<p>ಬಾಗಲಕೋಟೆ: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಬಾಕಿ ಹಣವನ್ನು ಈ ತಿಂಗಳ ಅಂತ್ಯದೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರು ಸಂದಾಯ ಮಾಡದಿದ್ದರೆ ಕಬ್ಬು ಬೆಳೆಗಾರರು ನೇರ ಕಾರ್ಯಾಚರಣೆಗೆ ಇಳಿಯಲಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಮುತ್ತಪ್ಪ ಕೋಮಾರ್ ಎಚ್ಚರಿಕೆ ನೀಡಿದರು.<br /> <br /> ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 10 ಸಕ್ಕರೆ ಕಾರ್ಖಾನೆಗಳಲ್ಲಿ ಆರು ಕಾರ್ಖಾನೆಗಳು ಮಾತ್ರ 2010-11ನೇ ಸಾಲಿನ ಕಬ್ಬಿನ ಮೊದಲ ಕಂತಾಗಿ ಪ್ರತಿಟನ್ಗೆ ರೂ. 1800 ಪಾವತಿಸಿವೆ, ಆದರೆ ಉಳಿದ ನಾಲ್ಕು ಕಾರ್ಖಾನೆಗಳು ರೂ. 64.8 ಕೋಟಿ ನೀಡದೇ ಬಾಕಿ ಉಳಿಸಿಕೊಂಡಿವೆ ಎಂದರು.<br /> <br /> ಬೆಳಗಾವಿ ಜಿಲ್ಲೆಯ ಎಲ್ಲ ಕಾರ್ಖಾನೆಯವರು ಮತ್ತು ನಂದಿ ಸಕ್ಕರೆ ಕಾರ್ಖಾನೆ 2010-11ನೇ ಸಾಲಿಗೆ ಪ್ರತಿ ಟನ್ಗೆ ರೂ. 200ರಂತೆ 2ನೇ ಕಂತಿನ ಹಣವನ್ನು ಪಾವತಿಸಿದ್ದಾರೆ. ಆದರೆ ನಮ್ಮ ಜಿಲ್ಲೆಯ ಕಾರ್ಖಾನೆಗಳಿಂದ ರೂ. 156.58 ಕೋಟಿ ಬಾಕಿ ಉಳಿದಿದೆ. ಈ ಹಣ ಈ ತಿಂಗಳ 30ರೊಳಗೆ ಪಾವತಿಯಾಗದಿದ್ದರೆ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.<br /> <br /> ಇನ್ನು ಮುಂದೆ ಕಬ್ಬು ಪೂರೈಕೆಯಾದ 15 ದಿನದ ಒಳಗಾಗಿ ಮೊದಲ ಕಂತಿನ ಹಣ ಸಂದಾಯವಾಗಲೇ ಬೇಕು, ಇಲ್ಲದಿದ್ದರೆ ಕಬ್ಬು ಬೆಳೆಗಾರರು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಕಬ್ಬು ನಿಯಂತ್ರಣ ಕಾಯ್ದೆಯನ್ನು ಕಾರ್ಖಾನೆಗಳು ಪದೇಪದೇ ಉಲ್ಲಂಘಿಸುವ ಪ್ರಕರಣ ಹೆಚ್ಚುತ್ತಿದೆ ಎಂದ ಅವರು ಮುಂಬರುವ ಹಂಗಾಮಿನ 2011-12ನೇ ಸಾಲಿಗೆ ಪ್ರತಿ ಟನ್ಗೆ ರೂ. 2200 ಮೊದಲ ಕಂತಿನ ಹಣ ಘೋಷಣೆಯಾಗಬೇಕು ಎಂದು ಆಗ್ರಹಿಸಿದರು.<br /> <br /> ಬೆಳೆಗಾರರ ಕಬ್ಬಿನ ಬಾಕಿ ಹಣ ಪಾವತಿ ಸಂಬಂಧ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ಸಭೆ ನಡೆಸಿ, ಹಣ ನೀಡಲು ಸಮಯಾವಕಾಶ ನೀಡಿದ್ದರೂ ಸಹ ಇನ್ನೂ ನೀಡಿಲ್ಲ ಎಂದು ದೂರಿದರು.<br /> <br /> <strong>ನಿರಾಣಿ ರಾಜೀನಾಮೆಗೆ ಒತ್ತಾಯ</strong><br /> ಸಚಿವ ಮುರುಗೇಶ ನಿರಾಣಿ ಅವರ ಸಕ್ಕರೆ ಕಾರ್ಖಾನೆಯೊಂದೇ ರೂ. 35 ಕೋಟಿ ಹಣವನ್ನು ಕಬ್ಬು ಬೆಳೆಗಾರರಿಗೆ ಪಾವತಿಸದಿರುವುದು ಖಂಡನೀಯ, ಸಚಿವರಾಗಿದ್ದುಕೊಂಡು ರೈತರ ಹಣವನ್ನು ಪಾವತಿಸದೇ ಇರುವ ನಿರಾಣಿ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. <br /> <br /> ಮುಖ್ಯಮಂತ್ರಿ ಅವರು ತಕ್ಷಣ ಮಧ್ಯ ಪ್ರವೇಶಿಸಿ 2011-12ನೇ ಸಾಲಿನ ಕಬ್ಬಿಗೆ ದರನಿಗದಿ ಮಾಡಬೇಕು ಎಂದು ಆಗ್ರಹಿಸಿದರು.<br /> <br /> ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಬ್ಬಿನ ಬಾಕಿ ಹಣ ಬಾರದಿರುವುದರಿಂದ ರೈತರು ಮಾಡಿದ ಸಾಲವನ್ನು ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪಿದ್ದಾರೆ ಎಂದು ತಿಳಿಸಿದರು.<br /> <br /> ಕಾರ್ಖಾನೆಗಳು ಇದೇ ರೀತಿ ವಿಳಂಬ ಧೋರಣೆ ಅನುಸರಿಸಿ ರೈತರಿಗೆ ತೊಂದರೆ ಮಾಡುವುದನ್ನು ಮುಂದುವರಿಸಿದರೆ ಮುಂದಿನ ವರ್ಷದಿಂದ ರೈತರು ಕಬ್ಬು ಬೆಳೆಯುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಸೊರಗಾವಿ, ಜಿಲ್ಲಾ ಸಂಚಾಲಕ ದುಂಡಪ್ಪ ಯರಗಟ್ಟಿ, ಮುಖಂಡರಾದ ಬಂಡು ಘಾಟಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಜಿಲ್ಲೆಯ ಕಬ್ಬು ಬೆಳೆಗಾರರಿಗೆ ನೀಡಬೇಕಿರುವ ಬಾಕಿ ಹಣವನ್ನು ಈ ತಿಂಗಳ ಅಂತ್ಯದೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರು ಸಂದಾಯ ಮಾಡದಿದ್ದರೆ ಕಬ್ಬು ಬೆಳೆಗಾರರು ನೇರ ಕಾರ್ಯಾಚರಣೆಗೆ ಇಳಿಯಲಿದ್ದಾರೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಮುಖಂಡ ಮುತ್ತಪ್ಪ ಕೋಮಾರ್ ಎಚ್ಚರಿಕೆ ನೀಡಿದರು.<br /> <br /> ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 10 ಸಕ್ಕರೆ ಕಾರ್ಖಾನೆಗಳಲ್ಲಿ ಆರು ಕಾರ್ಖಾನೆಗಳು ಮಾತ್ರ 2010-11ನೇ ಸಾಲಿನ ಕಬ್ಬಿನ ಮೊದಲ ಕಂತಾಗಿ ಪ್ರತಿಟನ್ಗೆ ರೂ. 1800 ಪಾವತಿಸಿವೆ, ಆದರೆ ಉಳಿದ ನಾಲ್ಕು ಕಾರ್ಖಾನೆಗಳು ರೂ. 64.8 ಕೋಟಿ ನೀಡದೇ ಬಾಕಿ ಉಳಿಸಿಕೊಂಡಿವೆ ಎಂದರು.<br /> <br /> ಬೆಳಗಾವಿ ಜಿಲ್ಲೆಯ ಎಲ್ಲ ಕಾರ್ಖಾನೆಯವರು ಮತ್ತು ನಂದಿ ಸಕ್ಕರೆ ಕಾರ್ಖಾನೆ 2010-11ನೇ ಸಾಲಿಗೆ ಪ್ರತಿ ಟನ್ಗೆ ರೂ. 200ರಂತೆ 2ನೇ ಕಂತಿನ ಹಣವನ್ನು ಪಾವತಿಸಿದ್ದಾರೆ. ಆದರೆ ನಮ್ಮ ಜಿಲ್ಲೆಯ ಕಾರ್ಖಾನೆಗಳಿಂದ ರೂ. 156.58 ಕೋಟಿ ಬಾಕಿ ಉಳಿದಿದೆ. ಈ ಹಣ ಈ ತಿಂಗಳ 30ರೊಳಗೆ ಪಾವತಿಯಾಗದಿದ್ದರೆ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.<br /> <br /> ಇನ್ನು ಮುಂದೆ ಕಬ್ಬು ಪೂರೈಕೆಯಾದ 15 ದಿನದ ಒಳಗಾಗಿ ಮೊದಲ ಕಂತಿನ ಹಣ ಸಂದಾಯವಾಗಲೇ ಬೇಕು, ಇಲ್ಲದಿದ್ದರೆ ಕಬ್ಬು ಬೆಳೆಗಾರರು ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು.<br /> <br /> ಜಿಲ್ಲೆಯಲ್ಲಿ ಕಬ್ಬು ನಿಯಂತ್ರಣ ಕಾಯ್ದೆಯನ್ನು ಕಾರ್ಖಾನೆಗಳು ಪದೇಪದೇ ಉಲ್ಲಂಘಿಸುವ ಪ್ರಕರಣ ಹೆಚ್ಚುತ್ತಿದೆ ಎಂದ ಅವರು ಮುಂಬರುವ ಹಂಗಾಮಿನ 2011-12ನೇ ಸಾಲಿಗೆ ಪ್ರತಿ ಟನ್ಗೆ ರೂ. 2200 ಮೊದಲ ಕಂತಿನ ಹಣ ಘೋಷಣೆಯಾಗಬೇಕು ಎಂದು ಆಗ್ರಹಿಸಿದರು.<br /> <br /> ಬೆಳೆಗಾರರ ಕಬ್ಬಿನ ಬಾಕಿ ಹಣ ಪಾವತಿ ಸಂಬಂಧ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ಸಭೆ ನಡೆಸಿ, ಹಣ ನೀಡಲು ಸಮಯಾವಕಾಶ ನೀಡಿದ್ದರೂ ಸಹ ಇನ್ನೂ ನೀಡಿಲ್ಲ ಎಂದು ದೂರಿದರು.<br /> <br /> <strong>ನಿರಾಣಿ ರಾಜೀನಾಮೆಗೆ ಒತ್ತಾಯ</strong><br /> ಸಚಿವ ಮುರುಗೇಶ ನಿರಾಣಿ ಅವರ ಸಕ್ಕರೆ ಕಾರ್ಖಾನೆಯೊಂದೇ ರೂ. 35 ಕೋಟಿ ಹಣವನ್ನು ಕಬ್ಬು ಬೆಳೆಗಾರರಿಗೆ ಪಾವತಿಸದಿರುವುದು ಖಂಡನೀಯ, ಸಚಿವರಾಗಿದ್ದುಕೊಂಡು ರೈತರ ಹಣವನ್ನು ಪಾವತಿಸದೇ ಇರುವ ನಿರಾಣಿ ಅವರು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. <br /> <br /> ಮುಖ್ಯಮಂತ್ರಿ ಅವರು ತಕ್ಷಣ ಮಧ್ಯ ಪ್ರವೇಶಿಸಿ 2011-12ನೇ ಸಾಲಿನ ಕಬ್ಬಿಗೆ ದರನಿಗದಿ ಮಾಡಬೇಕು ಎಂದು ಆಗ್ರಹಿಸಿದರು.<br /> <br /> ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕಬ್ಬಿನ ಬಾಕಿ ಹಣ ಬಾರದಿರುವುದರಿಂದ ರೈತರು ಮಾಡಿದ ಸಾಲವನ್ನು ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ಹಂತ ತಲುಪಿದ್ದಾರೆ ಎಂದು ತಿಳಿಸಿದರು.<br /> <br /> ಕಾರ್ಖಾನೆಗಳು ಇದೇ ರೀತಿ ವಿಳಂಬ ಧೋರಣೆ ಅನುಸರಿಸಿ ರೈತರಿಗೆ ತೊಂದರೆ ಮಾಡುವುದನ್ನು ಮುಂದುವರಿಸಿದರೆ ಮುಂದಿನ ವರ್ಷದಿಂದ ರೈತರು ಕಬ್ಬು ಬೆಳೆಯುವುದನ್ನು ನಿಲ್ಲಿಸಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ ಸೊರಗಾವಿ, ಜಿಲ್ಲಾ ಸಂಚಾಲಕ ದುಂಡಪ್ಪ ಯರಗಟ್ಟಿ, ಮುಖಂಡರಾದ ಬಂಡು ಘಾಟಗೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>