<p>ಕಾರವಾರ: ಕೈಗಾರಿಕೆ ಇಲಾಖೆ ಆಶ್ರಯದಲ್ಲಿ ನಗರದ ರವೀಂದ್ರನಾಥ ಕಡಲತೀರದಲ್ಲಿ ಏ. 25ರಿಂದ ಮೇ 4ರ ವರೆಗೆ ಕಲಾ ವೈಭವ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದರು. <br /> <br /> ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವುದು ಮತ್ತು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದು ಕಲಾ ವೈಭವದ ಮುಖ್ಯ ಉದ್ದೇಶವಾಗಿದೆ ಎಂದರು. <br /> <br /> ಕಡಲತೀರದಲ್ಲಿ ಅಂದಾಜು 100 ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕೈಗಾರಿಕೋದ್ಯಮಿಗಳಿಗೆ ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು. ಬೇರೆಯವರಿಗೆ ಮಳಿಗೆಯೊಂದಕ್ಕೆ ರೂ. 2500 ದರ ನಿಗದಿಪಡಿಸಲಾಗಿದೆ ಎಂದರು.<br /> <br /> ಕಲಾ ವೈಭವದಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ಸಣ್ಣ ಕೈಗಾರಿಕೆಗಳು ಮತ್ತು ಸ್ವ ಸಹಾಯ ಸಂಘಗಳು ಹಾಗೂ ನೆರೆಯ ಜಿಲ್ಲೆಯವರು ಸಹ ಭಾಗವಹಿಸಿ ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ. <br /> <br /> ನಗರಸಭಾ ಅಧ್ಯಕ್ಷ ಗಣಪತಿ ಉಳ್ವೇಕರ್ ಪರಿಸರ ಸ್ನೇಹಿ ಬ್ಯಾಗ್ ಮತ್ತು ಪೋಸ್ಟರ್ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರ. ಅಪರ ಜಿಲ್ಲಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಕೈಪಿಡಿ ಬಿಡುಗಡೆ ಮಾಡಿದರು. <br /> <br /> ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೆಶಕ ಗೋಪಾಲಕೃಷ್ಣ ಬೇಕಲ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. <br /> <br /> ಏ.25ರಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಾ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಬೆಕಲ್ ತಿಳಿಸಿದರು.<br /> <br /> ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ವಿ.ಬಿ.ಗಾಂವ್ಕರ್ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಕೈಗಾರಿಕೆ ಇಲಾಖೆ ಆಶ್ರಯದಲ್ಲಿ ನಗರದ ರವೀಂದ್ರನಾಥ ಕಡಲತೀರದಲ್ಲಿ ಏ. 25ರಿಂದ ಮೇ 4ರ ವರೆಗೆ ಕಲಾ ವೈಭವ ಕಾರ್ಯಕ್ರಮ ಸಂಘಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ತಿಳಿಸಿದರು. <br /> <br /> ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸುವುದು ಮತ್ತು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡುವುದು ಕಲಾ ವೈಭವದ ಮುಖ್ಯ ಉದ್ದೇಶವಾಗಿದೆ ಎಂದರು. <br /> <br /> ಕಡಲತೀರದಲ್ಲಿ ಅಂದಾಜು 100 ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕೈಗಾರಿಕೋದ್ಯಮಿಗಳಿಗೆ ಮಳಿಗೆಗಳನ್ನು ಉಚಿತವಾಗಿ ನೀಡಲಾಗುವುದು. ಬೇರೆಯವರಿಗೆ ಮಳಿಗೆಯೊಂದಕ್ಕೆ ರೂ. 2500 ದರ ನಿಗದಿಪಡಿಸಲಾಗಿದೆ ಎಂದರು.<br /> <br /> ಕಲಾ ವೈಭವದಲ್ಲಿ ಪ್ರತಿದಿನ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಜಿಲ್ಲೆಯ ಸಣ್ಣ ಕೈಗಾರಿಕೆಗಳು ಮತ್ತು ಸ್ವ ಸಹಾಯ ಸಂಘಗಳು ಹಾಗೂ ನೆರೆಯ ಜಿಲ್ಲೆಯವರು ಸಹ ಭಾಗವಹಿಸಿ ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ. <br /> <br /> ನಗರಸಭಾ ಅಧ್ಯಕ್ಷ ಗಣಪತಿ ಉಳ್ವೇಕರ್ ಪರಿಸರ ಸ್ನೇಹಿ ಬ್ಯಾಗ್ ಮತ್ತು ಪೋಸ್ಟರ್ಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರ. ಅಪರ ಜಿಲ್ಲಾಧಿಕಾರಿ ಡಾ. ಕೆ.ಎಚ್. ನರಸಿಂಹಮೂರ್ತಿ ಕೈಪಿಡಿ ಬಿಡುಗಡೆ ಮಾಡಿದರು. <br /> <br /> ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೆಶಕ ಗೋಪಾಲಕೃಷ್ಣ ಬೇಕಲ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. <br /> <br /> ಏ.25ರಂದು ಜಿಲ್ಲಾ ಉಸ್ತುವಾರಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಾ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಬೆಕಲ್ ತಿಳಿಸಿದರು.<br /> <br /> ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ವಿ.ಬಿ.ಗಾಂವ್ಕರ್ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>