<p>ಮುಂಬೈ (ಪಿಟಿಐ): ಕರ್ನಾಟಕದ ಬರ ಪೀಡಿತ ಜಿಲ್ಲೆಗಳಿಗೆ ನೀರು ಬಿಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ನಿಜಕ್ಕೂ ಆಘಾತಕಾರಿ ಎಂದು ಶಿವಸೇನಾ ಮುಖ್ಯಸ್ಥ ಬಾಳ ಠಾಕ್ರೆ ಸೋಮವಾರ ಕಟುವಾಗಿ ಟೀಕಿಸಿದ್ದಾರೆ. <br /> <br /> ಕರ್ನಾಟಕಕ್ಕೆ ನೀರು ಬಿಡುವ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮರಾಠಿಗರ ಬೆನ್ನಿಗೆ ಚೂರಿ ಹಾಕಿದೆ ಎಂದು ಅವರು ಶಿವಸೇನಾ ಮುಖವಾಣಿ `ಸಾಮ್ನಾ~ದ ಸಂಪಾದಕೀಯದಲ್ಲಿ ಹರಿಹಾಯ್ದಿದ್ದಾರೆ. <br /> <br /> `ಮರಾಠಿ ಭಾಷಿಕರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿರುವ ಕನ್ನಡಿಗರಿಗೆ ಒಂದು ಹನಿ ನೀರನ್ನೂ ಕೊಡಬಾರದು. ಅವರಿಗೆ ನೀರು ಕೊಡುವುದು ಹಾವಿಗೆ ಹಾಲೆರೆದಂತೆ. ಆ ಕೆಲಸವನ್ನು ಇಲ್ಲಿಯ ಸರ್ಕಾರ ಗುತ್ತಿಗೆ ಪಡೆದಿದೆ~ ಎಂದು ಕಿಡಿ ಕಾರಿದ್ದಾರೆ. <br /> <br /> ಮರಾಠಿಗರಿಗೆ ಕರ್ನಾಟಕ ಮಾಡಿರುವ ಅನ್ಯಾಯವನ್ನು ಮರೆತಿರುವ ಸರ್ಕಾರ ನೀರು ಬಿಡಲು ಹೊರಟಿದೆ ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ. <br /> <br /> ಗಡಿ ಸಮಸ್ಯೆಯ ಹೊರತಾಗಿಯೂ ಉಭಯ ರಾಜ್ಯಗಳು ಬರ ಪೀಡಿತ ಜಿಲ್ಲೆಗಳಿಗೆ ನೀರು ಬಿಡಲು ಒಪ್ಪಿಕೊಂಡಿವೆ.<br /> <br /> ದೂಧ್ಗಂಗಾ ಮತ್ತು ವರ್ನಾ ನದಿಗಳಿಂದ ಕರ್ನಾಟಕದ ಬರ ಪೀಡಿತ ಗಡಿ ಜಿಲ್ಲೆಗಳಿಗೆ ಮುಂಗಾರು ಆರಂಭವಾಗುವವರೆಗೆ ನೀರು ಬಿಡಲು ಮಹಾರಾಷ್ಟ್ರ ಒಪ್ಪಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಕರ್ನಾಟಕ ಆಲಮಟ್ಟಿ ಹಿನ್ನೀರನ್ನು ಸಾಂಗ್ಲಿ ಜಿಲ್ಲೆಯ ಬರಪೀಡಿತ ಜತ್ ತಾಲ್ಲೂಕಿಗೆ ಬಿಡಲಿದೆ. <br /> <br /> ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ ನೇತೃತ್ವದ ಸಚಿವರ ನಿಯೋಗ ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರನ್ನು ಭೇಟಿಯಾಗಿ ನೀರು ಬಿಡುವಂತೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಕರ್ನಾಟಕದ ಬರ ಪೀಡಿತ ಜಿಲ್ಲೆಗಳಿಗೆ ನೀರು ಬಿಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ನಿಜಕ್ಕೂ ಆಘಾತಕಾರಿ ಎಂದು ಶಿವಸೇನಾ ಮುಖ್ಯಸ್ಥ ಬಾಳ ಠಾಕ್ರೆ ಸೋಮವಾರ ಕಟುವಾಗಿ ಟೀಕಿಸಿದ್ದಾರೆ. <br /> <br /> ಕರ್ನಾಟಕಕ್ಕೆ ನೀರು ಬಿಡುವ ಮೂಲಕ ಕಾಂಗ್ರೆಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮರಾಠಿಗರ ಬೆನ್ನಿಗೆ ಚೂರಿ ಹಾಕಿದೆ ಎಂದು ಅವರು ಶಿವಸೇನಾ ಮುಖವಾಣಿ `ಸಾಮ್ನಾ~ದ ಸಂಪಾದಕೀಯದಲ್ಲಿ ಹರಿಹಾಯ್ದಿದ್ದಾರೆ. <br /> <br /> `ಮರಾಠಿ ಭಾಷಿಕರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿರುವ ಕನ್ನಡಿಗರಿಗೆ ಒಂದು ಹನಿ ನೀರನ್ನೂ ಕೊಡಬಾರದು. ಅವರಿಗೆ ನೀರು ಕೊಡುವುದು ಹಾವಿಗೆ ಹಾಲೆರೆದಂತೆ. ಆ ಕೆಲಸವನ್ನು ಇಲ್ಲಿಯ ಸರ್ಕಾರ ಗುತ್ತಿಗೆ ಪಡೆದಿದೆ~ ಎಂದು ಕಿಡಿ ಕಾರಿದ್ದಾರೆ. <br /> <br /> ಮರಾಠಿಗರಿಗೆ ಕರ್ನಾಟಕ ಮಾಡಿರುವ ಅನ್ಯಾಯವನ್ನು ಮರೆತಿರುವ ಸರ್ಕಾರ ನೀರು ಬಿಡಲು ಹೊರಟಿದೆ ಎಂದು ಠಾಕ್ರೆ ವ್ಯಂಗ್ಯವಾಡಿದ್ದಾರೆ. <br /> <br /> ಗಡಿ ಸಮಸ್ಯೆಯ ಹೊರತಾಗಿಯೂ ಉಭಯ ರಾಜ್ಯಗಳು ಬರ ಪೀಡಿತ ಜಿಲ್ಲೆಗಳಿಗೆ ನೀರು ಬಿಡಲು ಒಪ್ಪಿಕೊಂಡಿವೆ.<br /> <br /> ದೂಧ್ಗಂಗಾ ಮತ್ತು ವರ್ನಾ ನದಿಗಳಿಂದ ಕರ್ನಾಟಕದ ಬರ ಪೀಡಿತ ಗಡಿ ಜಿಲ್ಲೆಗಳಿಗೆ ಮುಂಗಾರು ಆರಂಭವಾಗುವವರೆಗೆ ನೀರು ಬಿಡಲು ಮಹಾರಾಷ್ಟ್ರ ಒಪ್ಪಿಕೊಂಡಿದೆ. ಅದಕ್ಕೆ ಪ್ರತಿಯಾಗಿ ಕರ್ನಾಟಕ ಆಲಮಟ್ಟಿ ಹಿನ್ನೀರನ್ನು ಸಾಂಗ್ಲಿ ಜಿಲ್ಲೆಯ ಬರಪೀಡಿತ ಜತ್ ತಾಲ್ಲೂಕಿಗೆ ಬಿಡಲಿದೆ. <br /> <br /> ಸಚಿವರಾದ ಉಮೇಶ್ ಕತ್ತಿ, ಬಸವರಾಜ ಬೊಮ್ಮಾಯಿ, ಮುರುಗೇಶ ನಿರಾಣಿ ನೇತೃತ್ವದ ಸಚಿವರ ನಿಯೋಗ ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರನ್ನು ಭೇಟಿಯಾಗಿ ನೀರು ಬಿಡುವಂತೆ ಮನವಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>