<p><strong>ಪುಣೆ:</strong> ಕನ್ನಡ ಮತ್ತು ಮರಾಠಿಯ ಅನುಬಂಧ ಪ್ರಾಚೀನ ಕಾಲದಿಂದ ನಡೆದು ಬಂದಿದೆ. ಈ ಅನ್ಯೋನ್ಯ ಅನುಬಂಧವನ್ನು ಬೆಳೆಸಲು ಪುಣೆಯ ಮರಾಠಿ- ಕನ್ನಡ ಸ್ನೇಹ ವರ್ಧನ ಕೇಂದ್ರ ನಡೆಸುತ್ತಿರುವ ಪ್ರಯತ್ನ ಅನುಕರಣೀಯ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ ಹೇಳಿದರು.<br /> <br /> ಇಲ್ಲಿನ ಮರಾಠಿ- ಕನ್ನಡ ಸ್ನೇಹ ವರ್ಧನ ಕೇಂದ್ರ ಕನ್ನಡೇತರರಿಗಾಗಿ ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಕನ್ನಡ ಕಲಿಕಾ ವರ್ಗ ಮತ್ತು ಪ್ರಗತ ಕನ್ನಡ ಕಲಿಕಾ ವರ್ಗಗಳ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಅವರು ಭಾಗವಹಿಸಿದ್ದರು.<br /> <br /> ಮಹಾರಾಷ್ಟ್ರ ರಾಜ್ಯವು ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರ ನೆಲೆ. ಕನ್ನಡದ ದಲಿತ ಸಾಹಿತ್ಯ ಮರಾಠಿ ದಲಿತ ಸಾಹಿತ್ಯದಿಂದಲೇ ಪ್ರೇರಣೆ ಪಡೆದಿದ್ದು, ಸಮಗ್ರ ಭಾರತದಲ್ಲಿ ಕ್ರಾಂತಿಯ ಬೀಜವನ್ನು ಬಿತ್ತಿದ ಶ್ರೇಯಸ್ಸು ಮಹಾರಾಷ್ಟ್ರಕ್ಕೆ ಸೇರಿದೆ. <br /> <br /> ಇಂತಹ ಸುಧಾರಕರ ಬೀಡಿನಲ್ಲಿ ಕನ್ನಡ ಭಾಷೆಯನ್ನು ಕಲಿಯುವುದರ ಜತೆಗೆ ಮರಾಠಿ ಭಾಷೆಯನ್ನು ಬೆಳೆಸಬೇಕು ಎಂದು ಮಾರ್ಮಿಕವಾಗಿ ನುಡಿದರು. ಕೇಂದ್ರದ ಗೌರವ ಕಾರ್ಯದರ್ಶಿ ಕೃ.ಶಿ.ಹೆಗಡೆ ಆರಂಭದಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಕನ್ನಡ ಮತ್ತು ಮರಾಠಿಯ ಅನುಬಂಧ ಪ್ರಾಚೀನ ಕಾಲದಿಂದ ನಡೆದು ಬಂದಿದೆ. ಈ ಅನ್ಯೋನ್ಯ ಅನುಬಂಧವನ್ನು ಬೆಳೆಸಲು ಪುಣೆಯ ಮರಾಠಿ- ಕನ್ನಡ ಸ್ನೇಹ ವರ್ಧನ ಕೇಂದ್ರ ನಡೆಸುತ್ತಿರುವ ಪ್ರಯತ್ನ ಅನುಕರಣೀಯ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ ಹೇಳಿದರು.<br /> <br /> ಇಲ್ಲಿನ ಮರಾಠಿ- ಕನ್ನಡ ಸ್ನೇಹ ವರ್ಧನ ಕೇಂದ್ರ ಕನ್ನಡೇತರರಿಗಾಗಿ ಕಳೆದ ಎರಡು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಕನ್ನಡ ಕಲಿಕಾ ವರ್ಗ ಮತ್ತು ಪ್ರಗತ ಕನ್ನಡ ಕಲಿಕಾ ವರ್ಗಗಳ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಅವರು ಭಾಗವಹಿಸಿದ್ದರು.<br /> <br /> ಮಹಾರಾಷ್ಟ್ರ ರಾಜ್ಯವು ಜ್ಯೋತಿಬಾ ಫುಲೆ, ಸಾವಿತ್ರಿಬಾಯಿ ಫುಲೆ, ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರ ನೆಲೆ. ಕನ್ನಡದ ದಲಿತ ಸಾಹಿತ್ಯ ಮರಾಠಿ ದಲಿತ ಸಾಹಿತ್ಯದಿಂದಲೇ ಪ್ರೇರಣೆ ಪಡೆದಿದ್ದು, ಸಮಗ್ರ ಭಾರತದಲ್ಲಿ ಕ್ರಾಂತಿಯ ಬೀಜವನ್ನು ಬಿತ್ತಿದ ಶ್ರೇಯಸ್ಸು ಮಹಾರಾಷ್ಟ್ರಕ್ಕೆ ಸೇರಿದೆ. <br /> <br /> ಇಂತಹ ಸುಧಾರಕರ ಬೀಡಿನಲ್ಲಿ ಕನ್ನಡ ಭಾಷೆಯನ್ನು ಕಲಿಯುವುದರ ಜತೆಗೆ ಮರಾಠಿ ಭಾಷೆಯನ್ನು ಬೆಳೆಸಬೇಕು ಎಂದು ಮಾರ್ಮಿಕವಾಗಿ ನುಡಿದರು. ಕೇಂದ್ರದ ಗೌರವ ಕಾರ್ಯದರ್ಶಿ ಕೃ.ಶಿ.ಹೆಗಡೆ ಆರಂಭದಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>