<p>ಬೆಂಗಳೂರು: `ದುಪ್ಪಟ್ಟು ತೆರಿಗೆ ತಪ್ಪಿಸುವ ಕುರಿತು ಭಾರತ ಮತ್ತು ಸ್ವಿಟ್ಜರ್ಲೆಂಡ್ ದೇಶಗಳು ಮಾಡಿಕೊಂಡಿರುವ ಒಪ್ಪಂದಕ್ಕೆ ಸ್ವಿಟ್ಜರ್ಲೆಂಡ್ ಸಂಸತ್ತಿನ ಅನುಮೋದನೆ ದೊರೆಯಬೇಕಿದೆ. ತನ್ನ ದೇಶದ ತೆರಿಗೆ ಕಳ್ಳರು ಮತ್ತು ಕಪ್ಪುಹಣ ಇಟ್ಟವರ ಕುರಿತ ಮಾಹಿತಿ ಪಡೆದುಕೊಳ್ಳಲು ಭಾರತಕ್ಕೆ ಈ ಒಪ್ಪಂದಕ್ಕೆ ಅನುಮೋದನೆ ದೊರೆತ ನಂತರ ಸಾಧ್ಯವಾಗಲಿದೆ.~<br /> <br /> - ಇದು ಸ್ವಿಟ್ಜರ್ಲೆಂಡ್ನ ಭಾರತದ ರಾಯಭಾರಿ ಫಿಲಿಪ್ ವೆಲ್ಟಿ ಹೇಳಿದ ಮಾತು. `ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ~ದಲ್ಲಿ (ಎಫ್ಕೆಸಿಸಿಐ) ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, `ಒಪ್ಪಂದಕ್ಕೆ ಈ ವರ್ಷದ ಅಂತ್ಯದ ವೇಳೆಗೆ ಸ್ವಿಟ್ಜರ್ಲೆಂಡ್ ಸಂಸತ್ತಿನ ಅನುಮೋದನೆ ದೊರೆಯುವ ಸಾಧ್ಯತೆ ಇದೆ~ ಎಂದು ತಿಳಿಸಿದರು.<br /> <br /> `ನಮ್ಮ ದೇಶದಲ್ಲಿ ತೆರಿಗೆ ವಂಚನೆಯನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗುತ್ತದೆ, ಆದರೆ ತೆರಿಗೆ ತಪ್ಪಿಸಿಕೊಳ್ಳುವುದು ನಮ್ಮಲ್ಲಿ ಆಡಳಿತಾತ್ಮಕ ಅಪರಾಧ ಎಂದಷ್ಟೇ ಪರಿಗಣಿಸಲಾಗುತ್ತದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> <strong>ದೂತಾವಾಸ ಕಚೇರಿ: </strong>ಸ್ವಿಟ್ಜರ್ಲೆಂಡ್ನ ಬ್ಯಾಂಕಿಂಗ್ ವ್ಯವಸ್ಥೆ ಗಟ್ಟಿಯಾಗಿದೆ, ಕಾನೂನು ಬದ್ಧವಾಗಿದೆ ಮತ್ತು ಗೋಪ್ಯತೆ ಕಾಪಾಡುವ ವಿಚಾರದಲ್ಲಿ ಕಠಿಣವಾಗಿಯೂ ಇದೆ ಎಂದರು. ಸ್ವಿಟ್ಜರ್ಲೆಂಡ್ ವೀಸಾ ಬಯಸುವವರ ಸಂಖ್ಯೆ ದಕ್ಷಿಣ ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸ್ವಿಟ್ಜರ್ಲೆಂಡ್ ದೂತಾವಾಸ ಕಚೇರಿಯನ್ನು ಆರಂಭಿಸಲಾಗಿದೆ ಎಂದರು.<br /> <br /> ಬೆಂಗಳೂರಿನ ಸ್ವಿಸ್ ದೂತಾವಾಸ ಕಚೇರಿ 2012ರ ವೇಳೆಗೆ ಹೊಸ ಕಚೇರಿಯಲ್ಲಿ ಕಾರ್ಯಾಚರಣೆ ಆರಂಭಿಸಲಿದೆ. ಇಲ್ಲಿನ ದೂತಾವಾಸ ಕಚೇರಿ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವೀಸಾ ಅರ್ಜಿಗಳನ್ನು ನಿರ್ವಹಿಸಲಿದೆ.<br /> <br /> ಎಫ್ಕೆಸಿಸಿಐ ಅಧ್ಯಕ್ಷ ಎನ್.ಎಸ್. ಶ್ರೀನಿವಾಸ ಮೂರ್ತಿ, ಬೆಂಗಳೂರಿನ ಸ್ವಿಸ್ ದೂತಾವಾಸ ಕಚೇರಿಯ ಅಧಿಕಾರಿ ರಾಲ್ಫ್ ಪ್ರೇ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ದುಪ್ಪಟ್ಟು ತೆರಿಗೆ ತಪ್ಪಿಸುವ ಕುರಿತು ಭಾರತ ಮತ್ತು ಸ್ವಿಟ್ಜರ್ಲೆಂಡ್ ದೇಶಗಳು ಮಾಡಿಕೊಂಡಿರುವ ಒಪ್ಪಂದಕ್ಕೆ ಸ್ವಿಟ್ಜರ್ಲೆಂಡ್ ಸಂಸತ್ತಿನ ಅನುಮೋದನೆ ದೊರೆಯಬೇಕಿದೆ. ತನ್ನ ದೇಶದ ತೆರಿಗೆ ಕಳ್ಳರು ಮತ್ತು ಕಪ್ಪುಹಣ ಇಟ್ಟವರ ಕುರಿತ ಮಾಹಿತಿ ಪಡೆದುಕೊಳ್ಳಲು ಭಾರತಕ್ಕೆ ಈ ಒಪ್ಪಂದಕ್ಕೆ ಅನುಮೋದನೆ ದೊರೆತ ನಂತರ ಸಾಧ್ಯವಾಗಲಿದೆ.~<br /> <br /> - ಇದು ಸ್ವಿಟ್ಜರ್ಲೆಂಡ್ನ ಭಾರತದ ರಾಯಭಾರಿ ಫಿಲಿಪ್ ವೆಲ್ಟಿ ಹೇಳಿದ ಮಾತು. `ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ~ದಲ್ಲಿ (ಎಫ್ಕೆಸಿಸಿಐ) ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, `ಒಪ್ಪಂದಕ್ಕೆ ಈ ವರ್ಷದ ಅಂತ್ಯದ ವೇಳೆಗೆ ಸ್ವಿಟ್ಜರ್ಲೆಂಡ್ ಸಂಸತ್ತಿನ ಅನುಮೋದನೆ ದೊರೆಯುವ ಸಾಧ್ಯತೆ ಇದೆ~ ಎಂದು ತಿಳಿಸಿದರು.<br /> <br /> `ನಮ್ಮ ದೇಶದಲ್ಲಿ ತೆರಿಗೆ ವಂಚನೆಯನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲಾಗುತ್ತದೆ, ಆದರೆ ತೆರಿಗೆ ತಪ್ಪಿಸಿಕೊಳ್ಳುವುದು ನಮ್ಮಲ್ಲಿ ಆಡಳಿತಾತ್ಮಕ ಅಪರಾಧ ಎಂದಷ್ಟೇ ಪರಿಗಣಿಸಲಾಗುತ್ತದೆ~ ಎಂದು ಅವರು ಮಾಹಿತಿ ನೀಡಿದರು.<br /> <br /> <strong>ದೂತಾವಾಸ ಕಚೇರಿ: </strong>ಸ್ವಿಟ್ಜರ್ಲೆಂಡ್ನ ಬ್ಯಾಂಕಿಂಗ್ ವ್ಯವಸ್ಥೆ ಗಟ್ಟಿಯಾಗಿದೆ, ಕಾನೂನು ಬದ್ಧವಾಗಿದೆ ಮತ್ತು ಗೋಪ್ಯತೆ ಕಾಪಾಡುವ ವಿಚಾರದಲ್ಲಿ ಕಠಿಣವಾಗಿಯೂ ಇದೆ ಎಂದರು. ಸ್ವಿಟ್ಜರ್ಲೆಂಡ್ ವೀಸಾ ಬಯಸುವವರ ಸಂಖ್ಯೆ ದಕ್ಷಿಣ ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸ್ವಿಟ್ಜರ್ಲೆಂಡ್ ದೂತಾವಾಸ ಕಚೇರಿಯನ್ನು ಆರಂಭಿಸಲಾಗಿದೆ ಎಂದರು.<br /> <br /> ಬೆಂಗಳೂರಿನ ಸ್ವಿಸ್ ದೂತಾವಾಸ ಕಚೇರಿ 2012ರ ವೇಳೆಗೆ ಹೊಸ ಕಚೇರಿಯಲ್ಲಿ ಕಾರ್ಯಾಚರಣೆ ಆರಂಭಿಸಲಿದೆ. ಇಲ್ಲಿನ ದೂತಾವಾಸ ಕಚೇರಿ ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ವೀಸಾ ಅರ್ಜಿಗಳನ್ನು ನಿರ್ವಹಿಸಲಿದೆ.<br /> <br /> ಎಫ್ಕೆಸಿಸಿಐ ಅಧ್ಯಕ್ಷ ಎನ್.ಎಸ್. ಶ್ರೀನಿವಾಸ ಮೂರ್ತಿ, ಬೆಂಗಳೂರಿನ ಸ್ವಿಸ್ ದೂತಾವಾಸ ಕಚೇರಿಯ ಅಧಿಕಾರಿ ರಾಲ್ಫ್ ಪ್ರೇ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>