<p><strong>ಚಿತ್ರದುರ್ಗ: </strong>ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಜನಪದ ತಜ್ಞರಿಗೆ ಮತ್ತು ಕಲಾವಿದರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಭರವಸೆ ನೀಡಿದರು.<br /> <br /> ಶನಿವಾರ ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2011ನೇ ಸಾಲಿನ ನೀಡುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ತಜ್ಞರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ರೂ.10ರಿಂದ 20 ಸಾವಿರಕ್ಕೆ ಹೆಚ್ಚಿಸಲಾಗುವುದು. ಅದೇ ರೀತಿಯಲ್ಲಿ ಕಲಾವಿದರಿಗೆ ಪ್ರಸ್ತುತ ನೀಡುತ್ತಿರುವ ರೂ. 5 ಸಾವಿರ ಮೊತ್ತವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.<br /> <br /> ಅಕಾಡೆಮಿ ಅಧ್ಯಕ್ಷರಿಗೆ ಪ್ರವಾಸ ಭತ್ಯೆಯನ್ನು 10 ಸಾವಿರ ರೂಪಾಯಿ ನೀಡಲಾಗುವುದು. ಜತೆಗೆ, ಇನ್ನೂ 2,500 ಕಲಾವಿದರಿಗೆ ಮಾಸಾಶನ ನೀಡಲಾಗುವುದು. ಕಲಾವಿದರಿಗಾಗಿ ರೂಪಿಸಿರುವ ಕ್ಷೇಮನಿಧಿಗೆ ಸರ್ಕಾರ ರೂ 25 ಲಕ್ಷ ನೀಡಲಿದೆ. ಜತೆಗೆ, ಅಕಾಡೆಮಿಗೆ 1 ಕೋಟಿ ನೀಡಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಮಾತನಾಡಿದರು.ಸಂಸದ ಜನಾರ್ದನಸ್ವಾಮಿ, ಶಾಸಕ ಎಸ್.ಕೆ. ಬಸವರಾಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ. ಬಸವರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ಜನಪದ ತಜ್ಞರಿಗೆ ಮತ್ತು ಕಲಾವಿದರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಭರವಸೆ ನೀಡಿದರು.<br /> <br /> ಶನಿವಾರ ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2011ನೇ ಸಾಲಿನ ನೀಡುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಜಾನಪದ ತಜ್ಞರಿಗೆ ನೀಡುವ ಪ್ರಶಸ್ತಿ ಮೊತ್ತವನ್ನು ರೂ.10ರಿಂದ 20 ಸಾವಿರಕ್ಕೆ ಹೆಚ್ಚಿಸಲಾಗುವುದು. ಅದೇ ರೀತಿಯಲ್ಲಿ ಕಲಾವಿದರಿಗೆ ಪ್ರಸ್ತುತ ನೀಡುತ್ತಿರುವ ರೂ. 5 ಸಾವಿರ ಮೊತ್ತವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.<br /> <br /> ಅಕಾಡೆಮಿ ಅಧ್ಯಕ್ಷರಿಗೆ ಪ್ರವಾಸ ಭತ್ಯೆಯನ್ನು 10 ಸಾವಿರ ರೂಪಾಯಿ ನೀಡಲಾಗುವುದು. ಜತೆಗೆ, ಇನ್ನೂ 2,500 ಕಲಾವಿದರಿಗೆ ಮಾಸಾಶನ ನೀಡಲಾಗುವುದು. ಕಲಾವಿದರಿಗಾಗಿ ರೂಪಿಸಿರುವ ಕ್ಷೇಮನಿಧಿಗೆ ಸರ್ಕಾರ ರೂ 25 ಲಕ್ಷ ನೀಡಲಿದೆ. ಜತೆಗೆ, ಅಕಾಡೆಮಿಗೆ 1 ಕೋಟಿ ನೀಡಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.<br /> <br /> ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು. ಚನ್ನಬಸಪ್ಪ ಮಾತನಾಡಿದರು.ಸಂಸದ ಜನಾರ್ದನಸ್ವಾಮಿ, ಶಾಸಕ ಎಸ್.ಕೆ. ಬಸವರಾಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬಿ. ಬಸವರಾಜು ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>