<p>ಮಡಿಕೇರಿ: ಕರ್ನಾಟಕ ರಾಜ್ಯ ಅಂಧಕಾರದ ರಾಜ್ಯವಾಗಿದೆ. ಈ ಕಗ್ಗತ್ತಲಿನ ಸಾಮ್ರೋಜ್ಯಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಚಕ್ರವರ್ತಿಯಾಗಿದ್ದಾರೆ ಎಂದು ಸಂಸದ ಎಚ್.ವಿಶ್ವನಾಥ್ ಲೇವಡಿ ಮಾಡಿದರು. <br /> <br /> ನಗರದಲ್ಲಿ ಗುರುವಾರ ನಡೆದ ನೆಹರು ಯುವ ಕೇಂದ್ರದ ಕಾರ್ಯಕ್ರಮಕ್ಕಿಂತ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಈಗ ಎದುರಿಸುತ್ತಿರುವ ವಿದ್ಯುತ್ ಕೊರತೆಗೆ ಬಿಜೆಪಿ ಸರ್ಕಾರವೇ ಹೊಣೆ ಎಂದರು. <br /> ವಿದ್ಯುತ್ ಕಳ್ಳತನ, ಸೋರಿಕೆಯನ್ನು ತಡೆಗಟ್ಟದ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಸುಖಾಸುಮ್ಮನೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು. <br /> ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವ ತನ್ನ ಜವಾಬ್ದಾರಿಯನ್ನು ಕೇಂದ್ರದೆಡೆ ವರ್ಗಾಯಿಸಿದರೆ ಸಮಸ್ಯೆ ಪರಿಹಾರವಾಗಲ್ಲ ಎಂದರು.<br /> <br /> ಮುಖ್ಯಮಂತ್ರಿ ಅವರು ವಿದ್ಯುತ್ ಸಮಸ್ಯೆಗೆ ಹಿಂದಿನ ಸರ್ಕಾರಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ, ಹಿಂದಿನ ಸರ್ಕಾರದಲ್ಲಿ ಕೂಡ ಇವರ ಪಕ್ಷದವರೇ ಆಡಳಿತ ನಡೆಸಿದ್ದಲ್ಲವೇ? ಆ ಸಮಯದಲ್ಲೂ ಶೋಭಾ ಕರಂದ್ಲಾಜೆ ವಿದ್ಯುತ್ ಸಚಿವೆ ಆಗಿರಲಿಲ್ಲವೇ? ಎಂದು ಅವರು ಪ್ರಶ್ನಿಸಿದರು.<br /> <br /> ಪ್ರಸ್ತುತ ಇರುವ ಬಿಜೆಪಿ ಸರ್ಕಾರವು ತನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚುವರಿಯಾಗಿ ಒಂದೇ ಒಂದು ಮೆಗಾವಾಟ್ ವಿದ್ಯುತ್ ತಯಾರಿಸಿಲ್ಲ. ಮುಂಜಾಗ್ರತವಾಗಿ ಕಲ್ಲಿದ್ದಲು ಖರೀದಿಸುವುದು, ಸಂಗ್ರಹಿಸುವುದರ ಬಗ್ಗೆ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಡಿಕೇರಿ: ಕರ್ನಾಟಕ ರಾಜ್ಯ ಅಂಧಕಾರದ ರಾಜ್ಯವಾಗಿದೆ. ಈ ಕಗ್ಗತ್ತಲಿನ ಸಾಮ್ರೋಜ್ಯಕ್ಕೆ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಚಕ್ರವರ್ತಿಯಾಗಿದ್ದಾರೆ ಎಂದು ಸಂಸದ ಎಚ್.ವಿಶ್ವನಾಥ್ ಲೇವಡಿ ಮಾಡಿದರು. <br /> <br /> ನಗರದಲ್ಲಿ ಗುರುವಾರ ನಡೆದ ನೆಹರು ಯುವ ಕೇಂದ್ರದ ಕಾರ್ಯಕ್ರಮಕ್ಕಿಂತ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಈಗ ಎದುರಿಸುತ್ತಿರುವ ವಿದ್ಯುತ್ ಕೊರತೆಗೆ ಬಿಜೆಪಿ ಸರ್ಕಾರವೇ ಹೊಣೆ ಎಂದರು. <br /> ವಿದ್ಯುತ್ ಕಳ್ಳತನ, ಸೋರಿಕೆಯನ್ನು ತಡೆಗಟ್ಟದ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಸುಖಾಸುಮ್ಮನೆ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು. <br /> ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವ ತನ್ನ ಜವಾಬ್ದಾರಿಯನ್ನು ಕೇಂದ್ರದೆಡೆ ವರ್ಗಾಯಿಸಿದರೆ ಸಮಸ್ಯೆ ಪರಿಹಾರವಾಗಲ್ಲ ಎಂದರು.<br /> <br /> ಮುಖ್ಯಮಂತ್ರಿ ಅವರು ವಿದ್ಯುತ್ ಸಮಸ್ಯೆಗೆ ಹಿಂದಿನ ಸರ್ಕಾರಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ, ಹಿಂದಿನ ಸರ್ಕಾರದಲ್ಲಿ ಕೂಡ ಇವರ ಪಕ್ಷದವರೇ ಆಡಳಿತ ನಡೆಸಿದ್ದಲ್ಲವೇ? ಆ ಸಮಯದಲ್ಲೂ ಶೋಭಾ ಕರಂದ್ಲಾಜೆ ವಿದ್ಯುತ್ ಸಚಿವೆ ಆಗಿರಲಿಲ್ಲವೇ? ಎಂದು ಅವರು ಪ್ರಶ್ನಿಸಿದರು.<br /> <br /> ಪ್ರಸ್ತುತ ಇರುವ ಬಿಜೆಪಿ ಸರ್ಕಾರವು ತನ್ನ ಅಧಿಕಾರದ ಅವಧಿಯಲ್ಲಿ ಹೆಚ್ಚುವರಿಯಾಗಿ ಒಂದೇ ಒಂದು ಮೆಗಾವಾಟ್ ವಿದ್ಯುತ್ ತಯಾರಿಸಿಲ್ಲ. ಮುಂಜಾಗ್ರತವಾಗಿ ಕಲ್ಲಿದ್ದಲು ಖರೀದಿಸುವುದು, ಸಂಗ್ರಹಿಸುವುದರ ಬಗ್ಗೆ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>