<p><strong>ಬೆಂಗಳೂರು:</strong> ಟನ್ ಕಬ್ಬಿಗೆ ₨ 2,500 ನೀಡಲು ಸಾಧ್ಯವೇ ಇಲ್ಲ ಎಂದು ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಸಂಘದ (ಸಿಸ್ಮಾ) ರಾಜ್ಯ ಘಟಕ ಪಟ್ಟು ಹಿಡಿದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವರಿಸಲು ಸೋಮವಾರ ಬೆಂಗಳೂರಿನಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ಆದರೆ ಕಬ್ಬಿಗೆ ಟನ್ಗೆ ಸರ್ಕಾರ ₨ 2650 ದರ ನಿಗದಿ ಮಾಡಿದ್ದು, ಕಾರ್ಖಾನೆಗಳು ತಮ್ಮ ಪಾಲಿನ ₨2,500 ದರ ನೀಡಲೇಬೇಕು ಎಂದು ಸಿದ್ದರಾಮಯ್ಯ ತಲಕಾಡಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಇತ್ತ, ಕಬ್ಬು ಬೆಳೆಗಾರರು ಬೆಳಗಾವಿ ಸುವರ್ಣಸೌಧದ ಮುಂದೆ ನಡೆಸುತ್ತಿದ್ದ ಧರಣಿಯನ್ನು ಮುಖ್ಯಮಂತ್ರಿ ಜತೆ ಚರ್ಚೆ ನಂತರ ವಾಪಸ್ ಪಡೆದಿದ್ದಾರೆ.<br /> <br /> <strong>ಬಂದ್ಗೂ ಹಿಂಜರಿಯೊಲ್ಲ:</strong> ತಮ್ಮ ಮನವಿಗೆ ಮುಖ್ಯಮಂತ್ರಿಯವರು ಪೂರಕವಾಗಿ ಸ್ಪಂದಿಸದೆ ಇದ್ದಲ್ಲಿ, ನ್ಯಾಯಾಲಯದ ಮೆಟ್ಟಿಲೇರುವ ಬಗ್ಗೆ ಸಕ್ಕರೆ ಕಾರ್ಖಾನೆಗಳ ಸಂಘದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಂಗ ಬಂದರೆ ಕಬ್ಬು ಅರೆಯುವ ಚಟುವಟಿಕೆಯನ್ನು ತಕ್ಷಣದಿಂದ ನಿಲ್ಲಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಯಾಗಿದೆ. ಆದರೆ, ಅಂತಿಮ ತೀರ್ಮಾನ ತೆಗೆದುಕೊಳ್ಳಲಿಲ್ಲ ಎನ್ನಲಾಗಿದೆ.<br /> <br /> ಸರ್ಕಾರಕ್ಕೆ ರೈತರ ಬಗ್ಗೆ ಅನುಕಂಪ ಇದ್ದಲ್ಲಿ, ಈಗಾಗಲೇ ಘೋಷಿಸಿರುವ ₨ 150 ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ₨ 500 ನೀಡಲಿ ಎಂದು ಕಾರ್ಖಾನೆಗಳ ಆಡಳಿತ ಮಂಡಳಿಗಳು ಒತ್ತಾಯಿಸುತ್ತಿವೆ. ರಾಜ್ಯದಲ್ಲಿ ಸಕ್ಕರೆ ಉತ್ಪಾದನೆ ಒಂದು ಲಕ್ಷ ಟನ್ನಷ್ಟು ಹೆಚ್ಚಾಗಿದೆ. ಸಕ್ಕರೆ ಬೆಲೆ ಕುಸಿದಿದೆ. ಸರ್ಕಾರ ನಿಗದಿ ಮಾಡಿರುವ ದರದಿಂದ ಪ್ರತಿ ಟನ್ಗೆ ₨ 400ರಿಂದ ₨ 600ರಷ್ಟು ನಷ್ಟವಾಗುತ್ತದೆ ಎಂಬುದು ಅವುಗಳ ಆತಂಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟನ್ ಕಬ್ಬಿಗೆ ₨ 2,500 ನೀಡಲು ಸಾಧ್ಯವೇ ಇಲ್ಲ ಎಂದು ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಸಂಘದ (ಸಿಸ್ಮಾ) ರಾಜ್ಯ ಘಟಕ ಪಟ್ಟು ಹಿಡಿದಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವರಿಸಲು ಸೋಮವಾರ ಬೆಂಗಳೂರಿನಲ್ಲಿ ನಡೆದ ಸಂಘದ ಸಭೆಯಲ್ಲಿ ನಿರ್ಧರಿಸಲಾಗಿದೆ.<br /> <br /> ಆದರೆ ಕಬ್ಬಿಗೆ ಟನ್ಗೆ ಸರ್ಕಾರ ₨ 2650 ದರ ನಿಗದಿ ಮಾಡಿದ್ದು, ಕಾರ್ಖಾನೆಗಳು ತಮ್ಮ ಪಾಲಿನ ₨2,500 ದರ ನೀಡಲೇಬೇಕು ಎಂದು ಸಿದ್ದರಾಮಯ್ಯ ತಲಕಾಡಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಇತ್ತ, ಕಬ್ಬು ಬೆಳೆಗಾರರು ಬೆಳಗಾವಿ ಸುವರ್ಣಸೌಧದ ಮುಂದೆ ನಡೆಸುತ್ತಿದ್ದ ಧರಣಿಯನ್ನು ಮುಖ್ಯಮಂತ್ರಿ ಜತೆ ಚರ್ಚೆ ನಂತರ ವಾಪಸ್ ಪಡೆದಿದ್ದಾರೆ.<br /> <br /> <strong>ಬಂದ್ಗೂ ಹಿಂಜರಿಯೊಲ್ಲ:</strong> ತಮ್ಮ ಮನವಿಗೆ ಮುಖ್ಯಮಂತ್ರಿಯವರು ಪೂರಕವಾಗಿ ಸ್ಪಂದಿಸದೆ ಇದ್ದಲ್ಲಿ, ನ್ಯಾಯಾಲಯದ ಮೆಟ್ಟಿಲೇರುವ ಬಗ್ಗೆ ಸಕ್ಕರೆ ಕಾರ್ಖಾನೆಗಳ ಸಂಘದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಂಗ ಬಂದರೆ ಕಬ್ಬು ಅರೆಯುವ ಚಟುವಟಿಕೆಯನ್ನು ತಕ್ಷಣದಿಂದ ನಿಲ್ಲಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಯಾಗಿದೆ. ಆದರೆ, ಅಂತಿಮ ತೀರ್ಮಾನ ತೆಗೆದುಕೊಳ್ಳಲಿಲ್ಲ ಎನ್ನಲಾಗಿದೆ.<br /> <br /> ಸರ್ಕಾರಕ್ಕೆ ರೈತರ ಬಗ್ಗೆ ಅನುಕಂಪ ಇದ್ದಲ್ಲಿ, ಈಗಾಗಲೇ ಘೋಷಿಸಿರುವ ₨ 150 ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ₨ 500 ನೀಡಲಿ ಎಂದು ಕಾರ್ಖಾನೆಗಳ ಆಡಳಿತ ಮಂಡಳಿಗಳು ಒತ್ತಾಯಿಸುತ್ತಿವೆ. ರಾಜ್ಯದಲ್ಲಿ ಸಕ್ಕರೆ ಉತ್ಪಾದನೆ ಒಂದು ಲಕ್ಷ ಟನ್ನಷ್ಟು ಹೆಚ್ಚಾಗಿದೆ. ಸಕ್ಕರೆ ಬೆಲೆ ಕುಸಿದಿದೆ. ಸರ್ಕಾರ ನಿಗದಿ ಮಾಡಿರುವ ದರದಿಂದ ಪ್ರತಿ ಟನ್ಗೆ ₨ 400ರಿಂದ ₨ 600ರಷ್ಟು ನಷ್ಟವಾಗುತ್ತದೆ ಎಂಬುದು ಅವುಗಳ ಆತಂಕ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>