<p><strong>ಬೆಂಗಳೂರು:</strong> `ಕಲಾವಿದರ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿ. ಕಲಾವಿದರಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.<br /> <br /> ಡಿ.ಎಸ್- ಮ್ಯಾಕ್ಸ್ ಸಂಸ್ಥೆಯ ಆಶ್ರಯದಲ್ಲಿ ನಗರದ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ಬುಧವಾರ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ `ಡಿ.ಎಸ್- ಮ್ಯಾಕ್ಸ್ ಕಲಾಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಕನ್ನಡ ಚಲನಚಿತ್ರ ಕ್ಷೇತ್ರದ ಅಪೂರ್ವ ಪ್ರತಿಭೆಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ. ಸರ್ಕಾರ ಮಾಡಬೇಕಾದ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ. ಎಂಟು ವರ್ಷಗಳಲ್ಲಿ ಸಂಸ್ಥೆಯ ಬೆಳವಣಿಗೆ ಅಚ್ಚರಿ ಮೂಡಿಸುವಂತಹುದು' ಎಂದರು. ಪ್ರಶಸ್ತಿ ಸ್ವೀಕರಿಸಿದ ಗಿರಿಜಾ ಲೋಕೇಶ್ ಮಾತನಾಡಿ, `ಸಂಸ್ಥೆ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಲಿ' ಎಂದು ಆಶಿಸಿದರು.<strong> <br /> <br /> ಪ್ರಶಸ್ತಿ ಪುರಸ್ಕೃತರು:</strong> ಹಿರಿಯ ನಟಿಯರಾದ ಲೀಲಾವತಿ, ಜಯಂತಿ, ಬಿ.ವಿ.ರಾಧಾ, ಗಿರಿಜಾ ಲೋಕೇಶ್, ಎಂ.ಎನ್.ಲಕ್ಷ್ಮೀದೇವಿ, ಪದ್ಮಾ ವಾಸಂತಿ, ಭವ್ಯ, ರೇಖಾದಾಸ್, ಹಿರಿಯ ನಟರಾದ ಉಮೇಶ್, ಹೊನ್ನವಳ್ಳಿ ಕೃಷ್ಣ, ಕೀರ್ತಿರಾಜ್, ಡಿಂಗ್ರಿ ನಾಗರಾಜ್, ಬಿರಾದಾರ್ ಅವರಿಗೆ `ಕಲಾಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಹಿರಿಯ ನಟರಾದ ದ್ವಾರಕೀಶ್, ಕೆ.ಎಸ್.ಎಲ್.ಸ್ವಾಮಿ (ರವಿ), ಜಗ್ಗೇಶ್, ನಿರ್ದೇಶಕ ಗುರುಪ್ರಸಾದ್, ಸಂಸ್ಥೆಯ ಮುಖ್ಯಸ್ಥ ಕೆ.ವಿ. ಸತೀಶ್, ನಿರ್ದೇಶಕಿ ಆಶಾ ಸತೀಶ್, ಕಾರ್ಯಕಾರಿ ನಿರ್ದೇಶಕ ಎಸ್.ಪಿ.ದಯಾನಂದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕಲಾವಿದರ ಕಷ್ಟ-ಸುಖಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿ. ಕಲಾವಿದರಿಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡಬೇಕು' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.<br /> <br /> ಡಿ.ಎಸ್- ಮ್ಯಾಕ್ಸ್ ಸಂಸ್ಥೆಯ ಆಶ್ರಯದಲ್ಲಿ ನಗರದ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ಬುಧವಾರ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಹಾಗೂ `ಡಿ.ಎಸ್- ಮ್ಯಾಕ್ಸ್ ಕಲಾಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> `ಕನ್ನಡ ಚಲನಚಿತ್ರ ಕ್ಷೇತ್ರದ ಅಪೂರ್ವ ಪ್ರತಿಭೆಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನೀಯ. ಸರ್ಕಾರ ಮಾಡಬೇಕಾದ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ. ಎಂಟು ವರ್ಷಗಳಲ್ಲಿ ಸಂಸ್ಥೆಯ ಬೆಳವಣಿಗೆ ಅಚ್ಚರಿ ಮೂಡಿಸುವಂತಹುದು' ಎಂದರು. ಪ್ರಶಸ್ತಿ ಸ್ವೀಕರಿಸಿದ ಗಿರಿಜಾ ಲೋಕೇಶ್ ಮಾತನಾಡಿ, `ಸಂಸ್ಥೆ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಲಿ' ಎಂದು ಆಶಿಸಿದರು.<strong> <br /> <br /> ಪ್ರಶಸ್ತಿ ಪುರಸ್ಕೃತರು:</strong> ಹಿರಿಯ ನಟಿಯರಾದ ಲೀಲಾವತಿ, ಜಯಂತಿ, ಬಿ.ವಿ.ರಾಧಾ, ಗಿರಿಜಾ ಲೋಕೇಶ್, ಎಂ.ಎನ್.ಲಕ್ಷ್ಮೀದೇವಿ, ಪದ್ಮಾ ವಾಸಂತಿ, ಭವ್ಯ, ರೇಖಾದಾಸ್, ಹಿರಿಯ ನಟರಾದ ಉಮೇಶ್, ಹೊನ್ನವಳ್ಳಿ ಕೃಷ್ಣ, ಕೀರ್ತಿರಾಜ್, ಡಿಂಗ್ರಿ ನಾಗರಾಜ್, ಬಿರಾದಾರ್ ಅವರಿಗೆ `ಕಲಾಶ್ರೀ' ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಹಿರಿಯ ನಟರಾದ ದ್ವಾರಕೀಶ್, ಕೆ.ಎಸ್.ಎಲ್.ಸ್ವಾಮಿ (ರವಿ), ಜಗ್ಗೇಶ್, ನಿರ್ದೇಶಕ ಗುರುಪ್ರಸಾದ್, ಸಂಸ್ಥೆಯ ಮುಖ್ಯಸ್ಥ ಕೆ.ವಿ. ಸತೀಶ್, ನಿರ್ದೇಶಕಿ ಆಶಾ ಸತೀಶ್, ಕಾರ್ಯಕಾರಿ ನಿರ್ದೇಶಕ ಎಸ್.ಪಿ.ದಯಾನಂದ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>