<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಿಲ್ಲ. ಸಕ್ಕರೆ ಕಾರ್ಖಾನೆಗಳ ಪರವಾಗಿ ನಡೆದುಕೊಳ್ಳು ತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇ ಗೌಡ ಟೀಕಿಸಿದರು.<br /> <br /> ತೆಂಗು, ಅಡಿಕೆ ಬೆಳೆ ನಾಶವಾಗಿದೆ. ಭತ್ತ, ಜೋಳಕ್ಕೆ ಸೂಕ್ತ ಬೆಲೆ ಸಿಗದ ಕಾರಣ ರೈತರು ಕಂಗಾಲಾಗಿದ್ದಾರೆ. <br /> <br /> ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಗಮನಹರಿಸಿಲ್ಲ ಎಂದು ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> ತಾವು ಅವಸರದಲ್ಲಿ ಇರುವುದಾಗಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಹೌದು. ನಾನು ಅವಸರದಲ್ಲಿ ಇರುವುದು ನಿಜ. ಆದರೆ, ಪ್ರಧಾನಿ ಆಗುವುದಕ್ಕೆ ಅಲ್ಲ. ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಕಾರಣಕ್ಕೆ’ ಎಂದು ತಿರುಗೇಟು ನೀಡಿದರು.<br /> <br /> ‘ಮುಖ್ಯಮಂತ್ರಿಗಳ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸು ತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಪಣ ತೊಟ್ಟಿದ್ದೇನೆ’ ಎಂದು ಘೋಷಿಸಿದರು.<br /> <br /> ಹಕ್ಕುಚ್ಯುತಿ ಸಮಿತಿ: ‘ನೈಸ್ ಸಂಸ್ಥೆ ಮುಖ್ಯಸ್ಥರೂ ಆಗಿರುವ ಶಾಸಕ ಅಶೋಕ್ ಖೇಣಿ ಅವರು ನನ್ನ ವಿರುದ್ಧ ಈಗಾಗಲೇ ರೂ 10 ಕೋಟಿ ಮಾನನಷ್ಟ ಮೊಕ ದ್ದಮೆ ಹೂಡಿದ್ದಾರೆ. ಈಗ ಅವರು ಶಾಸಕರಾಗಿದ್ದು, ನನ್ನ ವಿರುದ್ಧ ಹಕ್ಕುಚ್ಯುತಿ ಸಮಿತಿಗೆ ದೂರು ನೀಡಲಿ’ ಎಂದು ಸವಾಲು ಹಾಕಿದರು.<br /> <br /> ‘ನೈಸ್ ಸಂಸ್ಥೆ ರಸ್ತೆ ಹೆಸರಿನಲ್ಲಿ ಮಾಡಿರುವ ಅವ್ಯವಹಾರಗಳ ಬಗ್ಗೆ ಮಾತನಾಡಿದ್ದೇನೆ. ಇದರಿಂದ ಅವರಿಗೆ ಮಾನನಷ್ಟ ಆಗಿದೆ ಅನಿಸಿದರೆ ಹಕ್ಕುಚ್ಯುತಿ ಸಮಿತಿ ಮುಂದೆ ಹೋಗಬಹುದು. ಸಮಿತಿ ಮುಂದೆ ಹಾಜರಾಗಲು ನಾನು ಸಿದ್ಧನಾಗಿದ್ದೇನೆ’ ಎಂದರು.<br /> <br /> <strong><span style="font-size: 26px;">ಗೌಡರು ಹೇಳಿದ ಯೋಜನೆ </span><span style="font-size: 26px;">ಜಾರಿಗೆ: ಸಿದ್ದರಾಮಯ್ಯ</span></strong><br /> <span style="font-size: 26px;"><strong>ಬೆಂಗಳೂರು:</strong> ‘ದೇವೇಗೌಡರು ಹೇಳಿದ ಯೋಜನಗಳನ್ನೇ ಅನುಷ್ಠಾನಕ್ಕೆ ತಂದರಾಯಿತು ಬಿಡಿ’ </span><span style="font-size: 26px;">–ರಾಜ್ಯ ಸರ್ಕಾರ ಬರಿ ನಿರರ್ಥಕ ಯೋಜನೆಗಳನ್ನೇ ಜಾರಿ ಮಾಡುತ್ತಿದೆ ಎನ್ನುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಚುಟುಕಾಗಿ ಪ್ರತಿಕ್ರಿಯಿಸಿದ ರೀತಿ ಇದು.</span></p>.<p>ನಗರದಲ್ಲಿ ಗುರುವಾರ ನಡೆದ ಜೆ.ಎಚ್. ಪಟೇಲರ ಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡಿಲ್ಲ. ಸಕ್ಕರೆ ಕಾರ್ಖಾನೆಗಳ ಪರವಾಗಿ ನಡೆದುಕೊಳ್ಳು ತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇ ಗೌಡ ಟೀಕಿಸಿದರು.<br /> <br /> ತೆಂಗು, ಅಡಿಕೆ ಬೆಳೆ ನಾಶವಾಗಿದೆ. ಭತ್ತ, ಜೋಳಕ್ಕೆ ಸೂಕ್ತ ಬೆಲೆ ಸಿಗದ ಕಾರಣ ರೈತರು ಕಂಗಾಲಾಗಿದ್ದಾರೆ. <br /> <br /> ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಈ ಬಗ್ಗೆ ಗಮನಹರಿಸಿಲ್ಲ ಎಂದು ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.<br /> ತಾವು ಅವಸರದಲ್ಲಿ ಇರುವುದಾಗಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಹೌದು. ನಾನು ಅವಸರದಲ್ಲಿ ಇರುವುದು ನಿಜ. ಆದರೆ, ಪ್ರಧಾನಿ ಆಗುವುದಕ್ಕೆ ಅಲ್ಲ. ರಾಜ್ಯದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಕಾರಣಕ್ಕೆ’ ಎಂದು ತಿರುಗೇಟು ನೀಡಿದರು.<br /> <br /> ‘ಮುಖ್ಯಮಂತ್ರಿಗಳ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸು ತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಪಣ ತೊಟ್ಟಿದ್ದೇನೆ’ ಎಂದು ಘೋಷಿಸಿದರು.<br /> <br /> ಹಕ್ಕುಚ್ಯುತಿ ಸಮಿತಿ: ‘ನೈಸ್ ಸಂಸ್ಥೆ ಮುಖ್ಯಸ್ಥರೂ ಆಗಿರುವ ಶಾಸಕ ಅಶೋಕ್ ಖೇಣಿ ಅವರು ನನ್ನ ವಿರುದ್ಧ ಈಗಾಗಲೇ ರೂ 10 ಕೋಟಿ ಮಾನನಷ್ಟ ಮೊಕ ದ್ದಮೆ ಹೂಡಿದ್ದಾರೆ. ಈಗ ಅವರು ಶಾಸಕರಾಗಿದ್ದು, ನನ್ನ ವಿರುದ್ಧ ಹಕ್ಕುಚ್ಯುತಿ ಸಮಿತಿಗೆ ದೂರು ನೀಡಲಿ’ ಎಂದು ಸವಾಲು ಹಾಕಿದರು.<br /> <br /> ‘ನೈಸ್ ಸಂಸ್ಥೆ ರಸ್ತೆ ಹೆಸರಿನಲ್ಲಿ ಮಾಡಿರುವ ಅವ್ಯವಹಾರಗಳ ಬಗ್ಗೆ ಮಾತನಾಡಿದ್ದೇನೆ. ಇದರಿಂದ ಅವರಿಗೆ ಮಾನನಷ್ಟ ಆಗಿದೆ ಅನಿಸಿದರೆ ಹಕ್ಕುಚ್ಯುತಿ ಸಮಿತಿ ಮುಂದೆ ಹೋಗಬಹುದು. ಸಮಿತಿ ಮುಂದೆ ಹಾಜರಾಗಲು ನಾನು ಸಿದ್ಧನಾಗಿದ್ದೇನೆ’ ಎಂದರು.<br /> <br /> <strong><span style="font-size: 26px;">ಗೌಡರು ಹೇಳಿದ ಯೋಜನೆ </span><span style="font-size: 26px;">ಜಾರಿಗೆ: ಸಿದ್ದರಾಮಯ್ಯ</span></strong><br /> <span style="font-size: 26px;"><strong>ಬೆಂಗಳೂರು:</strong> ‘ದೇವೇಗೌಡರು ಹೇಳಿದ ಯೋಜನಗಳನ್ನೇ ಅನುಷ್ಠಾನಕ್ಕೆ ತಂದರಾಯಿತು ಬಿಡಿ’ </span><span style="font-size: 26px;">–ರಾಜ್ಯ ಸರ್ಕಾರ ಬರಿ ನಿರರ್ಥಕ ಯೋಜನೆಗಳನ್ನೇ ಜಾರಿ ಮಾಡುತ್ತಿದೆ ಎನ್ನುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಚುಟುಕಾಗಿ ಪ್ರತಿಕ್ರಿಯಿಸಿದ ರೀತಿ ಇದು.</span></p>.<p>ನಗರದಲ್ಲಿ ಗುರುವಾರ ನಡೆದ ಜೆ.ಎಚ್. ಪಟೇಲರ ಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>