<p>ಸುಬ್ರಹ್ಮಣ್ಯ: `ಗ್ರಾಮೀಣ ಜನರಿಗೂ ಶಿಕ್ಷಣದ ಅವಕಾಶ ದೊರೆಯಬೇಕೆಂದು ಸರ್ಕಾರ ಆರಂಭಿಸಿರುವ ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕು. ಈ ಬಗ್ಗೆ ಸಮಾಜವೂ ಚಿಂತಿಸಬೇಕು~ ಎಂದು ಪುತ್ತೂರು ತಾ.ಪಂ. ಅಧ್ಯಕ್ಷ ಶಂಭು ಭಟ್ ಹೇಳಿದರು.<br /> <br /> ಬಿಳಿನೆಲೆ ಗ್ರಾಮದ ಪುತ್ತಿಲ-ಬೈಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ರಜತಮಹೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು. <br /> <br /> ವಿದ್ಯಾಭ್ಯಾಸದಿಂದ ವಂಚಿತರಾದವರನ್ನು ಶಾಲೆಗಳಿಗೆ ಕರೆತರುವ ಕೆಲಸವಾಗುತ್ತಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಸಮಾಜ ಇಂದು ಮುಂದಾಗಬೇಕು ಎಂದರು.<br /> <br /> ಸಮಾರಂಭವನ್ನು ಪುತ್ತೂರು ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಉದ್ಘಾಟಿಸಿ `ಸರ್ಕಾರಿ ಶಾಲೆಗಳಲ್ಲಿ ಇಂದು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸರ್ವಶಿಕ್ಷಣ ಅಭಿಯಾನದ ಮೂಲಕ ಬಹಳಷ್ಟು ಮೂಲ ಸೌಕರ್ಯಗಳನ್ನು ನೀಡಲಾಗುತ್ತಿದೆ~ ಎಂದರು.<br /> <br /> ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೊರಗಪ್ಪ ನಾಯ್ಕ, ಪುತ್ತೂರು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷ ಸುಧೀರಕುಮಾರ್ ಶೆಟ್ಟಿ, ತಾ.ಪಂ. ಸದಸ್ಯೆ ಸರೋಜಿನಿ ಜಯಪ್ರಕಾಶ್ ಇದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸ್ಥಳದಾನ ನೀಡಿದ ದಾನಿಗಳು ಹಾಗೂ ರಜತಮಹೋತ್ಸವಕ್ಕೆ ದೇಣಿಗೆ ನೀಡಿದ ಮಹಾಪೋಷಕರನ್ನು ಗೌರವಿಸಲಾಯಿತು. <br /> <br /> ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಬೈಲು, ಗೌರವಾಧ್ಯಕ್ಷ ಗಣಪಯ್ಯ ಗೌಡ ಪುತ್ತಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಧುಚಂದ್ರ, ಖಜಾಂಜಿ ಹಿರಿಯಣ್ಣ ಗೌಡ ಪುತ್ತಿಲ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗುಡ್ಡಪ್ಪ ಗೌಡ ಅಮೈ, ಮುಖ್ಯ ಶಿಕ್ಷಕ ತುಕರಾಮ ಗೌಡ ಇದ್ದರು.<br /> <br /> ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುಬ್ರಹ್ಮಣ್ಯ: `ಗ್ರಾಮೀಣ ಜನರಿಗೂ ಶಿಕ್ಷಣದ ಅವಕಾಶ ದೊರೆಯಬೇಕೆಂದು ಸರ್ಕಾರ ಆರಂಭಿಸಿರುವ ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕು. ಈ ಬಗ್ಗೆ ಸಮಾಜವೂ ಚಿಂತಿಸಬೇಕು~ ಎಂದು ಪುತ್ತೂರು ತಾ.ಪಂ. ಅಧ್ಯಕ್ಷ ಶಂಭು ಭಟ್ ಹೇಳಿದರು.<br /> <br /> ಬಿಳಿನೆಲೆ ಗ್ರಾಮದ ಪುತ್ತಿಲ-ಬೈಲಡ್ಕ ಹಿರಿಯ ಪ್ರಾಥಮಿಕ ಶಾಲೆಯ ರಜತಮಹೋತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು. <br /> <br /> ವಿದ್ಯಾಭ್ಯಾಸದಿಂದ ವಂಚಿತರಾದವರನ್ನು ಶಾಲೆಗಳಿಗೆ ಕರೆತರುವ ಕೆಲಸವಾಗುತ್ತಿದೆ. ಸರ್ಕಾರಿ ಶಾಲೆಗಳ ಉಳಿವಿಗೆ ಸಮಾಜ ಇಂದು ಮುಂದಾಗಬೇಕು ಎಂದರು.<br /> <br /> ಸಮಾರಂಭವನ್ನು ಪುತ್ತೂರು ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ ಉದ್ಘಾಟಿಸಿ `ಸರ್ಕಾರಿ ಶಾಲೆಗಳಲ್ಲಿ ಇಂದು ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಸರ್ವಶಿಕ್ಷಣ ಅಭಿಯಾನದ ಮೂಲಕ ಬಹಳಷ್ಟು ಮೂಲ ಸೌಕರ್ಯಗಳನ್ನು ನೀಡಲಾಗುತ್ತಿದೆ~ ಎಂದರು.<br /> <br /> ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೊರಗಪ್ಪ ನಾಯ್ಕ, ಪುತ್ತೂರು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷ ಸುಧೀರಕುಮಾರ್ ಶೆಟ್ಟಿ, ತಾ.ಪಂ. ಸದಸ್ಯೆ ಸರೋಜಿನಿ ಜಯಪ್ರಕಾಶ್ ಇದ್ದರು. ಈ ಸಂದರ್ಭದಲ್ಲಿ ಶಾಲೆಗೆ ಸ್ಥಳದಾನ ನೀಡಿದ ದಾನಿಗಳು ಹಾಗೂ ರಜತಮಹೋತ್ಸವಕ್ಕೆ ದೇಣಿಗೆ ನೀಡಿದ ಮಹಾಪೋಷಕರನ್ನು ಗೌರವಿಸಲಾಯಿತು. <br /> <br /> ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಬೈಲು, ಗೌರವಾಧ್ಯಕ್ಷ ಗಣಪಯ್ಯ ಗೌಡ ಪುತ್ತಿಲ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಧುಚಂದ್ರ, ಖಜಾಂಜಿ ಹಿರಿಯಣ್ಣ ಗೌಡ ಪುತ್ತಿಲ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗುಡ್ಡಪ್ಪ ಗೌಡ ಅಮೈ, ಮುಖ್ಯ ಶಿಕ್ಷಕ ತುಕರಾಮ ಗೌಡ ಇದ್ದರು.<br /> <br /> ಕಾರ್ಯಕ್ರಮದ ಬಳಿಕ ಅಂಗನವಾಡಿ ಮಕ್ಕಳಿಂದ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>