<p><strong>ನವದೆಹಲಿ (ಪಿಟಿಐ):</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕರ್ನಾಟಕದ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಬೇಕಾದೀತು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದಲ್ವೀರ್ ಭಂಡಾರಿ ಮತ್ತು ದೀಪಕ್ ವರ್ಮಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, `ಖುದ್ದು ಹಾಜರಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸುವ ಮೂಲಕ ಜಯಲಲಿತಾ ವಿಚಾರಣೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಯತ್ನಿಸುತ್ತಿದ್ದಾರೆ~ ಎಂದು ಹೇಳಿತು.<br /> <br /> `ನಾವು ವಿಶಾಲವಾದ ತಳಹದಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದೇವೆ. ಅಂದ ಮಾತಕ್ಕೆ ಆರೋಪಿ ಹೇಳುವ ಮಾತುಗಳನ್ನೆಲ್ಲಾ ಪರಿಗಣಿಸುವ ಅಗತ್ಯವಿಲ್ಲ. ವಿಚಾರಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವ ಉದ್ದೇಶ ಬಿಟ್ಟರೆ ಈ ಅರ್ಜಿಯಲ್ಲಿ ಬೇರೇನೂ ಕಾಣುತ್ತಿಲ್ಲ~ ಎಂದು ಭಂಡಾರಿ ಅಭಿಪ್ರಾಯ ಪಟ್ಟರು.<br /> <br /> ವಿಚಾರಣೆ ನಡೆಯುತ್ತಿರುವ ಕರ್ನಾಟಕದ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಜಯಲಲಿತಾ ಅವರಿಗೆ ಯಾವಾಗ ಸಾಧ್ಯವಾಗಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಲು ಜಯಾ ಪರ ವಕೀಲ ಹರೀಶ್ ಸಾಳ್ವೆಗೆ ಒಂದು ವಾರ ಕಾಲಾವಕಾಶ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.<br /> <br /> ಮಿತಿ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಜಯಲಲಿತಾ ಅವರು ಸಿಆರ್ಪಿಸಿ ಸೆಕ್ಷನ್ 313ರಡಿ ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.<br /> <br /> ಜಯಾಲಲಿತಾ ಮತ್ತೆ ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಭದ್ರತಾ ಕಾರಣಗಳಿಂದ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗಲು ಕಷ್ಟವಾಗಬಹುದೆಂದು ಜಯಾ ಪರ ವಕೀಲ ಹರೀಶ್ ಸಾಳ್ವೆ ನ್ಯಾಯಾಲಯಕ್ಕೆ ತಿಳಿಸಿದರು. <br /> <br /> ಅಗತ್ಯಬಿದ್ದರೆ, ಜಯಲಲಿತಾ ಸುರಕ್ಷತೆಗಾಗಿ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲು ವಿಚಾರಣಾ ಕೋರ್ಟ್ಗೆ ಸೂಚಿಸುವುದಾಗಿಯೂ ನ್ಯಾಯಪೀಠ ಹೇಳಿತು.1991-96ರ ಅವಧಿಯಲ್ಲಿ ಜಯಲಿಲಿತಾ ಅವರು ಅಕ್ರಮವಾಗಿ 66 ಕೋಟಿ ಮೌಲ್ಯದ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ.<br /> <br /> ಈ ಆರೋಪವನ್ನು ಜಯಲಲಿತಾ ಅವರು ತಿರಸ್ಕರಿಸಿದ್ದು, ಹಿಂದಿನ ಡಿಎಂಕೆ ಸರ್ಕಾರ ರಾಜಕೀಯ ಕಾರಣಗಳಿಗಾಗಿ ಈ ಪ್ರಕರಣವನ್ನು ದಾಖಲಿಸಿತ್ತು ಎಂದು ಆರೋಪಿಸಿದ್ದರು.ಆ ಬಳಿಕ ಪ್ರಕರಣದ ನಿಷ್ಪಕ್ಷಪಾತ ವಿಚಾರಣೆಗಾಗಿ ಪ್ರಕರಣವನ್ನು ಕರ್ನಾಟಕದ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕರ್ನಾಟಕದ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಬೇಕಾದೀತು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.<br /> <br /> ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದಲ್ವೀರ್ ಭಂಡಾರಿ ಮತ್ತು ದೀಪಕ್ ವರ್ಮಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್ ನ್ಯಾಯಪೀಠ, `ಖುದ್ದು ಹಾಜರಿಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸುವ ಮೂಲಕ ಜಯಲಲಿತಾ ವಿಚಾರಣೆ ಪ್ರಕ್ರಿಯೆಯನ್ನು ವಿಳಂಬ ಮಾಡಲು ಯತ್ನಿಸುತ್ತಿದ್ದಾರೆ~ ಎಂದು ಹೇಳಿತು.<br /> <br /> `ನಾವು ವಿಶಾಲವಾದ ತಳಹದಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದೇವೆ. ಅಂದ ಮಾತಕ್ಕೆ ಆರೋಪಿ ಹೇಳುವ ಮಾತುಗಳನ್ನೆಲ್ಲಾ ಪರಿಗಣಿಸುವ ಅಗತ್ಯವಿಲ್ಲ. ವಿಚಾರಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವ ಉದ್ದೇಶ ಬಿಟ್ಟರೆ ಈ ಅರ್ಜಿಯಲ್ಲಿ ಬೇರೇನೂ ಕಾಣುತ್ತಿಲ್ಲ~ ಎಂದು ಭಂಡಾರಿ ಅಭಿಪ್ರಾಯ ಪಟ್ಟರು.<br /> <br /> ವಿಚಾರಣೆ ನಡೆಯುತ್ತಿರುವ ಕರ್ನಾಟಕದ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಜಯಲಲಿತಾ ಅವರಿಗೆ ಯಾವಾಗ ಸಾಧ್ಯವಾಗಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಲು ಜಯಾ ಪರ ವಕೀಲ ಹರೀಶ್ ಸಾಳ್ವೆಗೆ ಒಂದು ವಾರ ಕಾಲಾವಕಾಶ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿದೆ.<br /> <br /> ಮಿತಿ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೋರಿ ಜಯಲಲಿತಾ ಅವರು ಸಿಆರ್ಪಿಸಿ ಸೆಕ್ಷನ್ 313ರಡಿ ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.<br /> <br /> ಜಯಾಲಲಿತಾ ಮತ್ತೆ ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಭದ್ರತಾ ಕಾರಣಗಳಿಂದ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗಲು ಕಷ್ಟವಾಗಬಹುದೆಂದು ಜಯಾ ಪರ ವಕೀಲ ಹರೀಶ್ ಸಾಳ್ವೆ ನ್ಯಾಯಾಲಯಕ್ಕೆ ತಿಳಿಸಿದರು. <br /> <br /> ಅಗತ್ಯಬಿದ್ದರೆ, ಜಯಲಲಿತಾ ಸುರಕ್ಷತೆಗಾಗಿ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲು ವಿಚಾರಣಾ ಕೋರ್ಟ್ಗೆ ಸೂಚಿಸುವುದಾಗಿಯೂ ನ್ಯಾಯಪೀಠ ಹೇಳಿತು.1991-96ರ ಅವಧಿಯಲ್ಲಿ ಜಯಲಿಲಿತಾ ಅವರು ಅಕ್ರಮವಾಗಿ 66 ಕೋಟಿ ಮೌಲ್ಯದ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ.<br /> <br /> ಈ ಆರೋಪವನ್ನು ಜಯಲಲಿತಾ ಅವರು ತಿರಸ್ಕರಿಸಿದ್ದು, ಹಿಂದಿನ ಡಿಎಂಕೆ ಸರ್ಕಾರ ರಾಜಕೀಯ ಕಾರಣಗಳಿಗಾಗಿ ಈ ಪ್ರಕರಣವನ್ನು ದಾಖಲಿಸಿತ್ತು ಎಂದು ಆರೋಪಿಸಿದ್ದರು.ಆ ಬಳಿಕ ಪ್ರಕರಣದ ನಿಷ್ಪಕ್ಷಪಾತ ವಿಚಾರಣೆಗಾಗಿ ಪ್ರಕರಣವನ್ನು ಕರ್ನಾಟಕದ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>