<p><strong>ಕೊಪ್ಪಳ: </strong>ಆಂಧ್ರಪ್ರದೇಶದ ಗಡಿ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ ಸಕಾಲದಲ್ಲಿ ಕನ್ನಡ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡುವಂತೆ ಇಲ್ಲಿನ ಕನ್ನಡ ಕ್ರಿಯಾ ಸಮಿತಿ ಸದಸ್ಯರ ನಿಯೋಗ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಲ್ಲಿ ಮನವಿ ಮಾಡಿದೆ.<br /> <br /> ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶೆಟ್ಟರ್ ಅವರನ್ನು ಭೇಟಿ ಮಾಡಿದ ನಿಯೋಗವು `ಪ್ರಜಾವಾಣಿ~ಯಲ್ಲಿ ಅ. 28ರಂದು ಪ್ರಕಟಗೊಂಡಿರುವ `ಕೃಪಣತೆಯಲ್ಲಿ ಕರ್ನಾಟಕ ಸರ್ಕಾರ ಮೀರಿಸುವವರು ಯಾರಿದ್ದಾರೆ?~ ಎಂಬ ಲೇಖನವನ್ನು ಉಲ್ಲೇಖಿಸಿ ಈ ಮನವಿ ಸಲ್ಲಿಸಿದೆ.<br /> <br /> ಆಂಧ್ರಪ್ರದೇಶದ ಕರ್ನೂಲು, ಮೆಹಬೂಬನಗರ, ಮೆಡಕ್, ಅನಂತಪುರ ಹಾಗೂ ಕರೀಂನಗರ ಜಿಲ್ಲೆಗಳ ಗ್ರಾಮಗಳಲ್ಲಿ ಈಗಲೂ ಕನ್ನಡ ಮಾಧ್ಯಮ ಶಾಲೆಗಳಿವೆ. ಕರ್ನೂಲು ಜಿಲ್ಲೆಯೊಂದರಲ್ಲಿಯೇ 11 ಸಾವಿರ ಮಕ್ಕಳು ಕನ್ನಡ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪಠ್ಯಪುಸ್ತಕಗಳು ಪೂರೈಕೆಯಾಗುತ್ತಿಲ್ಲ.</p>.<p>ಪ್ರತಿ ವರ್ಷ ಶಾಲೆಗಳು ಆರಂಭಗೊಳ್ಳುವ ಪೂರ್ವದಲ್ಲಿಯೇ ಪುಸ್ತಕಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ. ಪಠ್ಯಪುಸ್ತಕಗಳ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ಸಹ ಪೂರೈಸಬೇಕು ಎಂದೂ ನಿಯೋಗ ಒತ್ತಾಯಿಸಿದೆ.<br /> <br /> ಸಮಿತಿಯ ಕಾರ್ಯದರ್ಶಿ ಅಲ್ಲಮಪ್ರಭು ಬೆಟ್ಟದೂರು, ಮುಖಂಡರಾದ ಎಚ್.ಎಸ್.ಪಾಟೀಲ, ಸೂರ್ಯಕಾಂತ ಗುಣಕಿಮಠ ನಿಯೋಗದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ಆಂಧ್ರಪ್ರದೇಶದ ಗಡಿ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ ಸಕಾಲದಲ್ಲಿ ಕನ್ನಡ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡುವಂತೆ ಇಲ್ಲಿನ ಕನ್ನಡ ಕ್ರಿಯಾ ಸಮಿತಿ ಸದಸ್ಯರ ನಿಯೋಗ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಲ್ಲಿ ಮನವಿ ಮಾಡಿದೆ.<br /> <br /> ಈಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಶೆಟ್ಟರ್ ಅವರನ್ನು ಭೇಟಿ ಮಾಡಿದ ನಿಯೋಗವು `ಪ್ರಜಾವಾಣಿ~ಯಲ್ಲಿ ಅ. 28ರಂದು ಪ್ರಕಟಗೊಂಡಿರುವ `ಕೃಪಣತೆಯಲ್ಲಿ ಕರ್ನಾಟಕ ಸರ್ಕಾರ ಮೀರಿಸುವವರು ಯಾರಿದ್ದಾರೆ?~ ಎಂಬ ಲೇಖನವನ್ನು ಉಲ್ಲೇಖಿಸಿ ಈ ಮನವಿ ಸಲ್ಲಿಸಿದೆ.<br /> <br /> ಆಂಧ್ರಪ್ರದೇಶದ ಕರ್ನೂಲು, ಮೆಹಬೂಬನಗರ, ಮೆಡಕ್, ಅನಂತಪುರ ಹಾಗೂ ಕರೀಂನಗರ ಜಿಲ್ಲೆಗಳ ಗ್ರಾಮಗಳಲ್ಲಿ ಈಗಲೂ ಕನ್ನಡ ಮಾಧ್ಯಮ ಶಾಲೆಗಳಿವೆ. ಕರ್ನೂಲು ಜಿಲ್ಲೆಯೊಂದರಲ್ಲಿಯೇ 11 ಸಾವಿರ ಮಕ್ಕಳು ಕನ್ನಡ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಈ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪಠ್ಯಪುಸ್ತಕಗಳು ಪೂರೈಕೆಯಾಗುತ್ತಿಲ್ಲ.</p>.<p>ಪ್ರತಿ ವರ್ಷ ಶಾಲೆಗಳು ಆರಂಭಗೊಳ್ಳುವ ಪೂರ್ವದಲ್ಲಿಯೇ ಪುಸ್ತಕಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಮನವಿ ಮಾಡಿದೆ. ಪಠ್ಯಪುಸ್ತಕಗಳ ಜೊತೆಗೆ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಸೈಕಲ್ಗಳನ್ನು ಸಹ ಪೂರೈಸಬೇಕು ಎಂದೂ ನಿಯೋಗ ಒತ್ತಾಯಿಸಿದೆ.<br /> <br /> ಸಮಿತಿಯ ಕಾರ್ಯದರ್ಶಿ ಅಲ್ಲಮಪ್ರಭು ಬೆಟ್ಟದೂರು, ಮುಖಂಡರಾದ ಎಚ್.ಎಸ್.ಪಾಟೀಲ, ಸೂರ್ಯಕಾಂತ ಗುಣಕಿಮಠ ನಿಯೋಗದಲ್ಲಿದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>