<p><strong>ಬೆಂಗಳೂರು:</strong> `ಇಂದಿನ ಮಕ್ಕಳು ಕನ್ನಡ ಭಾಷೆಯ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವ ಮೂಲಕ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು' ಎಂದು ಲೇಖಕ ಬಿ.ಎಸ್.ಕೇಶವರಾವ್ ಕಿವಿಮಾತು ಹೇಳಿದರು.<br /> <br /> ಅಂಕಿತ ಪುಸ್ತಕ ಪ್ರಕಾಶನವು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ಪೋಷಕರು ಮಕ್ಕಳಿಗೆ ಕನ್ನಡ ಭಾಷೆಯ ಕೃತಿಗಳನ್ನು ಓದಲು ಪ್ರೇರೇಪಿಸಬೇಕು ಮತ್ತು ಅಗತ್ಯ ಪುಸ್ತಕಗಳನ್ನು ಒದಗಿಸಬೇಕು ಎಂದು ಅವರು ಹೇಳಿದರು.<br /> <br /> ಮನೆಗಳಲ್ಲಿ ಗ್ರಂಥಾಲಯಗಳ ಬದಲಿಗೆ ಫ್ರೀಡ್ಜ್, ಸೊಫಾಗಳಂತಹ ಐಷಾರಾಮಿ ವಸ್ತುಗಳ ಸಂಗ್ರಹಣೆ ಜತೆಗೆ ಪ್ರತಿಯೊಬ್ಬರು ಅಮೂಲ್ಯ ಪುಸ್ತಕಗಳ ಸಂಗ್ರಹಣೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಸಾಹಿತ್ಯದ ಕುರಿತು ಆಸಕ್ತಿ ಬೆಳೆಸಿಕೊಳ್ಳುವಲ್ಲಿ ಮಕ್ಕಳಿಗೂ ಉತ್ತಮ ವಾತಾವರಣ ಕಲ್ಪಿಸಿದಂತಾಗುತ್ತದೆ ಎಂದರು.<br /> <br /> ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಮಾತನಾಡಿ, `ಅಭಿಜ್ಞಾನ ಶಾಕುಂತಲ' ನಾಟಕದಲ್ಲಿ ಹಲವು ಸಂಸ್ಕೃತ ಶ್ಲೋಕಗಳಿವೆ. ಅವುಗಳನ್ನು ಓದುವುದು ಸುಲಭ ಆದರೆ ಅರ್ಥಮಾಡಿಕೊಳ್ಳಲು ಅಪಾರ ಸಂಸ್ಕೃತ ಜ್ಞಾನದ ಅಗತ್ಯವಿದೆ ಎಂದು ಹೇಳಿದರು.<br /> <br /> <strong>ಕಾರ್ಯಕ್ರಮದಲ್ಲಿ ಬಿಡುಗಡೆಯಾದ ಕೃತಿಗಳು;</strong> ಮಹಾಬಲ ಸೀತಾಳಬಾವಿ ಅವರು ಅನುವಾದಿಸಿರುವ ಮಹಾಕವಿ ಕಾಳಿದಾಸನ `ಅಭಿಜ್ಞಾನ ಶಾಕುಂತಲ' (ನಾಟಕ), `ಚಾಟು ಕವಿತೆಗೆ ಚುಟುಕು ಕತೆ' ಮತ್ತು ಬಿ.ಎಸ್.ಕೇಶವರಾವ್ ಅವರ `ಸರಸ ಸಾಹಿತ್ಯ ಸಾರಾಮೃತ' ಹಾಗೂ `ಕನ್ನಡಕ್ಕೊಬ್ಬನೇ ಕೈಲಾಸಂ'.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಇಂದಿನ ಮಕ್ಕಳು ಕನ್ನಡ ಭಾಷೆಯ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವ ಮೂಲಕ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು' ಎಂದು ಲೇಖಕ ಬಿ.ಎಸ್.ಕೇಶವರಾವ್ ಕಿವಿಮಾತು ಹೇಳಿದರು.<br /> <br /> ಅಂಕಿತ ಪುಸ್ತಕ ಪ್ರಕಾಶನವು ಭಾನುವಾರ ನಗರದಲ್ಲಿ ಏರ್ಪಡಿಸಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> ಪೋಷಕರು ಮಕ್ಕಳಿಗೆ ಕನ್ನಡ ಭಾಷೆಯ ಕೃತಿಗಳನ್ನು ಓದಲು ಪ್ರೇರೇಪಿಸಬೇಕು ಮತ್ತು ಅಗತ್ಯ ಪುಸ್ತಕಗಳನ್ನು ಒದಗಿಸಬೇಕು ಎಂದು ಅವರು ಹೇಳಿದರು.<br /> <br /> ಮನೆಗಳಲ್ಲಿ ಗ್ರಂಥಾಲಯಗಳ ಬದಲಿಗೆ ಫ್ರೀಡ್ಜ್, ಸೊಫಾಗಳಂತಹ ಐಷಾರಾಮಿ ವಸ್ತುಗಳ ಸಂಗ್ರಹಣೆ ಜತೆಗೆ ಪ್ರತಿಯೊಬ್ಬರು ಅಮೂಲ್ಯ ಪುಸ್ತಕಗಳ ಸಂಗ್ರಹಣೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಇದರಿಂದ ಸಾಹಿತ್ಯದ ಕುರಿತು ಆಸಕ್ತಿ ಬೆಳೆಸಿಕೊಳ್ಳುವಲ್ಲಿ ಮಕ್ಕಳಿಗೂ ಉತ್ತಮ ವಾತಾವರಣ ಕಲ್ಪಿಸಿದಂತಾಗುತ್ತದೆ ಎಂದರು.<br /> <br /> ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ಮಾತನಾಡಿ, `ಅಭಿಜ್ಞಾನ ಶಾಕುಂತಲ' ನಾಟಕದಲ್ಲಿ ಹಲವು ಸಂಸ್ಕೃತ ಶ್ಲೋಕಗಳಿವೆ. ಅವುಗಳನ್ನು ಓದುವುದು ಸುಲಭ ಆದರೆ ಅರ್ಥಮಾಡಿಕೊಳ್ಳಲು ಅಪಾರ ಸಂಸ್ಕೃತ ಜ್ಞಾನದ ಅಗತ್ಯವಿದೆ ಎಂದು ಹೇಳಿದರು.<br /> <br /> <strong>ಕಾರ್ಯಕ್ರಮದಲ್ಲಿ ಬಿಡುಗಡೆಯಾದ ಕೃತಿಗಳು;</strong> ಮಹಾಬಲ ಸೀತಾಳಬಾವಿ ಅವರು ಅನುವಾದಿಸಿರುವ ಮಹಾಕವಿ ಕಾಳಿದಾಸನ `ಅಭಿಜ್ಞಾನ ಶಾಕುಂತಲ' (ನಾಟಕ), `ಚಾಟು ಕವಿತೆಗೆ ಚುಟುಕು ಕತೆ' ಮತ್ತು ಬಿ.ಎಸ್.ಕೇಶವರಾವ್ ಅವರ `ಸರಸ ಸಾಹಿತ್ಯ ಸಾರಾಮೃತ' ಹಾಗೂ `ಕನ್ನಡಕ್ಕೊಬ್ಬನೇ ಕೈಲಾಸಂ'.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>