<p> <strong>ಸರಗೂರು: </strong>ಸಮೀಪದ ಹಂಚೀಪುರ ಗ್ರಾಮದಲ್ಲಿ ಗುರುವಾರ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು ಸುಮಾರು 8 ಎಕರೆ ಕಬ್ಬು ಸುಟ್ಟು ಹೋಗಿದೆ. ಹಂಚೀಪುರ ಗ್ರಾಮ ಪಂಚಾಯಿತಿ ಸೇರಿದ ಸರ್ವೆ ನಂಬರ್ 5/2 ಮತ್ತು 10 ಸರ್ವೆ ನಂಬರ್ಗೆ ಸೇರಿದ 8 ಎಕರೆ ಕಬ್ಬಿನ ಗದ್ದೆಯಲ್ಲಿ ಮಧ್ಯಾಹ್ನ 3.30ರ ಸಮಯದಲ್ಲಿ ಬೆಂಕಿ ಬಿದ್ದಿದ್ದು, ಅಂದಾಜು 390ಟನ್ ಕಬ್ಬು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. <br /> <br /> ಹಂಚೀಪುರ ಗ್ರಾಮದ ಶಿವ ನಾಗಮ್ಮ ಎರಡೂವರೆ ಎಕರೆ, ಮಲ್ಲಿಕಾರ್ಜುನ ಎರಡೂವರೆ ಎಕರೆ, ಎಚ್.ಎನ್.ಮಹದೇವಪ್ಪ 2 ಎಕರೆ, ಮಂಜುನಾಥ 1 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಒಂದು ಕಡೆ ಬಿದ್ದ ಬೆಂಕಿ ಗಾಳಿಯ ಹೊಡೆತಕ್ಕೆ ಅಕ್ಕ ಪಕ್ಕದ ಜಮೀನುಗಳಿಗೆ ಆವರಿಸಿಕೊಂಡಿತು. ಇದರಿಂದಾಗಿ ಅಂದಾಜು 8ಲಕ್ಷರೂಪಾಯಿಯಷ್ಟು ನಷ್ಟವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ‘ಕಬ್ಬು ಬೆಳೆಯಲು ನಾವು ಬ್ಯಾಂಕಿನಲ್ಲಿ ಸಾಲ ಮಾಡಿದ್ದು, ಬ್ಯಾಂಕಿನ ಸಾಲ ಮರುಪಾವತಿ ಹೇಗೆ ಮಾಡುವುದು ಎಂಬ ಚಿಂತೆ ಕಾಡುತ್ತಿದೆ. ಬೆಳೆಯೂ ನಮ್ಮ ಕೈಗೆ ಬರುವ ಹಂತದಲ್ಲಿದ್ದಾಗ ಈ ಘಟನೆ ಸಂಭವಿಸಿದ್ದು, ಅಪಾರ ನಷ್ಟವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಬಣ್ಣಾರಿ ಅಮ್ಮನ್ ಷುಗರ್ ಕಂಪನಿಯವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಸರಗೂರು: </strong>ಸಮೀಪದ ಹಂಚೀಪುರ ಗ್ರಾಮದಲ್ಲಿ ಗುರುವಾರ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು ಸುಮಾರು 8 ಎಕರೆ ಕಬ್ಬು ಸುಟ್ಟು ಹೋಗಿದೆ. ಹಂಚೀಪುರ ಗ್ರಾಮ ಪಂಚಾಯಿತಿ ಸೇರಿದ ಸರ್ವೆ ನಂಬರ್ 5/2 ಮತ್ತು 10 ಸರ್ವೆ ನಂಬರ್ಗೆ ಸೇರಿದ 8 ಎಕರೆ ಕಬ್ಬಿನ ಗದ್ದೆಯಲ್ಲಿ ಮಧ್ಯಾಹ್ನ 3.30ರ ಸಮಯದಲ್ಲಿ ಬೆಂಕಿ ಬಿದ್ದಿದ್ದು, ಅಂದಾಜು 390ಟನ್ ಕಬ್ಬು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. <br /> <br /> ಹಂಚೀಪುರ ಗ್ರಾಮದ ಶಿವ ನಾಗಮ್ಮ ಎರಡೂವರೆ ಎಕರೆ, ಮಲ್ಲಿಕಾರ್ಜುನ ಎರಡೂವರೆ ಎಕರೆ, ಎಚ್.ಎನ್.ಮಹದೇವಪ್ಪ 2 ಎಕರೆ, ಮಂಜುನಾಥ 1 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಒಂದು ಕಡೆ ಬಿದ್ದ ಬೆಂಕಿ ಗಾಳಿಯ ಹೊಡೆತಕ್ಕೆ ಅಕ್ಕ ಪಕ್ಕದ ಜಮೀನುಗಳಿಗೆ ಆವರಿಸಿಕೊಂಡಿತು. ಇದರಿಂದಾಗಿ ಅಂದಾಜು 8ಲಕ್ಷರೂಪಾಯಿಯಷ್ಟು ನಷ್ಟವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.<br /> <br /> ‘ಕಬ್ಬು ಬೆಳೆಯಲು ನಾವು ಬ್ಯಾಂಕಿನಲ್ಲಿ ಸಾಲ ಮಾಡಿದ್ದು, ಬ್ಯಾಂಕಿನ ಸಾಲ ಮರುಪಾವತಿ ಹೇಗೆ ಮಾಡುವುದು ಎಂಬ ಚಿಂತೆ ಕಾಡುತ್ತಿದೆ. ಬೆಳೆಯೂ ನಮ್ಮ ಕೈಗೆ ಬರುವ ಹಂತದಲ್ಲಿದ್ದಾಗ ಈ ಘಟನೆ ಸಂಭವಿಸಿದ್ದು, ಅಪಾರ ನಷ್ಟವಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಬಣ್ಣಾರಿ ಅಮ್ಮನ್ ಷುಗರ್ ಕಂಪನಿಯವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>