<p>`ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಅಡೆ ತಡೆಗಳು ಇಲ್ಲದಿದ್ದರೆ ರಾಜ್ಯ ಅಭಿವೃದ್ಧಿಯಲ್ಲಿ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಮುಂದಿನ ವಿಧಾನ ಸಭಾ ಚುನಾವಣೆಗೆ ಮೊದಲು ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವುದು ನನ್ನ ಗುರಿ~ ಎಂದಿದ್ದಾರೆ ಬಿ. ಎಸ್. ಯಡಿಯೂರಪ್ಪ (ಪ್ರ.ವಾ. ಮಾರ್ಚ್ 19).<br /> <br /> ರಾಜ್ಯದ ಸಮಗ್ರ ಅಭಿವೃದ್ಧಿ ತಮ್ಮಿಂದ ಮಾತ್ರವೇ ಸಾಧ್ಯ ಎಂಬ ನಂಬಿಕೆ ಅವರದು. ಅವರೇ ಮತ್ತೆ ಮುಖ್ಯಮಂತ್ರಿ ಆದರೂ ರಾಜ್ಯದ ಅಭಿವೃದ್ಧಿ ಸಾಧ್ಯವಾದೀತೇ? ಅವರಿಗೆ 70 ಶಾಸಕರ ಬೆಂಬಲ ಇದೆ. ಉಳಿದ 51 ಮಂದಿ ಶಾಸಕರ ಬೆಂಬಲ ಅವರಿಗೆ ಇಲ್ಲ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆದರೆ 20 ಮಂದಿ ಶಾಸಕರು ರಾಜೀನಾಮೆ ಕೊಡುತ್ತಾರೆ ಎಂದು ಸಚಿವ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯಲ್ಲಿ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ?<br /> <br /> ಬಿಎಸ್ವೈ ಹಗಲು ಕನಸು ಕಾಣುತ್ತಿದ್ದಾರೆ ಅಥವಾ ರಾಜ್ಯದ ಜನರ ಕಿವಿಯ ಮೇಲೆ ಹೂ ಇಡಲು ಹೊರಟಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯವನ್ನು~ಮೊದಲ ಸ್ಥಾನಕ್ಕೆ~ ತರುವುದು ತಿರುಕನ ಕನಸಷ್ಟೇ. ಕರ್ನಾಟಕದ ಅಭಿವೃದ್ಧಿಗೆ ಇತಿಶ್ರಿ ಹಾಡಿದ ಯಡಿಯೂರಪ್ಪ ಅವರೇ ಭಾಜಪಕ್ಕೂ ಅದೇ ಗತಿ ತೋರಿಸುತ್ತಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>`ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಿದೆ. ಅಡೆ ತಡೆಗಳು ಇಲ್ಲದಿದ್ದರೆ ರಾಜ್ಯ ಅಭಿವೃದ್ಧಿಯಲ್ಲಿ ಇಡೀ ದೇಶದಲ್ಲೇ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಮುಂದಿನ ವಿಧಾನ ಸಭಾ ಚುನಾವಣೆಗೆ ಮೊದಲು ರಾಜ್ಯವನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯುವುದು ನನ್ನ ಗುರಿ~ ಎಂದಿದ್ದಾರೆ ಬಿ. ಎಸ್. ಯಡಿಯೂರಪ್ಪ (ಪ್ರ.ವಾ. ಮಾರ್ಚ್ 19).<br /> <br /> ರಾಜ್ಯದ ಸಮಗ್ರ ಅಭಿವೃದ್ಧಿ ತಮ್ಮಿಂದ ಮಾತ್ರವೇ ಸಾಧ್ಯ ಎಂಬ ನಂಬಿಕೆ ಅವರದು. ಅವರೇ ಮತ್ತೆ ಮುಖ್ಯಮಂತ್ರಿ ಆದರೂ ರಾಜ್ಯದ ಅಭಿವೃದ್ಧಿ ಸಾಧ್ಯವಾದೀತೇ? ಅವರಿಗೆ 70 ಶಾಸಕರ ಬೆಂಬಲ ಇದೆ. ಉಳಿದ 51 ಮಂದಿ ಶಾಸಕರ ಬೆಂಬಲ ಅವರಿಗೆ ಇಲ್ಲ. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆದರೆ 20 ಮಂದಿ ಶಾಸಕರು ರಾಜೀನಾಮೆ ಕೊಡುತ್ತಾರೆ ಎಂದು ಸಚಿವ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಇಂತಹ ಗೊಂದಲದ ಪರಿಸ್ಥಿತಿಯಲ್ಲಿ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ?<br /> <br /> ಬಿಎಸ್ವೈ ಹಗಲು ಕನಸು ಕಾಣುತ್ತಿದ್ದಾರೆ ಅಥವಾ ರಾಜ್ಯದ ಜನರ ಕಿವಿಯ ಮೇಲೆ ಹೂ ಇಡಲು ಹೊರಟಿದ್ದಾರೆ. ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯವನ್ನು~ಮೊದಲ ಸ್ಥಾನಕ್ಕೆ~ ತರುವುದು ತಿರುಕನ ಕನಸಷ್ಟೇ. ಕರ್ನಾಟಕದ ಅಭಿವೃದ್ಧಿಗೆ ಇತಿಶ್ರಿ ಹಾಡಿದ ಯಡಿಯೂರಪ್ಪ ಅವರೇ ಭಾಜಪಕ್ಕೂ ಅದೇ ಗತಿ ತೋರಿಸುತ್ತಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>