<p>ಮಂಗಳೂರು: ಕರಾವಳಿಯಲ್ಲಿ ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಸಂಘ ಪರಿವಾರದ ಗುಂಪುಗಳು ಕಾನೂನು ಕೈಗೆತ್ತಿಕೊಳ್ಳುವುದನ್ನು, ಕೋಮುದ್ವೇಷ ಹರಡುವುದನ್ನು ತಡೆಯುವ ಉದ್ದೇಶದಿಂದ `ಸೌಹಾರ್ದಕ್ಕಾಗಿ ಸಂಘರ್ಷ~ ಎಂಬ ಧ್ಯೇಯದೊಂದಿಗೆ `ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ~ ಅಸ್ತಿತ್ವಕ್ಕೆ ಬಂದಿದೆ. <br /> <br /> ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಮಿತಿಯ ಅಧ್ಯಕ್ಷ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, `ಹೋಂ ಸ್ಟೇ ಮೇಲಿನ ದಾಳಿ ವಿರೋಧಿಸಿ ಸಮಿತಿ ನೇತೃತ್ವದಲ್ಲಿ ಸೆ.4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಂಘಟನೆ ಕೇವಲ ಹೋಂ ಸ್ಟೇ ಮೇಲಿನ ದಾಳಿಯನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿದ್ದಲ್ಲ. ಇಂತಹ ದಾಳಿ ಮರುಕಳಿಸುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ. ಎಂದರು. <br /> <br /> ಸಿಪಿಎಂ ಮುಖಂಡ ಬಿ.ಮಾಧವ ಮಾತನಾಡಿ, `ಸರ್ಕಾರದ ಬೆಂಬಲದಿಂದಲೇ ಸಂಘ ಪರಿವಾರ ಇಂತಹ ಪುಂಡಾಟಿಕೆ ನಡೆಸುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ರಾಜಕೀಯೇತರವಾಗಿ ಜನಜಾಗೃತಿ ಮೂಡಿಸುತ್ತೇವೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಕರಾವಳಿಯಲ್ಲಿ ಸಂಸ್ಕೃತಿ ರಕ್ಷಣೆ ಹೆಸರಿನಲ್ಲಿ ಸಂಘ ಪರಿವಾರದ ಗುಂಪುಗಳು ಕಾನೂನು ಕೈಗೆತ್ತಿಕೊಳ್ಳುವುದನ್ನು, ಕೋಮುದ್ವೇಷ ಹರಡುವುದನ್ನು ತಡೆಯುವ ಉದ್ದೇಶದಿಂದ `ಸೌಹಾರ್ದಕ್ಕಾಗಿ ಸಂಘರ್ಷ~ ಎಂಬ ಧ್ಯೇಯದೊಂದಿಗೆ `ಕರಾವಳಿ ಸೌಹಾರ್ದ ಸಂಘರ್ಷ ಸಮಿತಿ~ ಅಸ್ತಿತ್ವಕ್ಕೆ ಬಂದಿದೆ. <br /> <br /> ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಸಮಿತಿಯ ಅಧ್ಯಕ್ಷ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ, `ಹೋಂ ಸ್ಟೇ ಮೇಲಿನ ದಾಳಿ ವಿರೋಧಿಸಿ ಸಮಿತಿ ನೇತೃತ್ವದಲ್ಲಿ ಸೆ.4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಂಘಟನೆ ಕೇವಲ ಹೋಂ ಸ್ಟೇ ಮೇಲಿನ ದಾಳಿಯನ್ನು ವಿರೋಧಿಸುವ ಸಲುವಾಗಿ ಹುಟ್ಟಿಕೊಂಡಿದ್ದಲ್ಲ. ಇಂತಹ ದಾಳಿ ಮರುಕಳಿಸುವುದನ್ನು ತಡೆಯುವುದು ನಮ್ಮ ಮುಖ್ಯ ಉದ್ದೇಶ. ಎಂದರು. <br /> <br /> ಸಿಪಿಎಂ ಮುಖಂಡ ಬಿ.ಮಾಧವ ಮಾತನಾಡಿ, `ಸರ್ಕಾರದ ಬೆಂಬಲದಿಂದಲೇ ಸಂಘ ಪರಿವಾರ ಇಂತಹ ಪುಂಡಾಟಿಕೆ ನಡೆಸುತ್ತಿದೆ. ಇಂತಹ ಕೃತ್ಯಗಳ ವಿರುದ್ಧ ರಾಜಕೀಯೇತರವಾಗಿ ಜನಜಾಗೃತಿ ಮೂಡಿಸುತ್ತೇವೆ~ ಎಂದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>