<p>ಬೆಂಗಳೂರು: `ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರಗ ಭವನ ನಿರ್ಮಾಣಕ್ಕೆ ಬಿಬಿಎಂಪಿ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು~ ಎಂದು ಸಚಿವ ಆರ್.ಅಶೋಕ ಭರವಸೆ ನೀಡಿದರು.<br /> <br /> ಕರ್ನಾಟಕ ರಾಜ್ಯ ತಿಗಳ ಸರ್ಕಾರಿ ನೌಕರರ ಸಂಘವು ನಗರದ ಪುರಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> `ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಸಾಧಿಸುವುದರ ಜೊತೆಗೆ ತಿಗಳ ಜನಾಂಗವು ಶೈಕ್ಷಣಿಕವಾಗಿಯೂ ಮುಂದುವರಿಯಬೇಕಿದೆ. ಉನ್ನತ ಶಿಕ್ಷಣ ಗಳಿಸುವುದರಿಂದ ಮಾತ್ರ ಜನಾಂಗ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಶ್ರಮಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ಈ ರೀತಿಯ ಜಾತಿ ಸಮಾವೇಶಗಳು ಜಾಗೃತಿ ಸಮಾವೇಶವಾಗಿ ಮಾರ್ಪಾಡಾಗಬೇಕು. ಅಲ್ಲದೆ, ಜನಾಂಗವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಇಂತಹ ಸಮಾವೇಶಗಳು ಸೂಕ್ತ ವೇದಿಕೆಯಾಗಬೇಕು~ ಎಂದು ಹೇಳಿದರು. <br /> <br /> `ನಾಡಪ್ರಭು ಕೆಂಪೇಗೌಡರ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯದ ಸಾಕ್ಷಿಯಾಗಿ ನಿರ್ಮಾಣಗೊಂಡ ತಿಗಳರ ಪೇಟೆ ಇಂದಿಗೂ ಅಸ್ತಿತ್ವದಲ್ಲಿದೆ. ಉನ್ನತ ಇತಿಹಾಸ ಮತ್ತು ಪರಂಪರೆ ಪಡೆದಿರುವ ಜನಾಂಗದ ಸಂಸ್ಕೃತಿಯನ್ನು ಉಳಿಸಲು ಎಲ್ಲರೂ ಮುಂದಾಗಬೇಕು~ ಎಂದು ಕರೆ ನೀಡಿದರು. <br /> <br /> ಸಚಿವ ಬಿ.ಎನ್.ಬಚ್ಚೇಗೌಡ, `ಬೆಂಗಳೂರು ಮತ್ತು ಹೊಸಕೋಟೆಯಲ್ಲಿ ಹೆಚ್ಚಾಗಿ ನೆಲೆಸಿರುವ ತಿಗಳ ಜನಾಂಗವು ರಾಜ್ಯದಾದ್ಯಂತ ವಿವಿಧ ಹೆಸರಿನಲ್ಲಿ ಹಂಚಿಹೋಗಿದೆ. ಕ್ಷತ್ರಿಯ ಮೂಲದವರಾದ ತಿಗಳರು ಶ್ರಮಜೀವಿಗಳು~ ಎಂದು ಹೇಳಿದರು. <br /> <br /> ಇದೇ ವೇಳೆ ಐಎಎಸ್ ಅಧಿಕಾರಿ ವಿ.ಪಿ.ಇಕ್ಕೇರಿ ಅವರಿಗೆ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. <br /> <br /> ಸಂಸದ ಪಿ.ಸಿ. ಮೋಹನ, ಶಾಸಕ ನೆ.ಲ.ನರೇಂದ್ರಬಾಬು, ಮಾಜಿ ಮೇಯರ್ ಪಿ.ಆರ್.ರಮೇಶ್, ಪಾಲಿಕೆ ಸದಸ್ಯ ಎಚ್.ಬಸವರಾಜು ಇತರರು ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರಗ ಭವನ ನಿರ್ಮಾಣಕ್ಕೆ ಬಿಬಿಎಂಪಿ ವತಿಯಿಂದ 50 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು~ ಎಂದು ಸಚಿವ ಆರ್.ಅಶೋಕ ಭರವಸೆ ನೀಡಿದರು.<br /> <br /> ಕರ್ನಾಟಕ ರಾಜ್ಯ ತಿಗಳ ಸರ್ಕಾರಿ ನೌಕರರ ಸಂಘವು ನಗರದ ಪುರಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> `ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಸಾಧಿಸುವುದರ ಜೊತೆಗೆ ತಿಗಳ ಜನಾಂಗವು ಶೈಕ್ಷಣಿಕವಾಗಿಯೂ ಮುಂದುವರಿಯಬೇಕಿದೆ. ಉನ್ನತ ಶಿಕ್ಷಣ ಗಳಿಸುವುದರಿಂದ ಮಾತ್ರ ಜನಾಂಗ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಶ್ರಮಿಸಬೇಕು~ ಎಂದು ಸಲಹೆ ನೀಡಿದರು. <br /> <br /> `ಈ ರೀತಿಯ ಜಾತಿ ಸಮಾವೇಶಗಳು ಜಾಗೃತಿ ಸಮಾವೇಶವಾಗಿ ಮಾರ್ಪಾಡಾಗಬೇಕು. ಅಲ್ಲದೆ, ಜನಾಂಗವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಇಂತಹ ಸಮಾವೇಶಗಳು ಸೂಕ್ತ ವೇದಿಕೆಯಾಗಬೇಕು~ ಎಂದು ಹೇಳಿದರು. <br /> <br /> `ನಾಡಪ್ರಭು ಕೆಂಪೇಗೌಡರ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯದ ಸಾಕ್ಷಿಯಾಗಿ ನಿರ್ಮಾಣಗೊಂಡ ತಿಗಳರ ಪೇಟೆ ಇಂದಿಗೂ ಅಸ್ತಿತ್ವದಲ್ಲಿದೆ. ಉನ್ನತ ಇತಿಹಾಸ ಮತ್ತು ಪರಂಪರೆ ಪಡೆದಿರುವ ಜನಾಂಗದ ಸಂಸ್ಕೃತಿಯನ್ನು ಉಳಿಸಲು ಎಲ್ಲರೂ ಮುಂದಾಗಬೇಕು~ ಎಂದು ಕರೆ ನೀಡಿದರು. <br /> <br /> ಸಚಿವ ಬಿ.ಎನ್.ಬಚ್ಚೇಗೌಡ, `ಬೆಂಗಳೂರು ಮತ್ತು ಹೊಸಕೋಟೆಯಲ್ಲಿ ಹೆಚ್ಚಾಗಿ ನೆಲೆಸಿರುವ ತಿಗಳ ಜನಾಂಗವು ರಾಜ್ಯದಾದ್ಯಂತ ವಿವಿಧ ಹೆಸರಿನಲ್ಲಿ ಹಂಚಿಹೋಗಿದೆ. ಕ್ಷತ್ರಿಯ ಮೂಲದವರಾದ ತಿಗಳರು ಶ್ರಮಜೀವಿಗಳು~ ಎಂದು ಹೇಳಿದರು. <br /> <br /> ಇದೇ ವೇಳೆ ಐಎಎಸ್ ಅಧಿಕಾರಿ ವಿ.ಪಿ.ಇಕ್ಕೇರಿ ಅವರಿಗೆ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. <br /> <br /> ಸಂಸದ ಪಿ.ಸಿ. ಮೋಹನ, ಶಾಸಕ ನೆ.ಲ.ನರೇಂದ್ರಬಾಬು, ಮಾಜಿ ಮೇಯರ್ ಪಿ.ಆರ್.ರಮೇಶ್, ಪಾಲಿಕೆ ಸದಸ್ಯ ಎಚ್.ಬಸವರಾಜು ಇತರರು ಉಪಸ್ಥಿತರಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>