<p><strong>ಚಿಕ್ಕಮಗಳೂರು:</strong> ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ವಿಶ್ವ ಕನ್ನಡ ತೇರಿಗೆ ಸೋಮವಾರ ಚಾಲನೆ ನೀಡಲಾಯಿತು. ನಗರದ ಆಜಾದ್ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರಾಮಣ್ಣ ಅವರು ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಾಯ ಕಾಮತ್, ಉಪವಿಭಾಗಾಧಿಕಾರಿ ದಯಾನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಾದೇಗೌಡ, ಕನ್ನಡ ಶಕ್ತಿಕೇಂದ್ರದ ಡಾ.ಜೆ.ಪಿ.ಕೃಷ್ಣೇಗೌಡ, ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಇದ್ದರು.<br /> <br /> ಈ ಸಂದರ್ಭದಲ್ಲಿ ಡೊಳ್ಳು ಕುಣಿತ, ವೀರಗಾಸೆ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಂ.ಜಿ.ರಸ್ತೆ ಮೂಲಕ ರತ್ನಗಿರಿ ರಸ್ತೆವರೆಗೆ ಮೆರವಣಿಗೆಯಲ್ಲಿ ಸಂಚರಿಸಿದ ತೇರು ಬಳಿಕ ಲಿಂಗದಹಳ್ಳಿ, ತರೀಕೆರೆ, ಕಡೂರಿಗೆ ತೆರಳಿತು.<br /> <br /> ಇದೇ.8ರಂದು ವಿಶ್ವ ಕನ್ನಡ ತೇರು ಚಿಕ್ಕಮಗಳೂರಿನಿಂದ ಮೂಡಿಗೆರೆ, ಬಾಳೆಹೊನ್ನೂರು ಮೂಲಕ ಶೃಂಗೇರಿಗೆ ತೆರಳಲಿದೆ. 9ರಂದು ಶೃಂಗೇರಿಯಿಂದ ಕೊಪ್ಪ, ಕುದ್ರೆಗುಂಡಿ, ಎನ್.ಆರ್.ಪುರ ಮೂಲಕ ಸಂಚರಿಸಿ ಬೆಳಗಾವಿಗೆ ತೆರಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬೆಳಗಾವಿಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಸಂಚರಿಸಲಿರುವ ವಿಶ್ವ ಕನ್ನಡ ತೇರಿಗೆ ಸೋಮವಾರ ಚಾಲನೆ ನೀಡಲಾಯಿತು. ನಗರದ ಆಜಾದ್ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರಾಮಣ್ಣ ಅವರು ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.<br /> <br /> ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಾಯ ಕಾಮತ್, ಉಪವಿಭಾಗಾಧಿಕಾರಿ ದಯಾನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಾದೇಗೌಡ, ಕನ್ನಡ ಶಕ್ತಿಕೇಂದ್ರದ ಡಾ.ಜೆ.ಪಿ.ಕೃಷ್ಣೇಗೌಡ, ವಿವಿಧ ಕನ್ನಡ ಪರ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು ಇದ್ದರು.<br /> <br /> ಈ ಸಂದರ್ಭದಲ್ಲಿ ಡೊಳ್ಳು ಕುಣಿತ, ವೀರಗಾಸೆ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಎಂ.ಜಿ.ರಸ್ತೆ ಮೂಲಕ ರತ್ನಗಿರಿ ರಸ್ತೆವರೆಗೆ ಮೆರವಣಿಗೆಯಲ್ಲಿ ಸಂಚರಿಸಿದ ತೇರು ಬಳಿಕ ಲಿಂಗದಹಳ್ಳಿ, ತರೀಕೆರೆ, ಕಡೂರಿಗೆ ತೆರಳಿತು.<br /> <br /> ಇದೇ.8ರಂದು ವಿಶ್ವ ಕನ್ನಡ ತೇರು ಚಿಕ್ಕಮಗಳೂರಿನಿಂದ ಮೂಡಿಗೆರೆ, ಬಾಳೆಹೊನ್ನೂರು ಮೂಲಕ ಶೃಂಗೇರಿಗೆ ತೆರಳಲಿದೆ. 9ರಂದು ಶೃಂಗೇರಿಯಿಂದ ಕೊಪ್ಪ, ಕುದ್ರೆಗುಂಡಿ, ಎನ್.ಆರ್.ಪುರ ಮೂಲಕ ಸಂಚರಿಸಿ ಬೆಳಗಾವಿಗೆ ತೆರಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>