<p><strong>ಬೆಂಗಳೂರು: </strong>ಮುಂದಿನ 8 ವರ್ಷಗಳಲ್ಲಿ ರಾಜ್ಯದಿಂದ ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ (ಐಸಿಟಿ) ಉದ್ಯಮದ ರಫ್ತು ಪ್ರಮಾಣವನ್ನು ರೂ 4 ಲಕ್ಷ ಕೋಟಿಗಳಿಗೆ ಹೆಚ್ಚಿಸುವ ಹಾಗೂ ಆ ಕ್ಷೇತ್ರದಲ್ಲಿ 12 ಲಕ್ಷ ಹೊಸ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ `ಕರ್ನಾಟಕ ಐಸಿಟಿ ಗ್ರೂಪ್- 2020~ ಅನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.<br /> <br /> ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಗುರುವಾರ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಮ್) ಉದ್ಘಾಟನಾ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.<br /> `ಒಂದು ಸಾವಿರ ಹೊಸ ಉದ್ಯಮಗಳ ಸ್ಥಾಪನೆಗಾಗಿ ಉತ್ತೇಜನಾ ಕ್ರಮಗಳ ಬಗೆಗೂ ಐಸಿಟಿ ಗ್ರೂಪ್ ಶಿಫಾರಸು ಮಾಡಲಿದೆ. ಈ ಗ್ರೂಪ್ ಅನ್ನು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸರ್ವೀಸಸ್ನ ಅಧ್ಯಕ್ಷ ಟಿ.ವಿ.ಮೋಹನ್ದಾಸ್ ಪೈ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಗ್ರೂಪ್ನ ಧ್ಯೇಯೋದ್ದೇಶದ ಫಲಕವನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿ ಮಾತನಾಡಿದ ಮೋಹನ್ದಾಸ್ ಪೈ, `ಸದ್ಯ ಐಸಿಟಿ ಉದ್ಯಮದ ರಫ್ತು ಪ್ರಮಾಣ ರೂ 1.35 ಲಕ್ಷ ಕೋಟಿಯಷ್ಟಿದೆ. 8 ಲಕ್ಷ ಮಂದಿಗೆ ಉದ್ಯೋಗಾವಕಾಶ ಒದಗಿಸಿದೆ~ ಎಂದರು.<br /> <br /> ತೈವಾನ್ ಮಾದರಿ: ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿಯಲ್ಲಿ ತೈವಾನ್ನ ಕೈಗಾರಿಕಾ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಮಾದರಿಯಲ್ಲಿ ತಂತ್ರಜ್ಞಾನ ಆವಿಷ್ಕಾರ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.<br /> <br /> <strong>ರೈತರ ಪ್ರತಿಭಟನೆ</strong><br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತು ಪ್ರಾರಂಭಿಸುತ್ತಿದ್ದಂತೆ ಸಭಿಕರ ನಡುವೆ ಕುಳಿತಿದ್ದ ಕೆಲ ರೈತ ಕಾರ್ಯಕರ್ತರು ಎದ್ದು ಹಸಿರು ಶಾಲುಗಳನ್ನು ಬೀಸುತ್ತಾ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಘೋಷಣೆ ಕೂಗುವವರನ್ನು ಹಿಡಿದು ಬಂಧಿಸಿ, ಹೊರಗೆ ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂದಿನ 8 ವರ್ಷಗಳಲ್ಲಿ ರಾಜ್ಯದಿಂದ ಮಾಹಿತಿ ಮತ್ತು ಸಂಪರ್ಕ ತಂತ್ರಜ್ಞಾನ (ಐಸಿಟಿ) ಉದ್ಯಮದ ರಫ್ತು ಪ್ರಮಾಣವನ್ನು ರೂ 4 ಲಕ್ಷ ಕೋಟಿಗಳಿಗೆ ಹೆಚ್ಚಿಸುವ ಹಾಗೂ ಆ ಕ್ಷೇತ್ರದಲ್ಲಿ 12 ಲಕ್ಷ ಹೊಸ ಉದ್ಯೋಗಾವಕಾಶ ಸೃಷ್ಟಿಸುವ ಉದ್ದೇಶದಿಂದ `ಕರ್ನಾಟಕ ಐಸಿಟಿ ಗ್ರೂಪ್- 2020~ ಅನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.<br /> <br /> ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಗುರುವಾರ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ (ಜಿಮ್) ಉದ್ಘಾಟನಾ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.<br /> `ಒಂದು ಸಾವಿರ ಹೊಸ ಉದ್ಯಮಗಳ ಸ್ಥಾಪನೆಗಾಗಿ ಉತ್ತೇಜನಾ ಕ್ರಮಗಳ ಬಗೆಗೂ ಐಸಿಟಿ ಗ್ರೂಪ್ ಶಿಫಾರಸು ಮಾಡಲಿದೆ. ಈ ಗ್ರೂಪ್ ಅನ್ನು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸರ್ವೀಸಸ್ನ ಅಧ್ಯಕ್ಷ ಟಿ.ವಿ.ಮೋಹನ್ದಾಸ್ ಪೈ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ~ ಎಂದು ಅವರು ಹೇಳಿದರು.<br /> <br /> ಗ್ರೂಪ್ನ ಧ್ಯೇಯೋದ್ದೇಶದ ಫಲಕವನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿ ಮಾತನಾಡಿದ ಮೋಹನ್ದಾಸ್ ಪೈ, `ಸದ್ಯ ಐಸಿಟಿ ಉದ್ಯಮದ ರಫ್ತು ಪ್ರಮಾಣ ರೂ 1.35 ಲಕ್ಷ ಕೋಟಿಯಷ್ಟಿದೆ. 8 ಲಕ್ಷ ಮಂದಿಗೆ ಉದ್ಯೋಗಾವಕಾಶ ಒದಗಿಸಿದೆ~ ಎಂದರು.<br /> <br /> ತೈವಾನ್ ಮಾದರಿ: ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮಸ್ಥಳ ಮುದ್ದೇನಹಳ್ಳಿಯಲ್ಲಿ ತೈವಾನ್ನ ಕೈಗಾರಿಕಾ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಮಾದರಿಯಲ್ಲಿ ತಂತ್ರಜ್ಞಾನ ಆವಿಷ್ಕಾರ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.<br /> <br /> <strong>ರೈತರ ಪ್ರತಿಭಟನೆ</strong><br /> ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಾತು ಪ್ರಾರಂಭಿಸುತ್ತಿದ್ದಂತೆ ಸಭಿಕರ ನಡುವೆ ಕುಳಿತಿದ್ದ ಕೆಲ ರೈತ ಕಾರ್ಯಕರ್ತರು ಎದ್ದು ಹಸಿರು ಶಾಲುಗಳನ್ನು ಬೀಸುತ್ತಾ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಘೋಷಣೆ ಕೂಗುವವರನ್ನು ಹಿಡಿದು ಬಂಧಿಸಿ, ಹೊರಗೆ ಕರೆದೊಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>