<p><strong>ಮಧುರೈ (ಪಿಟಿಐ): </strong>ಡಿಎಂಕೆ ಪಕ್ಷದೊಳಗಿನ `ಕೆಲ ಶಕ್ತಿಗಳು' ಪಕ್ಷದ ಮುಖಸ್ಥರಾಗಿರುವ ತಮ್ಮ ತಂದೆ ಕರುಣಾನಿಧಿ ಅವರಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಪಕ್ಷದಿಂದ ಅಮಾನತುಗೊಂಡಿರುವ ಡಿಎಂಕೆ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ.ಕೆ.ಅಳಗಿರಿ ಅವರು ಸೋಮವಾರ ಆರೋಪಿಸಿದರು.</p>.<p>ಭಾರಿ ಪ್ರಮಾಣದಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ಡಿಎಂಕೆ ಖಚಾಂಚಿಯಾಗಿರುವ ಕಿರಿಯ ಸಹೋದರ ಎಂ.ಕೆ.ಸ್ಟಾಲಿನ್ ಅವರ ವಿರುದ್ಧ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.<br /> <br /> `ಪಕ್ಷದೊಳಗಿನ ಕೆಲ ಶಕ್ತಿಗಳು ತಂದೆ (ಕರುಣಾನಿಧಿ) ಅವರಿಗೆ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ. ಪಕ್ಷದ ಅಧ್ಯಕ್ಷರಿಗೆ ಅವರು ಕಿರುಕುಳ ನೀಡುತ್ತಿದ್ದಾರೆ' ಎಂದು ಅಳಗಿರಿ ಹೇಳಿದರು.<br /> <br /> ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಭವಿಷ್ಯದ ಕಾರ್ಯಯೋಜನೆಗಳನ್ನು ನಿರ್ಧರಿಸುವ ನಿಟ್ಟಿನಲ್ಲಿ ತಮ್ಮ ಬೆಂಬಲಿಗರ ಅಭಿಪ್ರಾಯ ಪಡೆಯಲು ಡಿಎಂಕೆಯ ದಕ್ಷಿಣ ವಲಯದ ಸಂಘಟನಾ ಕಾರ್ಯದರ್ಶಿಯಾಗಿರುವ ಅಳಗಿರಿ ಅವರು ಈ ಸಭೆ ಕರೆದಿದ್ದರು.<br /> <br /> ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಪ್ರಭಾವಿ ನಾಯಕರೆಂದೇ ಗುರುತಿಸಿಕೊಂಡಿರುವ ಅಳಗಿರಿಯವರು ಪಕ್ಷದ ಚುನಾವಣೆಗಳಲ್ಲಿ ನಡೆದ `ಅಕ್ರಮ ಮತ್ತು ದುರಾಚಾರ'ಗಳನ್ನು ತಡೆಯಲು ಮುಂದಾಗಿದಕ್ಕೆ ತನ್ನನ್ನು `ಅನ್ಯಾಯವಾಗಿ ಅಮಾನತು' ಮಾಡಲಾಯಿತು ಎಂದು ಬೆಂಬಲಿಗರ ಮುಂದೆ ಅವಲತ್ತುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುರೈ (ಪಿಟಿಐ): </strong>ಡಿಎಂಕೆ ಪಕ್ಷದೊಳಗಿನ `ಕೆಲ ಶಕ್ತಿಗಳು' ಪಕ್ಷದ ಮುಖಸ್ಥರಾಗಿರುವ ತಮ್ಮ ತಂದೆ ಕರುಣಾನಿಧಿ ಅವರಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ ಎಂದು ಪಕ್ಷದಿಂದ ಅಮಾನತುಗೊಂಡಿರುವ ಡಿಎಂಕೆ ಮುಖಂಡ, ಕೇಂದ್ರದ ಮಾಜಿ ಸಚಿವ ಎಂ.ಕೆ.ಅಳಗಿರಿ ಅವರು ಸೋಮವಾರ ಆರೋಪಿಸಿದರು.</p>.<p>ಭಾರಿ ಪ್ರಮಾಣದಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು ಡಿಎಂಕೆ ಖಚಾಂಚಿಯಾಗಿರುವ ಕಿರಿಯ ಸಹೋದರ ಎಂ.ಕೆ.ಸ್ಟಾಲಿನ್ ಅವರ ವಿರುದ್ಧ ಪರೋಕ್ಷವಾಗಿ ವಾಗ್ಧಾಳಿ ನಡೆಸಿದರು.<br /> <br /> `ಪಕ್ಷದೊಳಗಿನ ಕೆಲ ಶಕ್ತಿಗಳು ತಂದೆ (ಕರುಣಾನಿಧಿ) ಅವರಿಗೆ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡುತ್ತಿಲ್ಲ. ಪಕ್ಷದ ಅಧ್ಯಕ್ಷರಿಗೆ ಅವರು ಕಿರುಕುಳ ನೀಡುತ್ತಿದ್ದಾರೆ' ಎಂದು ಅಳಗಿರಿ ಹೇಳಿದರು.<br /> <br /> ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಭವಿಷ್ಯದ ಕಾರ್ಯಯೋಜನೆಗಳನ್ನು ನಿರ್ಧರಿಸುವ ನಿಟ್ಟಿನಲ್ಲಿ ತಮ್ಮ ಬೆಂಬಲಿಗರ ಅಭಿಪ್ರಾಯ ಪಡೆಯಲು ಡಿಎಂಕೆಯ ದಕ್ಷಿಣ ವಲಯದ ಸಂಘಟನಾ ಕಾರ್ಯದರ್ಶಿಯಾಗಿರುವ ಅಳಗಿರಿ ಅವರು ಈ ಸಭೆ ಕರೆದಿದ್ದರು.<br /> <br /> ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಪ್ರಭಾವಿ ನಾಯಕರೆಂದೇ ಗುರುತಿಸಿಕೊಂಡಿರುವ ಅಳಗಿರಿಯವರು ಪಕ್ಷದ ಚುನಾವಣೆಗಳಲ್ಲಿ ನಡೆದ `ಅಕ್ರಮ ಮತ್ತು ದುರಾಚಾರ'ಗಳನ್ನು ತಡೆಯಲು ಮುಂದಾಗಿದಕ್ಕೆ ತನ್ನನ್ನು `ಅನ್ಯಾಯವಾಗಿ ಅಮಾನತು' ಮಾಡಲಾಯಿತು ಎಂದು ಬೆಂಬಲಿಗರ ಮುಂದೆ ಅವಲತ್ತುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>