಯದ ಮೂಲಕವು ಆಗುತ್ತದೆ ಆದರೆ ಸರ್ಕಾರ ಕನ್ನಡದ ಸಾಹಿತ್ಯದ ಅಭಿವೃದ್ಧಿಗೆ ಆದ್ಯತೆ ನೀಡದಿರುವುದು ದುರದೃಷ್ಟಕರ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದರು.<br /> <br /> ಪಟ್ಟಣದ ಶಾಂತಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಕರ್ನಾಟಕ ಸಂಘದ ಸಹಯೋಗದಲ್ಲಿ ಮಂಗಳವಾರ ಶಾಂತಿಭವನದಲ್ಲಿ `ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಸಾಂಸ್ಕೃತಿಕ ಪಲ್ಲಟಗಳು~ ವಿಷಯ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ವಿಶ್ರಾಂತ ಪ್ರಾಧ್ಯಾಪಕ ಡಾ.ರಾಗೌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `10ನೇ ಶತಮಾನದಲ್ಲಿ ಪಂಪ ಕವಿಯು ಜಾತಿಯತೆ ವಿರೋಧವಾಗಿ ಬರೆದರೂ ಇನ್ನೂ ಸಹ ಜಾತಿಯ ಸಂಕೋಲೆ ನಿರ್ಮೂಲನೆ ಆಗಿಲ್ಲ. 12ನೇ ಶತಮಾನದಲ್ಲಿ ವಚನ ಸಾಹಿತ್ಯ, ನಂತರ ಭಕ್ತಿ ಚಳುವಳಿಯ ಮೂಲಕ ಸಮಾನ, ಸ್ವಾತಂತ್ರ್ಯ ನೀಡಲು ಕಾರಣವಾಯಿತು ಎಂದು ಅವರು ಹೇಳಿದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ಗೌಡ, ಅಧ್ಯಕ್ಷತೆ ವಹಿಸಿದ್ದ ಶಾಂತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ನಾಗಮಣಿನಾಗೇಗೌಡ ಮಾತನಾಡಿದರು. ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ, ಪುಟ್ಟೀರೇಗೌಡ, ಪ್ರಾಂಶುಪಾಲ ಎಂ.ಸಿ.ವೀರಭಧ್ರಸ್ವಾಮಿ ವೇದಿಕೆಯಲ್ಲಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ದೊಡ್ಡಲಿಂಗೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಮೊದಲ ಗೋಷ್ಠಿಯಲ್ಲಿ ಪ್ರೊ.ಶಿವರಾಮು ಕಾಡನಕುಪ್ಪೆ ಅವರ ಅಧ್ಯಕ್ಷತೆಯಲ್ಲಿ ಡಾ.ಮ.ರಾಮಕೃಷ್ಣ ಅವರು `ಸಾಂಸ್ಕೃತಿಕ ಸ್ಥಿತ್ಯಂತರಗಳು: ಸ್ವರೂಪ ಮತ್ತು ನಿಲುವು~ ಹಾಗೂ ಪ್ರೊ.ಎಂ.ಜಿ.ಚಂದ್ರಶೇಖರಯ್ಯ `ಪ್ರಭುತ್ವವಾದಿ ವ್ಯವಸ್ಥೆ ಮತ್ತು ಪ್ರತಿಭಟನೆ~ ಎಂಬ ವಿಷಯ ಮಂಡಿಸಿದರು.<br /> <br /> ಎರಡನೇ ಗೋಷ್ಠಿಯಲ್ಲಿ ಡಾ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಡಾ.ಪಿ.ಕೆ.ರಾಜಶೇಖರ ಭಕ್ತಿ ಚಳುವಳಿಯ ಉದಾರವಾದಿ ನೆಲೆಗಳು, ಡಾ.ಚಿಕ್ಕಮರಳಿ ಬೋರೇಗೌಡ ಅವರು ಸಾಮಾಜಿಕ ಮೌಲ್ಯಗಳು: ಕಾಲಿಕ-ಸರ್ವಕಾಲಿಕ ವಿಷಯ ಮಂಡಿಸಿದರು.<br /> <br /> ಸಮಾರೋಪವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಡಾ.ಸಬಿಹಾ ಭೂಮಿಗೌಡ ಮಾತನಾಡಿದರು. ಎಚ್.ತಿಮ್ಮೇಗೌಡ ಉಪಸ್ಥಿತರಿದ್ದು ಪ್ರಾಂಶುಪಾಲ ಎಂ.ಸಿ.ವೀರಭದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ: </strong>ರಾಜ್ಯದ ಅಭಿವೃದ್ಧಿ ವಿಜ್ಞಾನದಿಂದ ಮಾತ್ರ ಸಾಧ್ಯವಿಲ್ಲ, ಕನ್ನಡ ಸಾಹಿತ್ಯದ ಮೂಲಕವು ಆಗುತ್ತದೆ ಆದರೆ ಸರ್ಕಾರ ಕನ್ನಡದ ಸಾಹಿತ್ಯದ ಅಭಿವೃದ್ಧಿಗೆ ಆದ್ಯತೆ ನೀಡದಿರುವುದು ದುರದೃಷ್ಟಕರ ಸಂಗತಿ ಎಂದು ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದರು.<br /> <br /> ಪಟ್ಟಣದ ಶಾಂತಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು, ಕರ್ನಾಟಕ ಸಂಘದ ಸಹಯೋಗದಲ್ಲಿ ಮಂಗಳವಾರ ಶಾಂತಿಭವನದಲ್ಲಿ `ಪ್ರಾಚೀನ ಕನ್ನಡ ಕಾವ್ಯಗಳಲ್ಲಿ ಸಾಂಸ್ಕೃತಿಕ ಪಲ್ಲಟಗಳು~ ವಿಷಯ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.<br /> <br /> ವಿಶ್ರಾಂತ ಪ್ರಾಧ್ಯಾಪಕ ಡಾ.ರಾಗೌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `10ನೇ ಶತಮಾನದಲ್ಲಿ ಪಂಪ ಕವಿಯು ಜಾತಿಯತೆ ವಿರೋಧವಾಗಿ ಬರೆದರೂ ಇನ್ನೂ ಸಹ ಜಾತಿಯ ಸಂಕೋಲೆ ನಿರ್ಮೂಲನೆ ಆಗಿಲ್ಲ. 12ನೇ ಶತಮಾನದಲ್ಲಿ ವಚನ ಸಾಹಿತ್ಯ, ನಂತರ ಭಕ್ತಿ ಚಳುವಳಿಯ ಮೂಲಕ ಸಮಾನ, ಸ್ವಾತಂತ್ರ್ಯ ನೀಡಲು ಕಾರಣವಾಯಿತು ಎಂದು ಅವರು ಹೇಳಿದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ್ಗೌಡ, ಅಧ್ಯಕ್ಷತೆ ವಹಿಸಿದ್ದ ಶಾಂತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ನಾಗಮಣಿನಾಗೇಗೌಡ ಮಾತನಾಡಿದರು. ಕಾರ್ಯದರ್ಶಿ ಎಂ.ಎಚ್.ಕೆಂಪಯ್ಯ, ಪುಟ್ಟೀರೇಗೌಡ, ಪ್ರಾಂಶುಪಾಲ ಎಂ.ಸಿ.ವೀರಭಧ್ರಸ್ವಾಮಿ ವೇದಿಕೆಯಲ್ಲಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ದೊಡ್ಡಲಿಂಗೇಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.<br /> <br /> ಮೊದಲ ಗೋಷ್ಠಿಯಲ್ಲಿ ಪ್ರೊ.ಶಿವರಾಮು ಕಾಡನಕುಪ್ಪೆ ಅವರ ಅಧ್ಯಕ್ಷತೆಯಲ್ಲಿ ಡಾ.ಮ.ರಾಮಕೃಷ್ಣ ಅವರು `ಸಾಂಸ್ಕೃತಿಕ ಸ್ಥಿತ್ಯಂತರಗಳು: ಸ್ವರೂಪ ಮತ್ತು ನಿಲುವು~ ಹಾಗೂ ಪ್ರೊ.ಎಂ.ಜಿ.ಚಂದ್ರಶೇಖರಯ್ಯ `ಪ್ರಭುತ್ವವಾದಿ ವ್ಯವಸ್ಥೆ ಮತ್ತು ಪ್ರತಿಭಟನೆ~ ಎಂಬ ವಿಷಯ ಮಂಡಿಸಿದರು.<br /> <br /> ಎರಡನೇ ಗೋಷ್ಠಿಯಲ್ಲಿ ಡಾ.ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಡಾ.ಪಿ.ಕೆ.ರಾಜಶೇಖರ ಭಕ್ತಿ ಚಳುವಳಿಯ ಉದಾರವಾದಿ ನೆಲೆಗಳು, ಡಾ.ಚಿಕ್ಕಮರಳಿ ಬೋರೇಗೌಡ ಅವರು ಸಾಮಾಜಿಕ ಮೌಲ್ಯಗಳು: ಕಾಲಿಕ-ಸರ್ವಕಾಲಿಕ ವಿಷಯ ಮಂಡಿಸಿದರು.<br /> <br /> ಸಮಾರೋಪವಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಡಾ.ಸಬಿಹಾ ಭೂಮಿಗೌಡ ಮಾತನಾಡಿದರು. ಎಚ್.ತಿಮ್ಮೇಗೌಡ ಉಪಸ್ಥಿತರಿದ್ದು ಪ್ರಾಂಶುಪಾಲ ಎಂ.ಸಿ.ವೀರಭದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>