<p>ಮಂಡ್ಯ: ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಇದ್ದರೆ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಜನತಾ ಶಿಕ್ಷಣ ಸಂಸ್ಥೆ (ಪಿಇಟಿ) ಅಧ್ಯಕ್ಷ ಎಚ್.ಡಿ.ಚೌಡಯ್ಯ ಹೇಳಿದರು.<br /> <br /> ನಗರದ ರೈತ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿಶ್ವ ಒಕ್ಕಲಿಗರ ಜನಜಾಗೃತಿ ಸಂಘ ನೀಡಿದ `ಒಕ್ಕಲಿಗರ ರತ್ನ~ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> ಸಾರ್ವಜನಿಕ ಜೀವನದಲ್ಲಿ ಓರ್ವ ವ್ಯಕ್ತಿ ಬಹು ಎತ್ತರಕ್ಕೆ ಬೆಳೆಯಬೇಕಾದರೆ, ಸಮುದಾಯದ ಕೊಡುಗೆಯೂ ಇರುತ್ತದೆ. ಪುರಸ್ಕಾರ ದೊರೆತರೆ ಅದರ ಪಾಲು ಪುರಸ್ಕೃತರ ಏಳಿಗೆಗೆ ದುಡಿದ ಎಲ್ಲರಿಗೂ ಸಲ್ಲುತ್ತದೆ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್ ಅವರಿಗೂ `ಒಕ್ಕಲಿಗರ ರತ್ನ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಮಾಜಿ ಶಾಸಕರಾದ ಮಧು ಜಿ.ಮಾದೇಗೌಡ, ಡಿ.ಸಿ.ತಮ್ಮಣ್ಣ, ಸಂಘದ ಅಧ್ಯಕ್ಷ ಕೆ.ಎಂ.ರಾಮಕೃಷ್ಣ, ಪಿ.ರವಿಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಕರ್ತವ್ಯ ನಿಷ್ಠೆ, ಸಮಯ ಪ್ರಜ್ಞೆ ಇದ್ದರೆ ಉನ್ನತ ಸ್ಥಾನಕ್ಕೆ ಏರಬಹುದು ಎಂದು ಜನತಾ ಶಿಕ್ಷಣ ಸಂಸ್ಥೆ (ಪಿಇಟಿ) ಅಧ್ಯಕ್ಷ ಎಚ್.ಡಿ.ಚೌಡಯ್ಯ ಹೇಳಿದರು.<br /> <br /> ನಗರದ ರೈತ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿಶ್ವ ಒಕ್ಕಲಿಗರ ಜನಜಾಗೃತಿ ಸಂಘ ನೀಡಿದ `ಒಕ್ಕಲಿಗರ ರತ್ನ~ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.<br /> <br /> ಸಾರ್ವಜನಿಕ ಜೀವನದಲ್ಲಿ ಓರ್ವ ವ್ಯಕ್ತಿ ಬಹು ಎತ್ತರಕ್ಕೆ ಬೆಳೆಯಬೇಕಾದರೆ, ಸಮುದಾಯದ ಕೊಡುಗೆಯೂ ಇರುತ್ತದೆ. ಪುರಸ್ಕಾರ ದೊರೆತರೆ ಅದರ ಪಾಲು ಪುರಸ್ಕೃತರ ಏಳಿಗೆಗೆ ದುಡಿದ ಎಲ್ಲರಿಗೂ ಸಲ್ಲುತ್ತದೆ ಎಂದರು.<br /> <br /> ಶಾಸಕ ಎಂ.ಶ್ರೀನಿವಾಸ್ ಅವರಿಗೂ `ಒಕ್ಕಲಿಗರ ರತ್ನ~ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಸಕ ಬಿ.ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ, ಮಾಜಿ ಶಾಸಕರಾದ ಮಧು ಜಿ.ಮಾದೇಗೌಡ, ಡಿ.ಸಿ.ತಮ್ಮಣ್ಣ, ಸಂಘದ ಅಧ್ಯಕ್ಷ ಕೆ.ಎಂ.ರಾಮಕೃಷ್ಣ, ಪಿ.ರವಿಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>