<p><strong>ಬೆಂಗಳೂರು: </strong>‘ಇಡೀ ದೇಶದಲ್ಲೇ ಕರ್ನಾಟಕ ಶ್ರೇಷ್ಠವಾದ ನಾಡು. ಹಣ ಗಳಿಸುವ ಉದ್ದೇಶದಿಂದ ನಾನು ಇಲ್ಲಿಗೆ ಬಂದಿಲ್ಲ. ಹಲವು ಧಾರ್ಮಿಕ ಮುಖಂಡರು, ನಿಷ್ಠಾವಂತ ಅಧಿಕಾರಿಗಳು, ಸನ್ನಡತೆಯ ಜನರ ನಡುವೆ ಇರುವ ಬಯಕೆಯಿಂದ ಇಲ್ಲಿಗೆ ಬಂದಿದ್ದೇನೆ’ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಹೇಳಿದರು.</p>.<p>‘ಪ್ರಧಾನಿಯವರು ಉನ್ನತ ಹುದ್ದೆ ನಿರ್ವಹಿಸುವಂತೆ ನೀಡಿದ ಆಹ್ವಾನವನ್ನು ನಯವಾಗಿಯೇ ತಿರಸ್ಕರಿಸಿದ್ದೆ. ವಕೀಲಿ ವೃತ್ತಿಯನ್ನೇ ಮುಂದುವರಿಸಿ ಯುವ ಜನತೆಗೆ ಮಾರ್ಗದರ್ಶನ ನೀಡಬೇಕೆಂದಿದ್ದೆ. ಆದರೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುವಂತೆ ಪ್ರಧಾನಿ ಸೂಚನೆ ನೀಡಿದಾಗ ಸಂತೋಷದಿಂದ ಒಪ್ಪಿಕೊಂಡೆ. ಕರ್ನಾಟಕ ಎಂದರೆ ನನಗೆ ಅಚ್ಚುಮೆಚ್ಚು’ ಎಂದರು.</p>.<p>‘ರಾಜಭವನ ದಂತ ಗೋಪುರದಂತಾಗಿದೆ. ಜನರೊಂದಿಗೆ ಒಡನಾಟವಿರದಿದ್ದರೆ ಪ್ರಜಾಸತ್ತಾತ್ಮಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವೇ ಇಲ್ಲದಂತಾಗುತ್ತದೆ. ಹಾಗಾಗಿ ರಾಜ್ಯಪಾಲರಾದವರು ಮಾಧ್ಯಮಗಳೊಂದಿಗೆ ಮಾತನಾಡಲು ಅವಕಾಶವಿದೆ. ಇದಕ್ಕೆ ಕಡಿವಾಣ ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎನಿಸುತ್ತದೆ’ ಎಂದರು.<br /> ನೀತಿ ಪಾಠ ಹೇಳುವ ಕೆಲಸ ನನ್ನದಲ್ಲ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀತಿ ಪಾಠ ಹೇಳುವ ಕೆಲಸ ನನ್ನದಲ್ಲ’ ಎಂದು ಎಚ್.ಆರ್. ಭಾರದ್ವಾಜ್ ಹೇಳಿದರು.</p>.<p>ಮುಖ್ಯಮಂತ್ರಿಗಳ ವಿರುದ್ಧ ಭೂಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಆದೇಶ ನೀಡಿರುವುದರಿಂದ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.</p>.<p>‘ಮುಖ್ಯಮಂತ್ರಿಗಳು ಜನರಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಅವರ ರಾಜೀನಾಮೆ ನೀಡದಿರುವ ಕುರಿತು ನಾನು ಚಿಂತಿಸುವುದಿಲ್ಲ. ಅಲ್ಲದೇ ಅವರಿಗೆ ನೀತಿಪಾಠ ಹೇಳುವ ಕೆಲಸವೂ ನನ್ನದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಇಡೀ ದೇಶದಲ್ಲೇ ಕರ್ನಾಟಕ ಶ್ರೇಷ್ಠವಾದ ನಾಡು. ಹಣ ಗಳಿಸುವ ಉದ್ದೇಶದಿಂದ ನಾನು ಇಲ್ಲಿಗೆ ಬಂದಿಲ್ಲ. ಹಲವು ಧಾರ್ಮಿಕ ಮುಖಂಡರು, ನಿಷ್ಠಾವಂತ ಅಧಿಕಾರಿಗಳು, ಸನ್ನಡತೆಯ ಜನರ ನಡುವೆ ಇರುವ ಬಯಕೆಯಿಂದ ಇಲ್ಲಿಗೆ ಬಂದಿದ್ದೇನೆ’ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಹೇಳಿದರು.</p>.<p>‘ಪ್ರಧಾನಿಯವರು ಉನ್ನತ ಹುದ್ದೆ ನಿರ್ವಹಿಸುವಂತೆ ನೀಡಿದ ಆಹ್ವಾನವನ್ನು ನಯವಾಗಿಯೇ ತಿರಸ್ಕರಿಸಿದ್ದೆ. ವಕೀಲಿ ವೃತ್ತಿಯನ್ನೇ ಮುಂದುವರಿಸಿ ಯುವ ಜನತೆಗೆ ಮಾರ್ಗದರ್ಶನ ನೀಡಬೇಕೆಂದಿದ್ದೆ. ಆದರೆ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುವಂತೆ ಪ್ರಧಾನಿ ಸೂಚನೆ ನೀಡಿದಾಗ ಸಂತೋಷದಿಂದ ಒಪ್ಪಿಕೊಂಡೆ. ಕರ್ನಾಟಕ ಎಂದರೆ ನನಗೆ ಅಚ್ಚುಮೆಚ್ಚು’ ಎಂದರು.</p>.<p>‘ರಾಜಭವನ ದಂತ ಗೋಪುರದಂತಾಗಿದೆ. ಜನರೊಂದಿಗೆ ಒಡನಾಟವಿರದಿದ್ದರೆ ಪ್ರಜಾಸತ್ತಾತ್ಮಕವಾಗಿ ಕಾರ್ಯ ನಿರ್ವಹಿಸಲು ಸಾಧ್ಯವೇ ಇಲ್ಲದಂತಾಗುತ್ತದೆ. ಹಾಗಾಗಿ ರಾಜ್ಯಪಾಲರಾದವರು ಮಾಧ್ಯಮಗಳೊಂದಿಗೆ ಮಾತನಾಡಲು ಅವಕಾಶವಿದೆ. ಇದಕ್ಕೆ ಕಡಿವಾಣ ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎನಿಸುತ್ತದೆ’ ಎಂದರು.<br /> ನೀತಿ ಪಾಠ ಹೇಳುವ ಕೆಲಸ ನನ್ನದಲ್ಲ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀತಿ ಪಾಠ ಹೇಳುವ ಕೆಲಸ ನನ್ನದಲ್ಲ’ ಎಂದು ಎಚ್.ಆರ್. ಭಾರದ್ವಾಜ್ ಹೇಳಿದರು.</p>.<p>ಮುಖ್ಯಮಂತ್ರಿಗಳ ವಿರುದ್ಧ ಭೂಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಆದೇಶ ನೀಡಿರುವುದರಿಂದ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.</p>.<p>‘ಮುಖ್ಯಮಂತ್ರಿಗಳು ಜನರಿಂದ ನೇರವಾಗಿ ಆಯ್ಕೆಯಾಗಿದ್ದಾರೆ. ಹಾಗಾಗಿ ಅವರ ರಾಜೀನಾಮೆ ನೀಡದಿರುವ ಕುರಿತು ನಾನು ಚಿಂತಿಸುವುದಿಲ್ಲ. ಅಲ್ಲದೇ ಅವರಿಗೆ ನೀತಿಪಾಠ ಹೇಳುವ ಕೆಲಸವೂ ನನ್ನದಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>