<p>ಚಿಕ್ಕಬಳ್ಳಾಪುರ: ಪರ ಭಾಷೆ ಹಾವಳಿ, ಇನ್ನಿತರ ಕಾರಣಗಳಿಂದ ಕನ್ನಡ ಭಾಷೆ ಅಪಾಯದ ಸ್ಥಿತಿಯನ್ನು ಎದುರಿಸುತ್ತಿದೆ. ಆದರೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಆಳವಾಗಿ ಬೇರೂರಿದೆ. ಇದನ್ನು ಸುಲಭವಾಗಿ ದುರ್ಬಲ ಮಾಡಲಾಗದು ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಶಿಕ್ಷಣ ತಜ್ಞ ಪ್ರೊ.ಕೋಡಿರಂಗಪ್ಪ ಗುರುವಾರ ಇಲ್ಲಿ ತಿಳಿಸಿದರು.<br /> <br /> ನಗರದಲ್ಲಿ ಅನನ್ಯ ಕಲಾ ರಂಗ ವೇದಿಕೆ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕನ್ನಡ ಕಲಿಕಾ ಕೇಂದ್ರ ತರಬೇತಿ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ, `ಕನ್ನಡ ಮತ್ತು ಕನ್ನಡತನದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ~ ಎಂದರು.<br /> <br /> `ಅಲ್ಪಸಂಖ್ಯಾತ ಸಮುದಾಯದವರು ಭಾಷಾ ಸಮಸ್ಯೆ ಮತ್ತು ಇನ್ನಿತರ ಕಾರಣಗಳಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಆ ಸಮುದಾಯದ ಜನರು ಈ ರೀತಿಯ ಶಿಬಿರದ ಪ್ರಯೋಜನ ಪಡೆಯಬೇಕು. ತಾವು ಕಲಿಯುವುದಲ್ಲದೆ ಕುಟುಂಬ ಸದಸ್ಯರಿಗೂ ಕನ್ನಡದ ಜ್ಞಾನ ನೀಡಬೇಕು~ ಎಂದು ಅವರು ತಿಳಿಸಿದರು.<br /> <br /> `ಮುಸ್ಲಿಂ ಸಮುದಾಯದ ಬಹುತೇಕರು ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕನ್ನಡ ಕಲಿತರೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ಸಲ್ಲಿಸಲು ಸಾಧ್ಯವಾಗುತ್ತದೆ~ ಎಂದು ಹೇಳಿದರು. <br /> <br /> ಸಂಪನ್ಮೂಲ ಶಿಕ್ಷಕ ಅಬ್ದುಲ್ ಫಾರೂಖ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಹನಾಜ್ ಬೇಗಂ, ಮುಖ್ಯ ಶಿಕ್ಷಕಿ ನಜೀಮುನ್ನಿಸಾ, ಅನನ್ಯ ಕಲಾ ರಂಗ ವೇದಿಕೆ ಅಧ್ಯಕ್ಷ ಗಾನಾ ಅಶ್ವತ್ಥ್, ಸದಸ್ಯೆ ಎಂ.ಎನ್.ರಾಜಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಪರ ಭಾಷೆ ಹಾವಳಿ, ಇನ್ನಿತರ ಕಾರಣಗಳಿಂದ ಕನ್ನಡ ಭಾಷೆ ಅಪಾಯದ ಸ್ಥಿತಿಯನ್ನು ಎದುರಿಸುತ್ತಿದೆ. ಆದರೆ ಕನ್ನಡ ಭಾಷೆ ಮತ್ತು ಸಂಸ್ಕೃತಿ ಆಳವಾಗಿ ಬೇರೂರಿದೆ. ಇದನ್ನು ಸುಲಭವಾಗಿ ದುರ್ಬಲ ಮಾಡಲಾಗದು ಎಂಬುದನ್ನು ಸಾಬೀತುಪಡಿಸಬೇಕಿದೆ ಎಂದು ಶಿಕ್ಷಣ ತಜ್ಞ ಪ್ರೊ.ಕೋಡಿರಂಗಪ್ಪ ಗುರುವಾರ ಇಲ್ಲಿ ತಿಳಿಸಿದರು.<br /> <br /> ನಗರದಲ್ಲಿ ಅನನ್ಯ ಕಲಾ ರಂಗ ವೇದಿಕೆ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕನ್ನಡ ಕಲಿಕಾ ಕೇಂದ್ರ ತರಬೇತಿ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ, `ಕನ್ನಡ ಮತ್ತು ಕನ್ನಡತನದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ~ ಎಂದರು.<br /> <br /> `ಅಲ್ಪಸಂಖ್ಯಾತ ಸಮುದಾಯದವರು ಭಾಷಾ ಸಮಸ್ಯೆ ಮತ್ತು ಇನ್ನಿತರ ಕಾರಣಗಳಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುವುದಿಲ್ಲ. ಆ ಸಮುದಾಯದ ಜನರು ಈ ರೀತಿಯ ಶಿಬಿರದ ಪ್ರಯೋಜನ ಪಡೆಯಬೇಕು. ತಾವು ಕಲಿಯುವುದಲ್ಲದೆ ಕುಟುಂಬ ಸದಸ್ಯರಿಗೂ ಕನ್ನಡದ ಜ್ಞಾನ ನೀಡಬೇಕು~ ಎಂದು ಅವರು ತಿಳಿಸಿದರು.<br /> <br /> `ಮುಸ್ಲಿಂ ಸಮುದಾಯದ ಬಹುತೇಕರು ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ಸಲ್ಲಿಸಿದ್ದಾರೆ. ಪ್ರತಿಯೊಬ್ಬರು ಕನ್ನಡ ಕಲಿತರೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ ಸಲ್ಲಿಸಲು ಸಾಧ್ಯವಾಗುತ್ತದೆ~ ಎಂದು ಹೇಳಿದರು. <br /> <br /> ಸಂಪನ್ಮೂಲ ಶಿಕ್ಷಕ ಅಬ್ದುಲ್ ಫಾರೂಖ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶಹನಾಜ್ ಬೇಗಂ, ಮುಖ್ಯ ಶಿಕ್ಷಕಿ ನಜೀಮುನ್ನಿಸಾ, ಅನನ್ಯ ಕಲಾ ರಂಗ ವೇದಿಕೆ ಅಧ್ಯಕ್ಷ ಗಾನಾ ಅಶ್ವತ್ಥ್, ಸದಸ್ಯೆ ಎಂ.ಎನ್.ರಾಜಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>