<p>ಬೆಂಗಳೂರು: ನಗರದ ವೆಂಕಟಸ್ವಾಮಿ ಗಾರ್ಡನ್ ಬಳಿಯ ನರಸಿಂಹಯ್ಯ ಹಾಗೂ ಯಶೋಧಮ್ಮ ದಂಪತಿಯ ಎರಡು ವರ್ಷದ ಮಗು ಮಾಸ್ಟರ್ ಚಂದನ್ ಕರುಳುಬೇನೆಯಿಂದ ಮೃತಪಟ್ಟಿದೆ.<br /> <br /> ಮಗುವಿನ ಹೆತ್ತವರಿಗೆ ಮಹಾನಗರ ಪಾಲಿಕೆ ವತಿಯಿಂದ ಮೇಯರ್ ಶಾರದಮ್ಮ ಶುಕ್ರವಾರ ರೂ ಒಂದು ಲಕ್ಷದ ಪರಿಹಾರ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. <br /> <br /> ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಂದನ್ ಚಿಕಿತ್ಸೆಗೆ ಸ್ಪಂದಿಸದೆ ಮಾರ್ಚ್ 29ರಂದು ಮೃತಪಟ್ಟಿದ್ದ. <br /> <br /> ಬಡ ಕುಟುಂಬಕ್ಕೆ ಸಾಂತ್ವನ ನೀಡಲು ಚೆಕ್ ಹಸ್ತಾಂತರಿಸಲಾಯಿತು ಎಂದು ಬಿಬಿಎಂಪಿ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಗರದ ವೆಂಕಟಸ್ವಾಮಿ ಗಾರ್ಡನ್ ಬಳಿಯ ನರಸಿಂಹಯ್ಯ ಹಾಗೂ ಯಶೋಧಮ್ಮ ದಂಪತಿಯ ಎರಡು ವರ್ಷದ ಮಗು ಮಾಸ್ಟರ್ ಚಂದನ್ ಕರುಳುಬೇನೆಯಿಂದ ಮೃತಪಟ್ಟಿದೆ.<br /> <br /> ಮಗುವಿನ ಹೆತ್ತವರಿಗೆ ಮಹಾನಗರ ಪಾಲಿಕೆ ವತಿಯಿಂದ ಮೇಯರ್ ಶಾರದಮ್ಮ ಶುಕ್ರವಾರ ರೂ ಒಂದು ಲಕ್ಷದ ಪರಿಹಾರ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. <br /> <br /> ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಂದನ್ ಚಿಕಿತ್ಸೆಗೆ ಸ್ಪಂದಿಸದೆ ಮಾರ್ಚ್ 29ರಂದು ಮೃತಪಟ್ಟಿದ್ದ. <br /> <br /> ಬಡ ಕುಟುಂಬಕ್ಕೆ ಸಾಂತ್ವನ ನೀಡಲು ಚೆಕ್ ಹಸ್ತಾಂತರಿಸಲಾಯಿತು ಎಂದು ಬಿಬಿಎಂಪಿ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>