<p><strong>ಕಾರವಾರ:</strong> ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ ಗಾಳಿ-ಮಳೆ ಸೋಮವಾರ ಸಂಜೆ ಮತ್ತೆ ಸುರಿದು ತಂಪೆರೆಯಿತು.</p>.<p>ಕರಾವಳಿ ತಾಲ್ಲೂಕುಗಳಲ್ಲಿ ಮಾತ್ರ ಕೆಲವೆಡೆ ಸಂಜೆಯ ಹೊತ್ತಿಗೆ ಮಳೆ ಸುರಿದರೆ ಘಟ್ಟ ಪ್ರದೇಶ ಮತ್ತು ಅರೆಬಯಲುಸೀಮೆ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿತ್ತು.</p>.<p>ಸಂಜೆ ಸುಮಾರು ಒಂದು ತಾಸು ಸುರಿದ ಮಳೆಯಿಂದಾಗಿ ಜನರು ತೊಂದರೆ ಅನುಭವಿಸಿದರು. ಮಳೆಯೊಂದಿಗೆ ಪ್ರತಿಗಂಟೆ 45-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿತ್ತು.ಶಾಲೆ ಬಿಡುವ ಸಮಯಕ್ಕೆ ಸರಿಯಾಗಿ ಮಳೆ ಸುರಿದಿದ್ದರಿಂದ ರೈನ್ಕೋಟ್, ಕೊಡೆ ಬಿಟ್ಟುಬಂದ ಮಕ್ಕಳು ನೆನೆಯುತ್ತಲೇ ಮನೆಯತ್ತ ಹೆಜ್ಜೆ ಹಾಕಿದರು.</p>.<p>ಘಟ್ಟ ಮತ್ತು ಅರೆಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಮಾಯವಾಗಿದ್ದು ಬೇಸಿಗೆ ವಾತಾವರಣ ಕಂಡುಬಂದಿದೆ. ಮಳೆ ಕೈಕೊಟ್ಟಿದ್ದರಿಂದ ಕೃಷಿ ಕಾರ್ಯಕ್ಕೂ ಹಿನ್ನಡೆ ಉಂಟಾಗಿದ್ದು ರೈತರು ಚಿಂತಿತರಾಗಿದ್ದಾರೆ.</p>.<p>`ಜೂನ್ 13ರ ಸುಮಾರಿಗೆ ಮುಂಗಾರು ಜಿಲ್ಲೆಯ ಕರಾವಳಿ ಪ್ರವೇಶ ಮಾಡುವ ಸಾಧ್ಯತೆ ಇದೆ~ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ ಗಾಳಿ-ಮಳೆ ಸೋಮವಾರ ಸಂಜೆ ಮತ್ತೆ ಸುರಿದು ತಂಪೆರೆಯಿತು.</p>.<p>ಕರಾವಳಿ ತಾಲ್ಲೂಕುಗಳಲ್ಲಿ ಮಾತ್ರ ಕೆಲವೆಡೆ ಸಂಜೆಯ ಹೊತ್ತಿಗೆ ಮಳೆ ಸುರಿದರೆ ಘಟ್ಟ ಪ್ರದೇಶ ಮತ್ತು ಅರೆಬಯಲುಸೀಮೆ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿತ್ತು.</p>.<p>ಸಂಜೆ ಸುಮಾರು ಒಂದು ತಾಸು ಸುರಿದ ಮಳೆಯಿಂದಾಗಿ ಜನರು ತೊಂದರೆ ಅನುಭವಿಸಿದರು. ಮಳೆಯೊಂದಿಗೆ ಪ್ರತಿಗಂಟೆ 45-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿತ್ತು.ಶಾಲೆ ಬಿಡುವ ಸಮಯಕ್ಕೆ ಸರಿಯಾಗಿ ಮಳೆ ಸುರಿದಿದ್ದರಿಂದ ರೈನ್ಕೋಟ್, ಕೊಡೆ ಬಿಟ್ಟುಬಂದ ಮಕ್ಕಳು ನೆನೆಯುತ್ತಲೇ ಮನೆಯತ್ತ ಹೆಜ್ಜೆ ಹಾಕಿದರು.</p>.<p>ಘಟ್ಟ ಮತ್ತು ಅರೆಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಮಾಯವಾಗಿದ್ದು ಬೇಸಿಗೆ ವಾತಾವರಣ ಕಂಡುಬಂದಿದೆ. ಮಳೆ ಕೈಕೊಟ್ಟಿದ್ದರಿಂದ ಕೃಷಿ ಕಾರ್ಯಕ್ಕೂ ಹಿನ್ನಡೆ ಉಂಟಾಗಿದ್ದು ರೈತರು ಚಿಂತಿತರಾಗಿದ್ದಾರೆ.</p>.<p>`ಜೂನ್ 13ರ ಸುಮಾರಿಗೆ ಮುಂಗಾರು ಜಿಲ್ಲೆಯ ಕರಾವಳಿ ಪ್ರವೇಶ ಮಾಡುವ ಸಾಧ್ಯತೆ ಇದೆ~ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>