<p><strong>ಗೌರಿಬಿದನೂರು: </strong>ತಾಲ್ಲೂಕಿನ ಸಿರು ಗುಪ್ಪ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಕಬ್ಬು ಪೂರೈಕೆ ಮಾಡಿದ ರೈತರಿಗೆ ನೀಡಬೇಕಾಗಿದ್ದ ಬಾಕಿ ಹಣ 4.86 ಕೋಟಿ ರೂಪಾಯಿಗಳನ್ನು ಗುರುವಾರ ಪಟ್ಟಣದಲ್ಲಿ ವಿತರಿಸ ಲಾಯಿತು. ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಬೆಳೆಗಾರರಿಗೆ ಚೆಕ್ ವಿತರಿಸಿದರು. <br /> <br /> ಕಬ್ಬು ಸರಬರಾಜು ಮಾಡಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರೈತರು ಸಾಕಷ್ಟು ಹೋರಾಟ ನಡೆಸಿದ್ದರು.<br /> ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಎನ್.ಜ್ಯೋತಿರೆಡ್ಡಿ ಮಾತ ನಾಡಿ, ಕಬ್ಬು ಬೆಳೆಗಾರರ ನಿರಂತರ ಹೋರಾಟದ ಫಲದಿಂದ ಈ ಹಣ ದೊರೆತಿದೆ. ಕಬ್ಬು ಪೂರೈಸುವ ರೈತರಿಗೆ ಹಿಂದೆ ಹಣ ನೀಡಿರುವ ದಾಖಲೆಗಳ ಆಧಾರದ ಮೇಲೆ ಚೆಕ್ ವಿತರಿಸುವಂತೆ ಸಲಹೆ ಮಾಡಿದರು.<br /> <br /> `ಈಗಾಗಲೇ ಸಕ್ಕರೆ ಕಾರ್ಖಾನೆ ನಿಂತಿದೆ. ಇದನ್ನು ಮತ್ತೆ ಆರಂಭಿಸುವುದರಿಂದ ಹೆಚ್ಚಿನ ರೈತರಿಗೆ ಅನುಕೂಲವಾಗುತ್ತದೆ. <br /> <br /> ತಾಲ್ಲೂಕಿನ ಇನ್ನೂ ಕೆಲವು ಭಾಗಗಳಲ್ಲಿ ರೈತರಿಗೆ ಕಬ್ಬು ಬೆಳೆಯಲು ಉತ್ಸಾಹವಿದೆ. ಅದರತ್ತ ತಾಲ್ಲೂಕು ಆಡಳಿತ ಎಂದು ಜ್ಯೋತಿರೆಡ್ಡಿ ಅವರು ಅಭಿಪ್ರಾಯ ಪಟ್ಟರು.<br /> <br /> ಇದೇ ವೇಳೆ ಸಿರುಗುಪ್ಪ ಸಕ್ಕರೆ ಕಾರ್ಖಾನೆ ರೈತ ಸಂಘದ ಅಧ್ಯಕ್ಷ ಸಿ.ಎಸ್.ಮೋಹನ್ ಮಾತನಾಡಿದರು. <br /> ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಉಪ ವಿಭಾಗಾಧಿಕಾರಿ ಸತೀಶ್ಕುಮಾರ್, ತಹ ಶೀಲ್ದಾರ್ ಡಾ.ಸುಧಾ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾ ಯಣ, ಕಾರ್ಯದರ್ಶಿ ಲೋಕೇಶ್ಗೌಡ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು: </strong>ತಾಲ್ಲೂಕಿನ ಸಿರು ಗುಪ್ಪ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯು ಕಬ್ಬು ಪೂರೈಕೆ ಮಾಡಿದ ರೈತರಿಗೆ ನೀಡಬೇಕಾಗಿದ್ದ ಬಾಕಿ ಹಣ 4.86 ಕೋಟಿ ರೂಪಾಯಿಗಳನ್ನು ಗುರುವಾರ ಪಟ್ಟಣದಲ್ಲಿ ವಿತರಿಸ ಲಾಯಿತು. ಜಿಲ್ಲಾಧಿಕಾರಿ ಡಾ.ಎನ್.ಮಂಜುಳಾ ಬೆಳೆಗಾರರಿಗೆ ಚೆಕ್ ವಿತರಿಸಿದರು. <br /> <br /> ಕಬ್ಬು ಸರಬರಾಜು ಮಾಡಿದ ಬಾಕಿ ಹಣ ನೀಡುವಂತೆ ಆಗ್ರಹಿಸಿ ರೈತರು ಸಾಕಷ್ಟು ಹೋರಾಟ ನಡೆಸಿದ್ದರು.<br /> ರಾಜ್ಯ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಎನ್.ಜ್ಯೋತಿರೆಡ್ಡಿ ಮಾತ ನಾಡಿ, ಕಬ್ಬು ಬೆಳೆಗಾರರ ನಿರಂತರ ಹೋರಾಟದ ಫಲದಿಂದ ಈ ಹಣ ದೊರೆತಿದೆ. ಕಬ್ಬು ಪೂರೈಸುವ ರೈತರಿಗೆ ಹಿಂದೆ ಹಣ ನೀಡಿರುವ ದಾಖಲೆಗಳ ಆಧಾರದ ಮೇಲೆ ಚೆಕ್ ವಿತರಿಸುವಂತೆ ಸಲಹೆ ಮಾಡಿದರು.<br /> <br /> `ಈಗಾಗಲೇ ಸಕ್ಕರೆ ಕಾರ್ಖಾನೆ ನಿಂತಿದೆ. ಇದನ್ನು ಮತ್ತೆ ಆರಂಭಿಸುವುದರಿಂದ ಹೆಚ್ಚಿನ ರೈತರಿಗೆ ಅನುಕೂಲವಾಗುತ್ತದೆ. <br /> <br /> ತಾಲ್ಲೂಕಿನ ಇನ್ನೂ ಕೆಲವು ಭಾಗಗಳಲ್ಲಿ ರೈತರಿಗೆ ಕಬ್ಬು ಬೆಳೆಯಲು ಉತ್ಸಾಹವಿದೆ. ಅದರತ್ತ ತಾಲ್ಲೂಕು ಆಡಳಿತ ಎಂದು ಜ್ಯೋತಿರೆಡ್ಡಿ ಅವರು ಅಭಿಪ್ರಾಯ ಪಟ್ಟರು.<br /> <br /> ಇದೇ ವೇಳೆ ಸಿರುಗುಪ್ಪ ಸಕ್ಕರೆ ಕಾರ್ಖಾನೆ ರೈತ ಸಂಘದ ಅಧ್ಯಕ್ಷ ಸಿ.ಎಸ್.ಮೋಹನ್ ಮಾತನಾಡಿದರು. <br /> ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಉಪ ವಿಭಾಗಾಧಿಕಾರಿ ಸತೀಶ್ಕುಮಾರ್, ತಹ ಶೀಲ್ದಾರ್ ಡಾ.ಸುಧಾ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾ ಯಣ, ಕಾರ್ಯದರ್ಶಿ ಲೋಕೇಶ್ಗೌಡ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>