<p>ನವದೆಹಲಿ (ಐಎಎನ್ಎಸ್): `ರಾಷ್ಟ್ರೀಯ ಸಲಹಾ ಮಂಡಳಿ (ನ್ಯಾಕ್) ಸಿದ್ಧಪಡಿಸಿರುವ ಉದ್ದೇಶಿತ ಕೋಮು ಹಿಂಸೆ ತಡೆ ಮಸೂದೆಯನ್ನು ಸರ್ಕಾರ ಕಡೆಗಣಿಸಿದೆ~ ಎಂದು ಸೋನಿಯಾ ಗಾಂಧಿ ನೇತೃತ್ವದ ಸಲಹಾ ಮಂಡಳಿ ಸದಸ್ಯ ಹರ್ಷ ಮಂಡರ್ ಹೇಳಿದ್ದಾರೆ.<br /> <br /> `ಭಾರತದಲ್ಲಿ ಕೋಮು ಹಿಂಸೆ: ನಿರ್ಭೀತಿಯ ಅಂತ್ಯ~ ಎಂಬ ವಿಷಯ ಕುರಿತು ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರದಲ್ಲಿ ಗುರುವಾರ ಸಂಜೆ ನಡೆದ ಇಕ್ಬಾಲ್ ಅನ್ಸಾರಿ ಸ್ಮಾರಕ ಪ್ರಥಮ ಉಪನ್ಯಾಸದಲ್ಲಿ ಮಾತನಾಡಿದ ಅವರು, ಕಳೆದ ತಿಂಗಳ 11ರಂದು ರಾಷ್ಟ್ರೀಯ ಭಾವೈಕ್ಯ ಮಂಡಳಿ ಸಭೆಯಲ್ಲಿ ವಿರೋಧ ಪಕ್ಷ ಬಿಜೆಪಿ ಈ ಕರಡು ಮಸೂದೆಗೆ ಸಂಬಂಧಿಸಿದಂತೆ ತೀವ್ರ ವಾಗ್ದಾಳಿ ನಡೆಸಿತ್ತು. ಆದರೆ ಸರ್ಕಾರ ಇದನ್ನು ಸಮರ್ಥಿಸಿಕೊಂಡಿಲ್ಲ. <br /> <br /> ಇದುವರೆಗೂ ಮಸೂದೆ ಬಗ್ಗೆ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದರು. ಸರ್ಕಾರ ಸಿದ್ಧಪಡಿಸಿದ ಕರಡು ಮಸೂದೆಯನ್ನು ಕೈಬಿಟ್ಟು, ನ್ಯಾಕ್ ಕಳೆದ ವರ್ಷ ಹೊಸದಾಗಿ ಕರಡು ತಯಾರಿಸಿದೆ. <br /> 2011ರ ಕೋಮು ಹಿಂಸೆ ಹಾಗೂ ಉದ್ದೇಶಿತ ಹಿಂಸೆ ತಡೆ ಮಸೂದೆಗೆ (ನ್ಯಾಯದಾನ ಹಾಗೂ ಪರಿಹಾರ) ಸಂಬಂಧಿಸಿದಂತೆ ಜುಲೈ ತಿಂಗಳಿನಲ್ಲಿ ನ್ಯಾಕ್ ಸರ್ಕಾರಕ್ಕೆ ತನ್ನ ಶಿಫಾರಸು ಕಳುಹಿಸಿತ್ತು.<br /> <br /> ಕೋಮು ಹಿಂಸೆಗೆ ರಾಜ್ಯದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಉದ್ದೇಶಿತ ಮಸೂದೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಯಾವುದೇ ಘಟನೆಯಲ್ಲಿ ಬಹುಸಂಖ್ಯಾತರು ಬಲಿಪಶುಗಳಾಗುವ ಬಗ್ಗೆ ಈ ಮಸೂದೆಯಲ್ಲಿ ಪ್ರಸ್ತಾಪ ಇಲ್ಲ ಎಂದೂ ಟೀಕಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಐಎಎನ್ಎಸ್): `ರಾಷ್ಟ್ರೀಯ ಸಲಹಾ ಮಂಡಳಿ (ನ್ಯಾಕ್) ಸಿದ್ಧಪಡಿಸಿರುವ ಉದ್ದೇಶಿತ ಕೋಮು ಹಿಂಸೆ ತಡೆ ಮಸೂದೆಯನ್ನು ಸರ್ಕಾರ ಕಡೆಗಣಿಸಿದೆ~ ಎಂದು ಸೋನಿಯಾ ಗಾಂಧಿ ನೇತೃತ್ವದ ಸಲಹಾ ಮಂಡಳಿ ಸದಸ್ಯ ಹರ್ಷ ಮಂಡರ್ ಹೇಳಿದ್ದಾರೆ.<br /> <br /> `ಭಾರತದಲ್ಲಿ ಕೋಮು ಹಿಂಸೆ: ನಿರ್ಭೀತಿಯ ಅಂತ್ಯ~ ಎಂಬ ವಿಷಯ ಕುರಿತು ಇಸ್ಲಾಮಿಕ್ ಸಾಂಸ್ಕೃತಿಕ ಕೇಂದ್ರದಲ್ಲಿ ಗುರುವಾರ ಸಂಜೆ ನಡೆದ ಇಕ್ಬಾಲ್ ಅನ್ಸಾರಿ ಸ್ಮಾರಕ ಪ್ರಥಮ ಉಪನ್ಯಾಸದಲ್ಲಿ ಮಾತನಾಡಿದ ಅವರು, ಕಳೆದ ತಿಂಗಳ 11ರಂದು ರಾಷ್ಟ್ರೀಯ ಭಾವೈಕ್ಯ ಮಂಡಳಿ ಸಭೆಯಲ್ಲಿ ವಿರೋಧ ಪಕ್ಷ ಬಿಜೆಪಿ ಈ ಕರಡು ಮಸೂದೆಗೆ ಸಂಬಂಧಿಸಿದಂತೆ ತೀವ್ರ ವಾಗ್ದಾಳಿ ನಡೆಸಿತ್ತು. ಆದರೆ ಸರ್ಕಾರ ಇದನ್ನು ಸಮರ್ಥಿಸಿಕೊಂಡಿಲ್ಲ. <br /> <br /> ಇದುವರೆಗೂ ಮಸೂದೆ ಬಗ್ಗೆ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದರು. ಸರ್ಕಾರ ಸಿದ್ಧಪಡಿಸಿದ ಕರಡು ಮಸೂದೆಯನ್ನು ಕೈಬಿಟ್ಟು, ನ್ಯಾಕ್ ಕಳೆದ ವರ್ಷ ಹೊಸದಾಗಿ ಕರಡು ತಯಾರಿಸಿದೆ. <br /> 2011ರ ಕೋಮು ಹಿಂಸೆ ಹಾಗೂ ಉದ್ದೇಶಿತ ಹಿಂಸೆ ತಡೆ ಮಸೂದೆಗೆ (ನ್ಯಾಯದಾನ ಹಾಗೂ ಪರಿಹಾರ) ಸಂಬಂಧಿಸಿದಂತೆ ಜುಲೈ ತಿಂಗಳಿನಲ್ಲಿ ನ್ಯಾಕ್ ಸರ್ಕಾರಕ್ಕೆ ತನ್ನ ಶಿಫಾರಸು ಕಳುಹಿಸಿತ್ತು.<br /> <br /> ಕೋಮು ಹಿಂಸೆಗೆ ರಾಜ್ಯದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವ ಉದ್ದೇಶಿತ ಮಸೂದೆಯು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಯಾವುದೇ ಘಟನೆಯಲ್ಲಿ ಬಹುಸಂಖ್ಯಾತರು ಬಲಿಪಶುಗಳಾಗುವ ಬಗ್ಗೆ ಈ ಮಸೂದೆಯಲ್ಲಿ ಪ್ರಸ್ತಾಪ ಇಲ್ಲ ಎಂದೂ ಟೀಕಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>