<p><strong>ಬೆಂಗಳೂರು</strong>: `ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮವನ್ನಾಗಿ ಘೋಷಿಸಬಾರದು' ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮೋತಿಲಾಲ ಚನ್ನಪ್ಪ ಮಾಳಗಿಮನಿ ಮನವಿ ಮಾಡಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತ್ತಗುಡ್ಡದಲ್ಲಿನ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳನ್ನು ರಕ್ಷಿಸುವ ನೆಪದಲ್ಲಿ ಕಪ್ಪತ್ತಗುಡ್ಡವನ್ನು ಆಶ್ರಯಿಸಿರುವ ಸುತ್ತಮುತ್ತಲಿನ 33ಕ್ಕೂ ಹೆಚ್ಚಿನ ಗ್ರಾಮಗಳ ಜನರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.<br /> <br /> ಈ ಭಾಗದ ದಲಿತರು, ಕುರುಬರು, ಅಲ್ಪಸಂಖ್ಯಾತರು, ಲಂಬಾಣಿಗಳು, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ಸಮುದಾಯಗಳ ಜನರು ಕೃಷಿ ಚಟುವಟಿಕೆ, ಜಾನುವಾರುಗಳ ಮೇವಿಗಾಗಿ ಕಪ್ಪತ್ತಗುಡ್ಡವನ್ನು ಅವಲಂಬಿಸಿದ್ದಾರೆ. ವನ್ಯಜೀವಿಧಾಮ ಘೋಷಣೆಯಾದರೆ ಕಪ್ಪತ್ತಗುಡ್ಡವನ್ನು ಆಶ್ರಯಿಸಿರುವ ಕುಟುಂಬಗಳು ಬೀದಿಗೆ ಬರಲಿವೆ ಎಂದರು.<br /> <br /> ಕಪ್ಪತಗುಡ್ಡದಲ್ಲಿ 60-70ರ ದಶಕದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕಳ್ಳಬಟ್ಟಿ ವ್ಯವಹಾರವನ್ನು ನಿಯಂತ್ರಿಸುವ ಉದ್ದೇಶದಿಂದ 1979ರಲ್ಲಿ ರಾಮಕೃಷ್ಣ ಹೆಗಡೆ ಸರ್ಕಾರ ಈ ಭಾಗದ ಜನರಿಗೆ ಪಟ್ಟಾ ನೀಡಿ ಸಾಗುವಳಿಗೆ ಹಚ್ಚಿದ್ದರು. ಅಂದಿನಿಂದ ನಿರಂತರವಾಗಿ ಇಲ್ಲಿನ ಜನರು ಭೂಮಿಯ ಸಾಗುವಳಿಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.<br /> <br /> ಇತ್ತೀಚಿನ ವರ್ಷಗಳಲ್ಲಿ ಉಂಟಾದ ತೀವ್ರ ಬರಗಾಲದಿಂದ ಇಲ್ಲಿನ ಕೂಲಿ ಕಾರ್ಮಿಕರು, ಬಡ ಜನರು ಕಂಗಾಲಾಗಿದ್ದಾರೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಕುಡಿಯುವ ನೀರಿಗೂ ತತ್ವಾರ ಪಡುವಂತಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವ ಬದಲು ವನ್ಯಜೀವಿಧಾಮದ ಘೋಷಣೆ ಮಾಡಲು ಹೊರಟಿರುವ ಸರ್ಕಾರದ ಧೋರಣೆ ಖಂಡನೀಯ ಎಂದರು. ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.<br /> <br /> ವೇದಿಕೆಯ ಸಂಚಾಲಕರಾದ ಲಕ್ಷ್ಮಣ ಚವ್ಹಾಣ, ಬಸವರಾಜು ಚಿಕ್ಕಪ್ಪನವರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಗದಗ ಜಿಲ್ಲೆಯ ಕಪ್ಪತ್ತಗುಡ್ಡವನ್ನು ವನ್ಯಜೀವಿಧಾಮವನ್ನಾಗಿ ಘೋಷಿಸಬಾರದು' ಎಂದು ಅಖಿಲ ಭಾರತ ಬಂಜಾರ ಸೇವಾ ಸಂಘದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಮೋತಿಲಾಲ ಚನ್ನಪ್ಪ ಮಾಳಗಿಮನಿ ಮನವಿ ಮಾಡಿದರು.<br /> <br /> ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪತ್ತಗುಡ್ಡದಲ್ಲಿನ ಅರಣ್ಯ ಸಂಪತ್ತು ಹಾಗೂ ವನ್ಯಜೀವಿಗಳನ್ನು ರಕ್ಷಿಸುವ ನೆಪದಲ್ಲಿ ಕಪ್ಪತ್ತಗುಡ್ಡವನ್ನು ಆಶ್ರಯಿಸಿರುವ ಸುತ್ತಮುತ್ತಲಿನ 33ಕ್ಕೂ ಹೆಚ್ಚಿನ ಗ್ರಾಮಗಳ ಜನರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.<br /> <br /> ಈ ಭಾಗದ ದಲಿತರು, ಕುರುಬರು, ಅಲ್ಪಸಂಖ್ಯಾತರು, ಲಂಬಾಣಿಗಳು, ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ಸಮುದಾಯಗಳ ಜನರು ಕೃಷಿ ಚಟುವಟಿಕೆ, ಜಾನುವಾರುಗಳ ಮೇವಿಗಾಗಿ ಕಪ್ಪತ್ತಗುಡ್ಡವನ್ನು ಅವಲಂಬಿಸಿದ್ದಾರೆ. ವನ್ಯಜೀವಿಧಾಮ ಘೋಷಣೆಯಾದರೆ ಕಪ್ಪತ್ತಗುಡ್ಡವನ್ನು ಆಶ್ರಯಿಸಿರುವ ಕುಟುಂಬಗಳು ಬೀದಿಗೆ ಬರಲಿವೆ ಎಂದರು.<br /> <br /> ಕಪ್ಪತಗುಡ್ಡದಲ್ಲಿ 60-70ರ ದಶಕದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕಳ್ಳಬಟ್ಟಿ ವ್ಯವಹಾರವನ್ನು ನಿಯಂತ್ರಿಸುವ ಉದ್ದೇಶದಿಂದ 1979ರಲ್ಲಿ ರಾಮಕೃಷ್ಣ ಹೆಗಡೆ ಸರ್ಕಾರ ಈ ಭಾಗದ ಜನರಿಗೆ ಪಟ್ಟಾ ನೀಡಿ ಸಾಗುವಳಿಗೆ ಹಚ್ಚಿದ್ದರು. ಅಂದಿನಿಂದ ನಿರಂತರವಾಗಿ ಇಲ್ಲಿನ ಜನರು ಭೂಮಿಯ ಸಾಗುವಳಿಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.<br /> <br /> ಇತ್ತೀಚಿನ ವರ್ಷಗಳಲ್ಲಿ ಉಂಟಾದ ತೀವ್ರ ಬರಗಾಲದಿಂದ ಇಲ್ಲಿನ ಕೂಲಿ ಕಾರ್ಮಿಕರು, ಬಡ ಜನರು ಕಂಗಾಲಾಗಿದ್ದಾರೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಕುಡಿಯುವ ನೀರಿಗೂ ತತ್ವಾರ ಪಡುವಂತಾಗಿದೆ. ಈ ಕುರಿತು ಕ್ರಮ ಕೈಗೊಳ್ಳುವ ಬದಲು ವನ್ಯಜೀವಿಧಾಮದ ಘೋಷಣೆ ಮಾಡಲು ಹೊರಟಿರುವ ಸರ್ಕಾರದ ಧೋರಣೆ ಖಂಡನೀಯ ಎಂದರು. ಈ ನಿರ್ಧಾರವನ್ನು ಸರ್ಕಾರ ಕೂಡಲೇ ಕೈಬಿಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.<br /> <br /> ವೇದಿಕೆಯ ಸಂಚಾಲಕರಾದ ಲಕ್ಷ್ಮಣ ಚವ್ಹಾಣ, ಬಸವರಾಜು ಚಿಕ್ಕಪ್ಪನವರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>